ದೆಹಲಿಯ ರೈತ ಹೋರಾಟಕ್ಕೆ ಬೆಂಬಲ  

ಅನಿರ್ದಿಷ್ಟ  ಸರಣಿ ಸತ್ಯಾಗ್ರಹ 11ನೇ ದಿನಕ್ಕೆ ! ­ಭಜನೆ ಪದ ಹಾಡಿ ಕೇಂದ್ರದ ವಿರುದ್ಧ ಆಕ್ರೋಶ

Team Udayavani, Feb 11, 2021, 12:56 PM IST

DWD protest

ಧಾರವಾಡ: ದೆಹಲಿಯಲ್ಲಿನ ರೈತ ಹೋರಾಟ ಬೆಂಬಲಿಸಿ ರೈತ ಹಿತರಕ್ಷಣಾ ಪರಿವಾರದ ವತಿಯಿಂದ ನಡೆದಿರುವ ಅನಿರ್ದಿಷ್ಟ ಸರಣಿ ಸತ್ಯಾಗ್ರಹ 11ನೇ ದಿನ ಪೂರೈಸಿದ್ದು, ಬುಧವಾರ ರೈತರು ಮೋದಿ ಸರಕಾರದ ವಿರುದ್ಧ ಭಜನೆ ಪದಗಳನ್ನು ಹಾಡಿ ಆಕ್ರೋಶ ಹೊರ ಹಾಕಿದರು.

ಮಾಳಪ್ಪ ಸುಣಗಾರ, ರಂಗಪ್ಪ ಭೋವಿ, ಬಸಪ್ಪ ದನದಮನಿ, ಫುಂಡಲಿಕಪ್ಪ ಕುರಿ, ಹನುಮಂತಪ್ಪ ಕಂಬಾರ, ಬಸವರಾಜ ಉಂಡೋಡಿ ಅವರ ಸಾರಥ್ಯದ ಅಮ್ಮಿನಬಾವಿಯ ಅನ್ನದಾತರ ಭಜನಾ ಮಂಡಳಿ ವತಿಯಿಂದ ಹಲವು ಗಂಟೆಗಳ ಕಾಲ ನಡೆದ ಭಜನಾ ಪದಗಳು ನೆರೆದವರ ಗಮನ ಸೆಳೆದವು. ಅದರಲ್ಲೂ ಸೀಮಿ ಇಲ್ಲದ ಭೂಮಿಯ ಮಾಡಿ, ನೇಗಿಲ ಇಲ್ಲದ ಜಮೀನ ಮಾಡಿ, ಮನಬಂದ ಕಾನೂನು ಮಾಡಿ ಎಂಬ  ಮೋದಿ ಸರಕಾರದ ನಡೆ, ನುಡಿಗಳ ಪದಗಳು ಎಲ್ಲರ ಗಮನ ಸೆಳೆದವು.

ಈ ವೇಳೆ ಮಾತನಾಡಿದ ರೈತ ಹಿತರಕ್ಷಣಾ ಪರಿವಾರದ ಸಂಚಾಲಕ ಪಿ.ಎಚ್‌. ನೀರಲಕೇರಿ, ಸರಕಾರ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿಗೆ ತರಬೇಕು. ಯಾವುದೇ ವ್ಯಾಪಾರಿ ಖರೀದಿ ನಿಯಮ ಉಲ್ಲಂಘಿಸಿದರೆ ಕನಿಷ್ಟ 7 ವರ್ಷ ಜೈಲು ಶಿಕ್ಷೆ ಹಾಗೂ 10 ಲಕ್ಷ ದಂಡ ವಿ ಧಿಸುವಂತಾಗಬೇಕೆಂದು ಆಗ್ರಹಿಸಿದರು.

ಜಿಲ್ಲೆಯಲ್ಲಿ ಗೋವಿನ ಜೋಳಕ್ಕೆ ಕಳೆದ ವರ್ಷದ ಸೆಪ್ಟಂಬರ್‌ ತಿಂಗಳಲ್ಲಿಯೇ 1850 ರೂ ಕನಿಷ್ಟ ಬೆಂಬಲ ಬೆಲೆ ನಿಗದಿ ಪಡಿಸಲಾಗಿದೆ. ಆದರೆ ಈವರೆಗೆ ನಾಲ್ಕು ತಿಂಗಳು ಕಳೆದರೂ ಒಂದು ಕೆ.ಜಿ ಕೂಡ ಖರೀದಿ ಆಗಿಲ್ಲ. ಜಿಲ್ಲೆಯಲ್ಲಿ ಒಂದೇ ಒಂದು ಖರೀದಿ ಕೇಂದ್ರಗಳು ಕಾರ್ಯಾರಂಭವಾಗಿಲ್ಲ. ಬದಲಿಗೆ 2 ಲಕ್ಷ ಟನ್‌ ಗೋವಿನ ಜೋಳ ಕೇವಲ 500- 600 ಮಧ್ಯವರ್ತಿಗಳ ಪಾಲಾಗಿದೆ ಎಂದು ದೂರಿದರು.

ಇದನ್ನೂ ಓದಿ :ಕುರುಬ ಸಮಾವೇಶಕ್ಕೆ ಬಂದ ಜನ ನೋಡಿದ ಸಿದ್ದರಾಮಯ್ಯಗೆ ಕಿರಿಕಿರಿಯಾಗಿದೆ: ಈಶ್ವರಪ್ಪ ವಾಗ್ದಾಳಿ

ದೆಹಲಿಯಲ್ಲಿ ರೈತ ಹೋರಾಟಗಾರ ರಾಕೇಶ್‌ ಸಿಂಗ್‌ ಟಿಕಾಯತ್‌ ಅವರು ಅಕ್ಟೋಬರ್‌ 2ರವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ಘೋಷಿಸಿದ್ದು, ಅಲ್ಲಿಯವರೆಗೆ ಸರಣಿ ಸತ್ಯಾಗ್ರಹ ಮುಂದುವರಿಸಲಾಗುವುದು ಎಂದರು.

ಅಬ್ದುಲ್‌ ಖಾನ್‌, ನರಹರಿ ಕಾಗಿನೆಲೆ, ಶ್ರೀಶೈಲಗೌಡ ಕಮತರ, ನಾಗರಾಜ ಕಿರಣಗಿ, ಸಲೀಂ ಸಂಗನಮುಲ್ಲಾ, ಲಕ್ಷ್ಮಣ ಬಕ್ಕಾಯಿ, ಸಿದ್ದಪ್ಪ ಕಳಸಣ್ಣವರ, ಸಚಿನ ಮುದರಡ್ಡಿ, ನವೀನ ಹೊಸಮನಿ, ಶಿವಾನಂದ ಬೂಬಣ್ಣವರ, ನಾರಾಯಣ ನಲವಡಿ ಸೇರಿದಂತೆ ಬಲ್ಲರವಾಡ, ಹೆಬಸೂರ ರೈತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.