ರಸ್ತೆ ಮೇಲೆ ಹರಿದ ಕೊಳಚೆ ನೀರು;ವ್ಹೀಲ್ಚೇರ್ ಇರಿಸಿ ಪ್ರತಿಭಟನೆ
Team Udayavani, Jun 29, 2019, 11:23 AM IST
ಹುಬ್ಬಳ್ಳಿ: ಒಳಚರಂಡಿ ಕೊಳಚೆ ರಸ್ತೆ ಮೇಲೆ ಹರಿಯುತ್ತಿದ್ದರೂ ಕ್ರಮ ಕೈಗೊಳ್ಳದಿದ್ದರಿಂದ ತಿಮ್ಮಸಾಗರ ದೇವಸ್ಥಾನ ರಸ್ತೆಯಲ್ಲಿ ಡಾ| ಎಂ.ಸಿ.ಸಿಂಧೂರ ನೇತೃತ್ವದಲ್ಲಿ ನಿವಾಸಿಗಳು ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ: ಒಳಚರಂಡಿ ಕೊಳಚೆ ರಸ್ತೆ ಮೇಲೆ ಹರಿಯುತ್ತಿದ್ದರೂ ಕ್ರಮ ಕೈಗೊಳ್ಳದಿದ್ದರಿಂದ ತಿಮ್ಮಸಾಗರ ದೇವಸ್ಥಾನ ರಸ್ತೆಯಲ್ಲಿ ಡಾ| ಎಂ.ಸಿ.ಸಿಂಧೂರ ನೇತೃತ್ವದಲ್ಲಿ ನಿವಾಸಿಗಳು ಶುಕ್ರವಾರ ವ್ಹೀಲ್ ಚೇರ್ ಇರಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಕಳೆದ ಒಂದೂವರೆ ತಿಂಗಳಿಂದ ಒಳಚರಂಡಿ ತ್ಯಾಜ್ಯ ರಸ್ತೆ ಮೇಲೆ ಹರಿಯುತ್ತಿದೆ. ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ.
ಮಹಾನಗರ ಪಾಲಿಕೆಗೆ ಹಲವು ಬಾರಿ ಮನವಿ ಮಾಡಿದರೂ ಕ್ರಮ ಕೈಗೊಂಡಿಲ್ಲ. ಪೈಪ್ಗ್ಳು ಹಳೆಯದಾಗಿದ್ದು, ಅವುಗಳನ್ನು ಬದಲಿಸಬೇಕೆಂದು ಹೇಳುತ್ತಿದ್ದಾರೆ. ಕೂಡಲೇ ಪಾಲಿಕೆ ಕ್ರಮ ಕೈಗೊಳ್ಳಬೇಕೆಂದು ನಿವಾಸಿಗಳು ಒತ್ತಾಯಿಸಿದರು. ವಲಯ ಸಂಖ್ಯೆ 5 ಹಾಗೂ ವಲಯ ಸಂಖ್ಯೆ 9ರ ಮಧ್ಯೆ ಈ ರಸ್ತೆ ಬರುವುದರಿಂದ ರಸ್ತೆಯ ಜವಾಬ್ದಾರಿಯನ್ನು ಎರಡೂ ವಲಯದವರು ತೆಗೆದುಕೊಳ್ಳದೇ ಕಡೆಗಣಿಸಿದ್ದಾರೆಂದು ಆರೋಪಿಸಿದರು.
ಇಲ್ಲಿನ ನಿವಾಸಿಗಳು ಸಮರ್ಪಕವಾಗಿ ತೆರಿಗೆ ಪಾವತಿಸುತ್ತಿದ್ದರೂ ಬಡಾವಣೆಗೆ ಅಗತ್ಯ ಸೌಲಭ್ಯ ಕಲ್ಪಿಸುತ್ತಿಲ್ಲ. ಒಂದು ವೇಳೆ ಒಳಚರಂಡಿ ದುರಸ್ತಿ ಮಾಡದಿದ್ದರೆ ಮನೆ ತೆರಿಗೆ ತುಂಬದೇ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಅರ್ಜುನ ಪವಾರ, ತುಷಾರ ಪವಾರ, ಸೂರಜ್ ಕವಳಿ, ಮಂಜುಳಾ ಪವಾರ, ವೆಂಕಟೇಶ ನಾಯಕ, ಸಾವಿತ್ರಿ ನಾಯಕ, ನಾಗರತ್ನಾ ನವಲೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ