ಸೂಚನಾ ಫ‌ಲಕವಿಲ್ಲದೆ ಚಾಲಕರ ಪರದಾಟ

•ದೇಸಾಯಿ ವೃತ್ತದಲ್ಲಿ ಕಾಮಗಾರಿ ಹಿನ್ನೆಲೆ ರಸ್ತೆ ಬಂದ್‌•ಸಿಲುಕಿಕೊಳ್ಳುತ್ತಿರುವ ಭಾರೀ ವಾಹನಗಳು

Team Udayavani, May 10, 2019, 11:48 AM IST

hubali-tdy-3..

ಹುಬ್ಬಳ್ಳಿ: ದೇಸಾಯಿ ವೃತ್ತದಲ್ಲಿ ನಡೆಯುತ್ತಿರುವ ಅಂಡರ್‌ಪಾಸ್‌-ಮೇಲ್ಸೆತುವೆ ಕಾಮಗಾರಿ.

ಹುಬ್ಬಳ್ಳಿ: ಇಲ್ಲಿನ ದೇಸಾಯಿ ವೃತ್ತದ ಬಳಿ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ವಾಹನ ಸಂಚಾರ ಸಂಪೂರ್ಣ ಬಂದ್‌ ಮಾಡಲಾಗಿದೆ. ಆದರೆ, ಹೊರ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಬರುವ ಭಾರಿ ವಾಹನಗಳ ಚಾಲಕರಿಗೆ ಸಮರ್ಪಕ ಮಾಹಿತಿ ಇಲ್ಲದೆ ಇದೇ ಮಾರ್ಗದಲ್ಲಿ ಸಂಚರಿಸಿ ನಂತರ ಪರದಾಡುವಂತಾಗಿದೆ.

ಒಂದು ವಾರದಿಂದ ಕೋರ್ಟ್‌ ವೃತ್ತದಿಂದ ಕೇಶ್ವಾಪುರ ಮಾರ್ಗವಾಗಿ ತೆರಳುವ ರಸ್ತೆ ಸಂಪೂರ್ಣ ಬಂದ್‌ ಮಾಡಲಾಗಿದೆ. ಆದರೆ ಈ ಮಾರ್ಗದಿಂದ ತೆರಳುವ ವಾಹನಗಳಿಗೆ ಈ ಭಾಗದಲ್ಲಿ ರಸ್ತೆ ಬಂದ್‌ ಆಗಿದೆ ಎಂದು ಒಂದೇ ಒಂದು ಫಲಕವಿಲ್ಲ. ಅದೂ ಅಲ್ಲದೇ ದ್ವಿಪಥದಲ್ಲಿ ಒಂದು ರಸ್ತೆ ಬಂದ್‌ ಮಾಡಿ, ಇನ್ನೊಂದು ರಸ್ತೆ ತೆರೆದು ಬಿಟ್ಟಿದ್ದು, ಆ ರಸ್ತೆಯ ಮೂಲಕ ಸಾಗುವ ವಾಹನಗಳು ಮುಂದೆ ದಾರಿ ಇಲ್ಲದೆ ಸಿಕ್ಕಿಹಾಕಿಕೊಳ್ಳುತ್ತಿವೆ. ಸೋಮವಾರ ರಾತ್ರಿ ಭಾರಿ ವಾಹನವೊಂದು ರಸ್ತೆ ಮಧ್ಯದಲ್ಲಿ ಸಿಕ್ಕಿಕೊಂಡಿತ್ತು. ಹಿಂಬದಿ ವಾಹನ ಚಲಾಯಿಸಲೂ ಆಗದೆ, ಮುಂದೆ ಸಾಗಲೂ ಆಗದೆ ರಸ್ತೆಯ ಮಧ್ಯದಲ್ಲಿ ಸಿಕ್ಕಿಕೊಂಡಿತ್ತು.

ಮಾರ್ಗಸೂಚಿ ಅವಶ್ಯ: ದೇಸಾಯಿ ವೃತ್ತದಲ್ಲಿ ಅಂಡರ್‌ಪಾಸ್‌ ನಿರ್ಮಾಣ ಮಾಡುವ ಕಾರಣಕ್ಕೆ ಕಳೆದ ಕೆಲವು ತಿಂಗಳಿಂದ ಕೇಶ್ವಾಪುರ ಮಾರ್ಗದಲ್ಲಿ ತೆರಳುವ ಭಾರಿ ವಾಹನಗಳನ್ನು ಬಂದ್‌ ಮಾಡಲಾಗಿತ್ತು. ಆದರೆ ಯಾವುದೇ ಮಾರ್ಗಸೂಚಿ ಇರಲಿಲ್ಲ. ಇದರಿಂದ ಸಾರಿಗೆ ಬಸ್‌ ಸೇರಿದಂತೆ ಹಲವು ವಾಹನಗಳು ಇದೇ ಮಾರ್ಗದಲ್ಲಿಯೇ ಸಾಗುತ್ತಿದ್ದವು. ಆದರೆ ಇದೀಗ ಸಂಪೂರ್ಣ ರಸ್ತೆ ಬಂದ್‌ ಮಾಡಲಾಗಿದೆ. ಆದರೆ ವಾಹನ ಚಾಲಕರು ಹೇಗೆ ತೆರಳಬೇಕು ಎನ್ನುವ ಒಂದೇ ಒಂದು ಫಲಕ ಹಾಕಲಾಗಿಲ್ಲ. ಸಂಬಂಧಿಸಿದ ಇಲಾಖೆಯವರು ಕೂಡಲೇ ವಾಹನ ಸಂಚಾರಕ್ಕೆ ಸೂಕ್ತ ಮಾರ್ಗಸೂಚಿ ಅಳವಡಿಡಿ ಆಗುತ್ತಿರುವ ತೊಂದರೆ ಸರಿಪಡಿಸಬೇಕು ಎಂಬುದು ವಾಹನ ಚಾಲಕರ ಅಳಲಾಗಿದೆ.

ದೇಸಾಯಿ ವೃತ್ತದಲ್ಲಿ ರಸ್ತೆ ಕಾಮಗಾರಿ ನಡೆಸುತ್ತಿದ್ದು, ಸ್ಥಳೀಯರಿಗೆ ತಿಳಿದಿದೆ. ಆದರೆ ಪರ ಊರುಗಳಿಂದ ಆಗಮಿಸುವ ವಾಹನ ಚಾಲಕರಿಗೆ ತಿಳಿಯದೇ ಸಮಸ್ಯೆ ಉಂಟಾಗುತ್ತಿದೆ. ಆದ್ದರಿಂದ ಚನ್ನಮ್ಮ ವೃತ್ತದಲ್ಲಿ ಹಾಗೂ ಕೋರ್ಟ್‌ ವೃತ್ತದಲ್ಲಿ ರಸ್ತೆ ಬಂದ್‌ ಮಾಡಿರುವ ಕುರಿತು ದೊಡ್ಡ ಫಲಕಗಳನ್ನು ಅಳವಡಿಸುವ ಮೂಲಕ ವಾಹನ ಚಾಲಕರಿಗೆ ತಿರುವು ಪಡೆದುಕೊಂಡು ತೆರಳಲು ಅವಕಾಶ ಕಲ್ಪಿಸಿಕೊಡಬೇಕು.-ಮಹ್ಮದ್‌ ಜುಬೇರ, ಲಾರಿ ಚಾಲಕ

ಚನ್ನಮ್ಮ ವೃತ್ತದಿಂದ ದೇಸಾಯಿ ವೃತ್ತದ ಮೂಲಕ 45 ದಿನಗಳ ವರೆಗೆ ಯಾವುದೇ ವಾಹನಗಳನ್ನು ಬಿಡುವುದಿಲ್ಲ. ಈಗಾಗಲೇ ಕ್ಲಬ್‌ ರಸ್ತೆ ಒಂದು ಭಾಗವನ್ನು ಬಂದ್‌ ಮಾಡಿದ್ದು, ಇನ್ನೊಂದು ಭಾಗವನ್ನು ಬಂದ್‌ ಮಾಡಿ ಯಾವುದೇ ದೊಡ್ಡ ವಾಹನಗಳನ್ನು ಬಿಡದಂತೆ ನೋಡಿಕೊಳ್ಳಲಾಗುವುದು. ಕೋರ್ಟ್‌ ವೃತ್ತದಲ್ಲಿ ಸಿಬ್ಬಂದಿ ನೇಮಿಸಿ ಮುಂಚಿತವಾಗಿ ವಾಹನ ಸವಾರರಿಗೆ ತಿಳಿಯುವಂತೆ ಮಾರ್ಗಸೂಚಿ ಅಳವಡಿಸಲಾಗುವುದು.-ಎಸ್‌.ಎಂ. ಸಂದಿಗವಾಡ, ಸಂಚಾರಿ ಎಸಿಪಿ

ಮೇ 12ರಂದು ಅಂಡರ್‌ಪಾಸ್‌ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಹೇಳಲಾಗುತ್ತಿದೆ. ಆದರೆ ಅದು ಕೂಡಾ ದೇಶಪಾಂಡೆ ನಗರ ಕಡೆಯಿಂದ ಆಗಮಿಸುವ ಹಾಗೂ ಪಿಂಟೋ ರಸ್ತೆಯಿಂದ ಆಗಮಿಸುವ ವಾಹನಗಳ ಸಂಚಾರಕ್ಕೆ ಮುಕ್ತವಾಗಲಿದೆ. ಇನ್ನುಳಿದಂತೆ ಕೇಶ್ವಾಪುರ ಮಾರ್ಗವಾಗಿ ಬಿಜಾಪುರ, ಬಾಗಲಕೋಟೆಗೆ ತೆರಳುವ ವಾಹನಗಳು ಗದಗ ರಸ್ತೆ ಅಂಡರ್‌ಪಾಸ್‌ ಮೂಲಕ ಹಾಯ್ದು ಕೇಶ್ವಾಪುರ ರಸ್ತೆ ಮೂಲಕ ತೆರಳುವುದು ಅನಿವಾರ್ಯವಾಗಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.