ಧೂಳುಮಯ ರಸ್ತೆ : ಬಾಯಿ ಬಡಿದುಕೊಂಡು ಪ್ರತಿಭಟನೆ
Team Udayavani, Nov 9, 2019, 10:47 AM IST
ಹುಬ್ಬಳ್ಳಿ: ನಗರದ ಧೂಳುಮಯ ರಸ್ತೆಗಳ ಅವ್ಯವಸ್ಥೆ ಖಂಡಿಸಿ ಹೂ ಬಳ್ಳಿ ನಾಗರಿಕರ ವೇದಿಕೆಯಿಂದ ಪಾಲಿಕೆ ಆಯುಕ್ತರ ಕಚೇರಿ ಮುಂಭಾಗದಲ್ಲಿ ಬಾಯಿ ಬಡಿದುಕೊಂಡು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಯಾವುದೇ ರಸ್ತೆಗಳಿಗೆ ಹೋದರೂ ಬರಿ ಧೂಳು ಹಾಗೂ ಗುಂಡಿಮಯವಾಗಿದೆ. ನಗರದ ಪ್ರಮುಖ ರಸ್ತೆಗಳಾದ ಕಿತ್ತೂರು ಚನ್ನಮ್ಮ ವೃತ್ತ, ಕೋರ್ಟ್ ವೃತ್ತ, ದೇಸಾಯಿ ವೃತ್ತ, ಲ್ಯಾಮಿಂಗ್ಟನ್ ರಸ್ತೆ, ಸ್ಟೇಶನ್ ರಸ್ತೆ, ಕೊಪ್ಪಿಕರ ರಸ್ತೆ, ದಾಜೀಬಾನ ಪೇಟೆ, ತುಳಜಾಭವಾನಿ ವೃತ್ತ, ಹಳೇ ಹುಬ್ಬಳ್ಳಿ ಭಾಗದ ಬಹುತೇಕ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿ ಹೋಗಿದ್ದು, ಅದಕ್ಕೆ ಹಾಕಿರುವ ವೆಟ್ಮಿಕ್ಸ್ ನಿಂದ ಇಡೀ ನಗರ ಧೂಳುಮಯವಾಗಿದೆ. ಸಾರ್ವಜನಿಕರು ವಿವಿಧ ರೋಗಗಳಿಗೆ ತುತ್ತಾಗುತ್ತಿದ್ದು, ಕೂಡಲೇ ಹುಬ್ಬಳ್ಳಿ ನಗರವನ್ನು ಧೂಳುಮುಕ್ತ ನಗರವನ್ನಾಗಿ ಮಾಡಲು ಪಾಲಿಕೆ ಮುಂದಾಗಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ರೇವಣಸಿದ್ದಪ್ಪ ಹುಬ್ಬಳ್ಳಿ, ಗಂಗಾಧರ ಗುಜಮಾಗಡಿ, ರವಿ ಶೆರೆವಾಡ, ಮೂರುಸಾವಿರಪ್ಪ ಮೆಣಸಿನಕಾಯಿ, ಇಂದಿರಾ ಚವ್ಹಾಣ, ರಮೇಶ, ಸಂಜೀವ ದುಮ್ಮಕ್ಕನಾಳ, ಮಹಾದೇವ ಹುಡೇದ, ವಿಶ್ವಾಸರಾವ್ ಜಾಧವ, ರೋಹಿದಾಸ ಪೋಳ, ಮಂಜುನಾಥ ವಡ್ಡಿ, ಸಾಗರ ಜಮಖಂಡಿ, ಶ್ರೀಕಾಂತ ಕಿತ್ತೂರ, ವಿಜಯ ಮಿಸ್ಕಿನ್, ಆನಂದ ಮಿಸ್ಕಿನ, ಮಂಜುನಾಥ ಗುಂಜಾಳ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ