ಸ್ವಯಂಚಾಲಿತ ಮಾಸ್ಕ್ ಮಾರಾಟ ಯಂತ್ರಕ್ಕೆ ಚಾಲನೆ

ಪ್ರಾಯೋಗಿಕವಾಗಿ ಹನೆ °ರಡು ಯಂತ್ರಗಳ ಅಳವಡಿಕೆ­ 2 ರೂ. ನಾಣ್ಯ ಹಾಕಿದರೆ 3 ಲೇಯರ್‌ ಮಾಸ್ಕ್ ಕೈಗೆ

Team Udayavani, Jun 14, 2021, 4:31 PM IST

13hub-35

ಹುಬ್ಬಳ್ಳಿ: ಜನನಿಬಿಡ ಪ್ರದೇಶಗಳಲ್ಲಿ ಮಾಸ್ಕ್ ಸುಲಭವಾಗಿ ದೊರೆಯುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಹಾಗೂ ಯಂಗ್‌ ಇಂಡಿಯಾ ಸಹಯೋಗದಲ್ಲಿ ಸ್ವಯಂ ಚಾಲಿತ ಮಾಸ್ಕ್ ಮಾರಾಟ ಯಂತ್ರ ಅಳವಡಿಕೆಗೆ ಮುಂದಾಗಿದ್ದು, ಪ್ರಾಯೋಗಿಕವಾಗಿ 12 ಯಂತ್ರಗಳಿಗೆ ಚಾಲನೆ ನೀಡಲಾಯಿತು.

ರವಿವಾರ ಇಲ್ಲಿನ ಮಹಾನಗರ ಪಾಲಿಕೆ ಆವರಣದಲ್ಲಿ 12 ಯಂತ್ರಗಳಿಗೆ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ ಚಾಲನೆ ನೀಡಿದರು. ಪಾಲಿಕೆ ಹಾಗೂ ಯಂಗ್‌ ಇಂಡಿಯಾ ಸಹಯೋಗದಲ್ಲಿ ರಾಜ್ಯದಲ್ಲಿ ಮೊದಲ ಬಾರಿಗೆ ಈ ಯಂತ್ರಗಳನ್ನು ಅಳವಡಿಸಲಾಗುತ್ತಿದೆ. 2 ರೂ. ಬಿಲ್ಲೆ ಹಾಕಿದರೆ ಮೂರು ಲೇಯರ್‌ ಉಳ್ಳ ಸರ್ಜಿಕಲ್‌ ಮಾಸ್ಕ್ ದೊರಯಲಿದೆ. ಒಂದು ಯಂತ್ರದಲ್ಲಿ 100 ಮಾಸ್ಕ್ ಸಂಗ್ರಹಿಸಬಹುದಾಗಿದೆ.

ಆರಂಭದಲ್ಲಿ 12 ಯಂತ್ರಗಳನ್ನು ಕಿಮ್ಸ್‌, ಜಿಲ್ಲಾಧಿಕಾರಿ ಕಚೇರಿ, ಪಾಲಿಕೆ ಕಚೇರಿ, ರೈಲ್ವೆ ನಿಲ್ದಾಣ, ಬಸ್‌ ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶದಲ್ಲಿ ಅಳವಡಿಸಲು ಉದ್ದೇಶಿಸಲಾಗಿದೆ. ಜನರ ಬೇಡಿಕೆ ಆಧರಿಸಿ ಇನ್ನಷ್ಟು ಯಂತ್ರಗಳನ್ನು ಅಳವಡಿಸುವ ಗುರಿಯಿದೆ. ಮುಂದಿನ ಆರು ತಿಂಗಳು ಯಂಗ್‌ ಇಂಡಿಯಾ ಇವುಗಳನ್ನು ನಿರ್ವಹಣೆ ಮಾಡಲಿದ್ದು, ನಂತರ ಪಾಲಿಕೆಯ ಜವಬ್ದಾರಿಯಾಗಿರುತ್ತದೆ. ಮಹಾನಗರ ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ ಮಾತನಾಡಿ, ಜನರಿಗೆ ಮಾಸ್ಕ್ ಅಗತ್ಯವಾಗಿರುವುದರಿಂದ ಇಂತಹ ಯಂತ್ರಗಳ ಅಳವಡಿಕೆಗೆ ಯಂಗ್‌ ಇಂಡಿಯಾ ಸಂಸ್ಥೆಯ ಪ್ರಮುಖರೊಂದಿಗೆ ಚರ್ಚೆ ಮಾಡಲಾಗಿತ್ತು. ಅದರಂತೆ 12 ಯಂತ್ರ ನೀಡಿದ್ದು, ಇವುಗಳನ್ನು ಅವರೇ ನಿರ್ವಹಣೆ ಮಾಡಲಿದ್ದಾರೆ. ಮಾಸ್ಕ್ ಮರು ಸಂಗ್ರಹದಿಂದ ಹಿಡಿದು ಪ್ರತಿಯೊಂದು ಕಾರ್ಯ ನಿರ್ವಹಿಸಲಿದ್ದಾರೆ. ನಂತರ ಜನರ ಬೇಡಿಕೆ ನೋಡಿಕೊಂಡು ಹೆಚ್ಚಿಸುವ ಕೆಲಸ ಮಾಡಲಾಗುವುದು ಎಂದರು.

ಯಂಗ್‌ ಇಂಡಿಯಾ ಸಂಸ್ಥಾಪಕ ಚೇರ್ಮನ್‌ ಡಾ| ಶ್ರೀನಿವಾಸ ಜೋಶಿ ಮಾತನಾಡಿ, ಚೆನ್ನೈನಲ್ಲಿ ಈ ಯಂತ್ರಗಳು ಇರುವುದನ್ನು ಪಾಲಿಕೆ ಆಯುಕ್ತರು ತಿಳಿಸಿದ್ದರು. ಮುಂಬೈನಿಂದ ಒಂದು ಯಂತ್ರ ತರಿಸಿ ಒಂದಿಷ್ಟು ಮಾರ್ಪಾಡು ಮಾಡಲಾಗಿದೆ. ಈ ಯಂತ್ರಗಳು ರಾಜ್ಯದಲ್ಲಿ ಮೊದಲಾಗಿದ್ದು, ಇತರೆ ರಾಜ್ಯದಲ್ಲಿ 5 ರೂ.ಗೆ ಒಂದು ಮಾಸ್ಕ್ ಇದೆ. ಆದರೆ ಇಲ್ಲಿ 2 ರೂ. ಮಾಡಲಾಗಿದೆ. ಅಗರವಾಲ್‌ ಮೆಡಿಕಲ್‌ ಅವರೊಂದಿಗೆ ಮಾತನಾಡಿ ಕಡಿಮೆ ದರದಲ್ಲಿ ಮಾಸ್ಕ್ ಖರೀದಿಸಲಾಗುತ್ತಿದೆ. ಯಂತ್ರಗಳಿಗೆ ಮಾಸ್ಕ್ ತುಂಬುವ ಕೆಲಸಕ್ಕಾಗಿ ಪ್ರತ್ಯೇಕ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಯಂಗ್‌ ಇಂಡಿಯಾ ಚೇರ¾ನ್‌ ಸಚಿನ ತೆಂಗಿನಕಾಯಿ, ಕೋ ಚೇರ¾ನ್‌ ಡಾ| ಐಶ್ವರ್ಯ ಭಟ್ಟ ಇನ್ನಿತರರಿದ್ದರು.

ಕಿಮ್ಸ್‌, ಜಿಲ್ಲಾಧಿಕಾರಿ ಕಚೇರಿ, ಪಾಲಿಕೆ ಕಚೇರಿ, ರೈಲ್ವೆ ನಿಲ್ದಾಣ, ಬಸ್‌ ನಿಲ್ದಾಣ,

 

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.