![rachana-rai](https://www.udayavani.com/wp-content/uploads/2024/06/rachana-rai-415x229.jpg)
Drugs Case; ಕಠಿಣ ಕ್ರಮ ಕೈಗೊಳ್ಳದಿದ್ದರೆ ಕರ್ನಾಟಕ ಪಂಜಾಬ್ ಅನ್ನು ಮೀರಿಸಲಿದೆ; ಜೋಶಿ
Team Udayavani, May 25, 2024, 8:13 PM IST
![Drugs Case; ಕಠಿಣ ಕ್ರಮ ಕೈಗೊಳ್ಳದಿದ್ದರೆ ಕರ್ನಾಟಕ ಪಂಜಾಬ್ ಅನ್ನು ಮೀರಿಸಲಿದೆ; ಜೋಶಿ](https://www.udayavani.com/wp-content/uploads/2024/05/Pralhad-Joshi-1-1-620x376.jpg)
ಹುಬ್ಬಳ್ಳಿ: ರಾಜ್ಯದಲ್ಲಿ ಡ್ರಗ್ಸ್, ಗಾಂಜಾ, ನಿಯಂತ್ರಣಕ್ಕೆ ತ್ವರಿತ ಮತ್ತು ಕಠಿಣ ಕ್ರಮ ಕೈಗೊಳ್ಳದೇ ಇದ್ದರೆ ಕರ್ನಾಟಕ ಪಂಜಾಬ್ ಅನ್ನು ಮೀರಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಎಚ್ಚರಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಹುಬ್ಬಳ್ಳಿ, ಬೆಂಗಳೂರು, ಮಂಗಳೂರು ಭಾಗದಲ್ಲಿ ಹೆಚ್ಚು ಡ್ರಗ್ಸ್ ಪ್ರಕರಣಗಳು ಬೆಳಕಿಗೆ ಬಂದಿರುವುದೇ ಇದಕ್ಕೆ ನಿದರ್ಶನ ಎಂದು ಹೇಳಿದರು.
ಡ್ರಗ್ಸ್ ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ತೀರಾ ಬೇಜವಾಬ್ದಾರಿ ತೋರುತ್ತಿದೆ. ಹೀಗಾಗಿ ಇಲ್ಲಿ ಡ್ರಗ್ ಮಾಫಿಯಾ ತಲೆ ಎತ್ತುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಡ್ರಗ್ಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ತ್ವರಿತವಾಗಿ, ಕಠಿಣ ಕ್ರಮ ಜರುಗಿಸಬೇಕು. ಇಲ್ಲದೇ ಹೋದರೆ ಬರುವ ದಿನಗಳಲ್ಲಿ ಕರ್ನಾಟಕ ಪಂಜಾಬ್ ಅನ್ನು ಮೀರಿಸಬಹುದು ಎಚ್ಚರ ವಹಿಸಿ ಎಂದು ಸರ್ಕಾರಕ್ಕೆ ಸಲಹೆ ನೀಡಿದರು.
ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾಕ್ಕೆ ಅವಕಾಶ ಬೇಡ. ಯುವ ಸಮೂಹ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳಬೇಕು ಎಂದು ಸಚಿವ ಜೋಶಿ ಆಗ್ರಹಿಸಿದರು.
ಟಾಪ್ ನ್ಯೂಸ್
![rachana-rai](https://www.udayavani.com/wp-content/uploads/2024/06/rachana-rai-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Bakrid 2024;](https://www.udayavani.com/wp-content/uploads/2024/06/edga-150x83.jpg)
Bakrid 2024; ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರಿಂದ ಸಾಮೂಹಿಕ ಪ್ರಾರ್ಥನೆ
![ಪ್ರಹ್ಲಾದ ಜೋಶಿ](https://www.udayavani.com/wp-content/uploads/2024/06/joshi-3-150x83.jpg)
Hubli: ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ
![Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ](https://www.udayavani.com/wp-content/uploads/2024/06/10-13-150x90.jpg)
Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ
![Hubli; ದರ್ಶನ್ ಅವರನ್ನು ರಾಯಭಾರಿಯಾಗಿ ನೇಮಿಸಿದ್ದು ಸರ್ಕಾರದ ತಪ್ಪು: ಪ್ರಹ್ಲಾದ ಜೋಶಿ](https://www.udayavani.com/wp-content/uploads/2024/06/joshi-2-150x83.jpg)
Hubli; ದರ್ಶನ್ ಅವರನ್ನು ರಾಯಭಾರಿಯಾಗಿ ನೇಮಿಸಿದ್ದು ಸರ್ಕಾರದ ತಪ್ಪು: ಪ್ರಹ್ಲಾದ ಜೋಶಿ
![Dharwad: ಗೋವು ರಕ್ಷಕರ ಮೇಲೆ ಮುಸ್ಲಿಂ ಯುಕರಿಂದ ಹಲ್ಲೆ… ಭಜರಂಗದಳ ಪ್ರತಿಭಟನೆ](https://www.udayavani.com/wp-content/uploads/2024/06/cow-1-150x88.jpg)
Dharwad: ಗೋವು ರಕ್ಷಕರ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ… ಭಜರಂಗದಳ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.