ಸಂಸ್ಕೃತಿ ಉಳಿಸುವಲ್ಲಿ ಹಿರಿಯರ ಪಾತ್ರ ದೊಡ್ಡದು
Team Udayavani, Jul 27, 2018, 4:32 PM IST
ಧಾರವಾಡ: ಇಂದಿನ ಆಧುನಿಕ ಯುಗದಲ್ಲಿ ಸಂಸ್ಕೃತಿ ಉಳಿಸುವಲ್ಲಿ ಹಿರಿಯರ ಪಾತ್ರ ಬಹುದೊಡ್ಡದಾಗಿದ್ದು, ಅವರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ ಎಂದು ಕವಿವಿ ಕುಲಸಚಿವ ಡಾ| ಮಲ್ಲಿಕಾರ್ಜುನ ಪಾಟೀಲ ಹೇಳಿದರು. ನಗರದ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರ್ ಸಭಾಂಗಣದಲ್ಲಿ ನಡೆದ ಪ್ರೀಮಿಯರ್ ಸಿಟಿಜನ್ಸ್ ಕ್ಲಬ್ನ ಪ್ರಸಕ್ತ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.
ಧಾರವಾಡ ಒಂದು ಸಾಂಸ್ಕೃತಿಕ ನಗರ. ಕರ್ನಾಟಕದ ಸಾಂಸ್ಕೃತಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಇಲ್ಲಿನ ಸಾಧಕರ ಕೊಡುಗೆ ಅಪಾರ. ಈಗಿನ ನವಯುಗದಲ್ಲಿ ಸಂಸ್ಕೃತಿ, ನಾಗರಿಕತೆ ಉಳಿಸಿ ಬೆಳೆಸುವಲ್ಲಿ ಹಿರಿಯರು ಹೆಚ್ಚಿನ ಪಾತ್ರ ವಹಿಸಬೇಕು ಹಾಗೂ ಅದರ ಮಹತ್ವವನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಬೇಕು ಎಂದರು.
ಕ್ಲಬ್ನ ನೂತನ ಅಧ್ಯಕ್ಷ ಚಂದ್ರಹಾಸ ಅಂಗಡಿ ಮಾತನಾಡಿ, ಕಳೆದ 14 ವರ್ಷಗಳಿಂದ ನಡೆದುಕೊಂಡು ಬಂದ ಕ್ಲಬ್ನಲ್ಲಿ ಸಂಸ್ಕೃತಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವರ್ಷವೂ ನಿಶ್ಚಿತ ಕಾರ್ಯಕ್ರಮಗಳ ಜೊತೆಗೆ ಹೊಸ ಯೋಜನೆಗಳೊಂದಿಗೆ ಕ್ಲಬ್ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.
ಕ್ಲಬ್ನ ಹಿರಿಯ ಸದಸ್ಯ ಜಗದೀಶ ಕುಲಕರ್ಣಿ ಪ್ರಸಕ್ತ ಸಾಲಿನ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ನೂತನ ಅಧ್ಯಕ್ಷರಾಗಿ ಚಂದ್ರಹಾಸ ಅಂಗಡಿ, ಕಾರ್ಯದರ್ಶಿಯಾಗಿ ಸುದೀನ್ದ್ರ ಜಾಲಿಹಾಳ ಹಾಗೂ ಇತರ ಪದಾಧಿಕಾರಿಗಳು ಪ್ರಮಾಣವಚನ ಸ್ವೀಕರಿಸಿದರು. ಕ್ಲಬ್ನ ನಿಕಟಪೂರ್ವ ಅಧ್ಯಕ್ಷ ವಾಸುದೇವ ಕುಲಕರ್ಣಿ ಸ್ವಾಗತಿಸಿದರು. ಗುರುನಾಥ ಇನಾಮದಾರ ವರದಿ ವಾಚಿಸಿದರು. ಪ್ರಮೋದಿನಿ ವಾಜಪೇಯಿ ಪ್ರಾರ್ಥಿಸಿದರು. ಸುಧೀಂದ್ರ ಜಾಲಿಹಾಳ ವಂದಿಸಿದರು. ಸುನೀತಾ ಇನಾಮದಾರ ಹಾಗೂ ಸ್ನೇಹಾ ಕುಲಕರ್ಣಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
MUST WATCH
ಹೊಸ ಸೇರ್ಪಡೆ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್