ರೈಲ್ವೆ ಮಾರ್ಗ ವಿದ್ಯುದ್ದೀಕರಣ; ಪ್ರಾಯೋಗಿಕ ಸಂಚಾರ ಆರಂಭ
•ಬಳ್ಳಾರಿ-ತೋರಣಗಲ್ಲು ಮಧ್ಯೆ ಕಾಮಗಾರಿ ಪೂರ್ಣ
Team Udayavani, Jul 20, 2019, 2:55 PM IST
ಹುಬ್ಬಳ್ಳಿ: ವಿದ್ಯುದ್ದೀಕರಣಗೊಂಡ ರೈಲ್ವೆ ಮಾರ್ಗದಲ್ಲಿ ಪ್ರಾಯೋಗಿಕ ಸಂಚಾರಕ್ಕೆ ಚಾಲನೆ ನೀಡಲಾಯಿತು.
ಹುಬ್ಬಳ್ಳಿ: ಬಳ್ಳಾರಿ- ತೋರಣಗಲ್ಲು ರೈಲ್ವೆ ಮಾರ್ಗ ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಹದ್ದಿನಗುಂಡು- ತೋರಣಗಲ್ಲು ನಡುವೆ ಪ್ರಾಯೋಗಿಕ ರೈಲು ಸಂಚಾರ ಯಶಸ್ವಿಯಾಗಿ ನೆರವೇರಿತು.
ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ರಾಜೇಶ ಮೋಹನ ಪೂಜೆ ಸಲ್ಲಿಸಿ ಪ್ರಾಯೋಗಿಕ ಸಂಚಾರಕ್ಕೆ ಚಾಲನೆ ನೀಡಿದರು. 33 ಕಿಮೀ ಅಂತರದ ವಿದ್ಯುದ್ದೀಕರಣಗೊಂಡ ಮಾರ್ಗದಲ್ಲಿ ರೈಲು ಯಶಸ್ವಿಯಾಗಿ ಪ್ರಾಯೋಗಿಕ ಸಂಚಾರ ನಡೆಸಿತು. ಬಳ್ಳಾರಿ- ಹೊಸಪೇಟೆ- ತೋರಣಗಲ್ಲು- ರೆಂಜಿತಪುರ (92) ರೈಲು ಮಾರ್ಗವನ್ನು 139.34 ಕೋಟಿ ರೂ. ವೆಚ್ಚದಲ್ಲಿ ವಿದ್ಯುದ್ದೀಕರಣಗೊಳಿಸಲು ರೈಲ್ವೆ ಮಂಡಳಿ 2012-13ರಲ್ಲಿ ಮಂಜೂರು ಮಾಡಿತ್ತು. ಸುಮಾರು 69 ಕಿಮೀ ಉದ್ದದ ಬಳ್ಳಾರಿ- ಹೊಸಪೇಟೆ ಮಾರ್ಗದ ವಿದ್ಯುದ್ದೀಕರಣ ಬಹುತೇಕ ಪೂರ್ಣಗೊಂಡಿದ್ದು, ಬಾಕಿ ಉಳಿದಿರುವ ಒಂದಿಷ್ಟು ಕಾಮಗಾರಿ ಪ್ರಗತಿಯಲ್ಲಿದೆ.
ಪ್ರಸಕ್ತ ಆರ್ಥಿಕ ವರ್ಷದಲ್ಲಿ ತೋರಣಗಲ್ಲು- ಹೊಸಪೇಟೆ ಹಾಗೂ ಹೊಸಪೇಟೆ- ಗದಗ ಮಾರ್ಗವನ್ನು ವಿದ್ಯುದ್ದೀಕರಣ ಗೊಳಿಸಲು ಉದ್ದೇಶಿಸಲಾಗಿದೆ. ಇತರೆ ಮಾರ್ಗಗಳನ್ನು ವಿದ್ಯುದ್ದೀಕರಣ ಗೊಳಿಸುವುದರಿಂದ ಉತ್ತರ ಕರ್ನಾಟಕ ಭಾಗದಲ್ಲಿ ರೈಲ್ವೆ ಮಾರ್ಗ ಉತ್ತಮವಾಗಲಿದೆ. ಇಂಧನ ಉಳಿತಾಯ ಹಾಗೂ ಪರಿಸರದ ರಕ್ಷಣೆಯಾಗಲಿದೆ ಎಂದು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
Bhuvanam gaganam Teaser: ಭುವನಂ ಗಗನಂ ಟೀಸರ್ ಬಂತು