ಕೌಟುಂಬಿಕ ಕಲಹ; ಚಿಕ್ಕಪ್ಪನಿಂದಲೇ ಯುವಕನ ಹತ್ಯೆ
ಧಾರವಾಡ ಮುರುಘಾ ಮಠ ಬಳಿ ಘಟನೆ | ಜಗಳ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯ |ಆರೋಪಿ ಪರಾರಿ
Team Udayavani, Feb 15, 2021, 5:29 PM IST
ಧಾರವಾಡ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಅಣ್ಣನ ಮಗನನ್ನು ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿದ ಘಟನೆ ಮುರುಘಾ ಮಠದ ಬಳಿ ರವಿವಾರ ನಡೆದಿದೆ.
ಆಕಾಶ್ ಕೋಟೂರು (26) ಕೊಲೆಯಾದವ. ಈತನ ಚಿಕ್ಕಪ್ಪ ಪ್ರಕಾಶ ಕೋಟೂರು ಕೊಲೆ ಮಾಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಕೌಟುಂಬಿಕ ಕಲಹದಿಂದ ಮನೆಯಲ್ಲಿ ಆಗಾಗ ಕಿರಿಕಿರಿ ಮಾಡುತ್ತಿದ್ದ ಆಕಾಶನು ರವಿವಾರವೂ ಮನೆಯಲ್ಲಿ ಜಗಳ ಮಾಡಿದ್ದಾನೆ. ಈ ಜಗಳ ವಿಕೋಪಕ್ಕೆ ತಿರುಗಿದ ಕಾರಣ ಚಿಕ್ಕಪ್ಪ ಪ್ರಕಾಶನು ಮನೆಯಲ್ಲಿದ್ದ ಮಾರಕಾಸ್ತ್ರದಿಂದ ಹೊಡೆದಿದ್ದಾನೆ. ಇದರಿಂದ ತೀವ್ರ ಗಾಯಗೊಂಡ ಆಕಾಶ ಮನೆಯಲ್ಲಿಯೇ ಮೃತಪಟ್ಟಿದ್ದಾನೆ.
ಘಟನೆ ಮಾಹಿತಿ ಪಡೆದ ಡಿಸಿಪಿ ಕೆ. ರಾಮರಾಜನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸದ್ಯ ಪ್ರಕಾಶ ಕೋಟೂರ ಪರಾರಿಯಾಗಿದ್ದು, ಶೋಧ ಕಾರ್ಯ ನಡೆದಿದೆ. ಕೊಲೆ ಹಿಂದೆ ಬೇರೆ ಏನಾದರೂ ಕಾರಣವಿದೆಯೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ ಎಂದು ಡಿಸಿಪಿ ಕೆ. ರಾಮರಾಜನ್ ತಿಳಿಸಿದ್ದಾರೆ. ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ