![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಸೋರುತಿಹುದು ಸರ್ಕಾರಿ ಶಾಲೆ
Team Udayavani, Jul 8, 2018, 5:25 PM IST
![8-july-27.jpg](https://www.udayavani.com/wp-content/uploads/2018/07/8/8-july-27.jpg)
ಅಂಕೋಲಾ: ಮಳೆ ಬಂತೆಂದರೆ ಸೋರುವ ಮೇಲ್ಛಾವಣಿ. ನೀರಿನ ತೇವಾಂಶಕ್ಕೆ ವಿದ್ಯುತ್ ಪ್ರವಹಿಸುವ ಗೋಡೆಗಳು. ನೀರಿನಲ್ಲೇ ಕುಳಿತು ಪಾಠ ಕೇಳುವ ಮಕ್ಕಳು. ಇದು ಪುರಲಕ್ಕಿಬೇಣ ಸರಕಾರಿ ಶಾಲೆ ದುಸ್ಥಿತಿ. ಶಾಲೆಯಲ್ಲಿ 1ನೇ ತರಗತಿಯಿಂದ 7ನೇ ತರಗತಿಯವರೆಗೆ ಸುಮಾರು 43 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಈ ಭಾಗದ ಶೇ. 90ರಷ್ಟು ವಿದ್ಯಾರ್ಥಿಗಳು ಪರಿಶಿಷ್ಟ ಜಾತಿ
ಸೇರಿದವರಾಗಿದ್ದು, ಪಾಲಕರು ದಿನಗೂಲಿ ಮಾಡಿ ಮಕ್ಕಳನ್ನು ಓದಿಸುತಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ಈ ಶಾಲೆ ಮೇಲ್ಛಾವಣಿ ಮಳೆಗಾಲದಲ್ಲಿ ಸಂಪೂರ್ಣ ಸೋರುತ್ತಿದೆ. ನೀರು ಕೊಠಡಿಯೊಳಗೆ ನುಗ್ಗುತ್ತಿದ್ದು, ಗೋಡೆಗಳು ನೀರಿನಿಂದ ತೋಯ್ದು ವಿದ್ಯುತ್ ಪ್ರವಹಿಸುತ್ತಿವೆ. ಹೀಗಾಗಿ ಕೆಲವೊಮ್ಮೆ ವಿದ್ಯುತ್ ಸಂಪರ್ಕ ಕಡಿತ ಮಾಡಿ ಪಾಠ ಮಾಡಲಾಗುತ್ತಿದೆ. ಕಟ್ಟಡ ಶಿಥಿಲಾವಸ್ಥೆಗೆ ತಲುಪಿದ್ದು, ಪ್ರಾಣ ಭಯದಲ್ಲಿ ಮಕ್ಕಳು ಪಾಠ ಕೇಳುವಂತಾಗಿದೆ.
ಈ ಕೊಠಡಿ ದುರವಸ್ಥೆ ಕುರಿತು ಮೇಲಾಧಿಕಾರಿಗಳಿಗೂ ಮತ್ತು ಜನಪ್ರತಿನಿಧಿಗಳಿಗೂ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಮಳೆ ಬಂತೆಂದರೆ ಈ ಕಟ್ಟಡದ ಕೊಠಡಿಯಲ್ಲಿ ನೀರು ತುಂಬುತ್ತದೆ. ನೀರಿನಲ್ಲಿಯೇ ಮಕ್ಕಳಿಗೆ ಪಾಠ ಮಾಡುವ ಅನಿವಾರ್ಯತೆ
ಇಲ್ಲಿದೆ.
ಕೊಠಡಿ ದುಸ್ಥಿತಿ ಬಗ್ಗೆ ಮೇಲಾಧಿಕಾರಿಗಳಿಗೆ ಅನೇಕ ಬಾರಿ ತಿಳಿಸಿದ್ದೇವೆ. ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೂ ತರಲಾಗಿದೆ. ಆದರೆ
ಯಾರೊಬ್ಬರೂ ಶಾಲೆ ಕೊಠಡಿ ದುರಸ್ತಿ ಮಾಡಲು ಮುತುವರ್ಜಿವಹಿಸಿಲ್ಲ. ಇಂತಹ ಕೊಠಡಿಯಲ್ಲಿಯೇ 6 ಮತ್ತು 7ನೇ ತರಗತಿ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ.
ರಫೀಕ್ ಶೇಖ್, ಶಾಲಾ ಮುಖ್ಯಾಧ್ಯಾಪಕ
ಈ ಶಾಲೆಗೆ ಬರುವ ಎಲ್ಲ ವಿದ್ಯಾರ್ಥಿಗಳ ಪಾಲಕ, ಪೋಷಕರು ದಿನಗೂಲಿ ಮಾಡುತ್ತಿದ್ದಾರೆ. ಸಂಬಂಧಿಸಿದವರು ಶಾಲೆ ದುಸ್ಥಿತಿ ಕುರಿತು ನಿರ್ಲಕ್ಷ್ಯ ವಹಿಸಿದ್ದಾರೆ. ಇನ್ನಾದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು. ಶಾಲಾ ಮಕ್ಕಳ ಸೌಲಭ್ಯ
ಒದಗಿಸಬೇಕು.
ಪ್ರಭಾಕರ ಆಗೇರ, ಎಸ್ಡಿಎಂಸಿ ಅಧ್ಯಕ್ಷ
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.