ವಾಸ್ತವ ಕನಸು ಕಾಣಿ: ಡಾ|ಹೆಗ್ಗಡೆ
Team Udayavani, Jun 29, 2019, 11:32 AM IST
ಧಾರವಾಡ: ಗಾಂಧಿನಗರದ ರುಡ್ಸೆಟ್ ಸಂಸ್ಥೆಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಧಾರವಾಡ: ಪ್ರತಿಯೊಬ್ಬರಿಗೂ ಕನಸುಗಳಿರಬೇಕು ಆದರೆ ಆ ಕನಸುಗಳು ವಾಸ್ತವವಾಗಿರಬೇಕು ಎಂದು ರುಡ್ಸೆಟ್ ಸಂಸ್ಥೆ ಅಧ್ಯಕ್ಷರಾದ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.
ಇಲ್ಲಿಯ ಗಾಂಧಿನಗರದ ರುಡ್ಸೆಟ್ ಸಂಸ್ಥೆಕ್ಕೆ ಭೇಟಿ ನೀಡಿ ಬ್ಯೂಟಿ ಪಾರ್ಲರ್, ಮಹಿಳಾ ವಸ್ತ್ರ ವಿನ್ಯಾಸ, ಕಂಪ್ಯೂಟರ್ ಡಿಟಿಪಿ ಸಮುದಾಯ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನೀವು ನಿಮ್ಮಲ್ಲಿರುವ ಶಕ್ತಿಯನ್ನು ಗುರುತಿಸಿಕೊಂಡು ಗುರಿ ತಲುಪಬೇಕು ಎಂದು ಸಲಹೆ ನೀಡಿದರು.
ಉದ್ಯಮದಲ್ಲಿ ಯಶಸ್ಸು ಕಾಣಬೇಕಾದರೆ ಉತ್ತಮ ಗ್ರಾಹಕರ ಸೇವೆ, ವ್ಯವಹಾರದಲ್ಲಿ ಗುಣಮಟ್ಟ, ಸಮಯ ನಿರ್ವಹಣೆ, ಆತ್ಮವಿಶ್ವಾಸ ಬಹಳ ಮುಖ್ಯ. ರುಡ್ಸೆಟ್ ಸಂಸ್ಥೆ ಒಳ್ಳೆಯ ರೀತಿಯಲ್ಲಿ ತರಬೇತಿ ನೀಡುತ್ತಿದೆ. ಅದನ್ನು ಸರಿಯಾಗಿ ಉಪಯೋಗಿಸಿಕೊಂಡು ಉದ್ಯಮದಾರರಾಗಿರೆಂದು ಸಲಹೆ ನೀಡಿದರು.
ಎಸ್ಡಿಎಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಜೀವನಧರಕುಮಾರ, ಕುಮಾರ ಎಮ್, ಪ್ರೀತಿ ತಬಜ್, ಗೌರಿ ಕೋರಿಶೆಟ್ಟರ ಹಾಗೂ ಸಿಬ್ಬಂದಿ ವರ್ಗದವರು ಇದ್ದರು. ಸಂಸ್ಥೆಯ ನಿರ್ದೇಶಕ ರಾಜೇಂದ್ರ ಕಗ್ಗೋಡಿ ಸ್ವಾಗತಿಸಿದರು. ಜಗದೀಶ ಪೂಜಾರ, ಚನ್ನಪ್ಪ ದೇವಗಿರಿ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ
ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ
Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!
MUST WATCH
ಹೊಸ ಸೇರ್ಪಡೆ
Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
IPL 2024; ಲಕ್ನೋ, ಹೈದ್ರಾಬಾದ್ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ
ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ
ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ