ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Team Udayavani, May 7, 2024, 12:46 PM IST
ಧಾರವಾಡ: ಲೋಕಸಭಾ ಚುನಾವಣೆಯ ಮತದಾನದ ಹಿನ್ನೆಲೆಯಲ್ಲಿ ಧಾರವಾಡದ ಗಾಂಧಿನಗರ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾಗಿದ್ದ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸಲು ಬಂದಿದ್ದ ಮೇಲಿಮನಿ ಎಂಬುವವರು ಏಕಾಏಕಿ ತಲೆ ಸುತ್ತು ಬಂದು ಕುಸಿದು ಬಿದ್ದ ಪ್ರಸಂಗ ನಡೆದಿದೆ.
ಡಾ.ನಿತಿನ್ಚಂದ್ರ ಹತ್ತಿಕಾಳ ಅವರು ಅದೇ ಮತಗಟ್ಟೆಗೆ ಮತ ಚಲಾಯಿಸಲು ಬಂದು ಸರತಿ ಸಾಲಿನಲ್ಲಿ ನಿಂತಿದ್ದರು. ಮೇಲಿನಮನಿ ಅವರು ತಲೆ ಸುತ್ತು ಬಂದು ಕುಸಿದು ಬಿದ್ದಿದ್ದನ್ನು ನೋಡಿ ಕೂಡಲೇ ಅವರ ನೆರವಿಗೆ ಧಾವಿಸಿದ ಡಾ.ನಿತಿನ್ಚಂದ್ರ ಅವರು ಮೇಲಿನಮನಿ ಅವರ ಬಿಪಿ, ಶುಗರ್ ಎಲ್ಲವನ್ನೂ ತಪಾಸಣೆ ನಡೆಸಿ, ಆರೈಕೆ ಮಾಡಿದ ನಂತರ ಅವರನ್ನು ಅಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಕಳುಹಿಸಿಕೊಟ್ಟರು. ಮೇಲಿನಮನಿ ಅವರ ಆರೈಕೆ ಮಾಡಿದ ನಂತರ ಡಾ.ಹತ್ತಿಕಾಳ ಅವರು ತಮ್ಮ ಹಕ್ಕು ಚಲಾಯಿಸಿದರು. ಇವರ ಈ ಕಾರ್ಯಕ್ಕೆ ಅಲ್ಲಿ ಸೇರಿದ್ದ ಮತದಾರರು ಮೆಚ್ಚುಗೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ
ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !
ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು
Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ
Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್ ವ್ಯವಹಾರ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು
Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ
Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ
Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ
Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು