ಮಳೆನೀರು ಬಳಕೆಗೆ ಒತ್ತು ನೀಡಿ
•ನೀರಿನ ಸಂಕಷ್ಟ ಪರಿಹಾರಕ್ಕೆ ಸರ್ಕಾರದಿಂದ ಜಲಾಮೃತ ಯೋಜನೆ
Team Udayavani, Jul 30, 2019, 9:13 AM IST
ಧಾರವಾಡ: ವಾಲ್ಮಿಯಲ್ಲಿ ಜಲಾಮೃತ ಯೋಜನೆಯ ತಾಂತ್ರಿಕ ಕೈಪಿಡಿ ಸಿದ್ಧಪಡಿಸುವ ಕಾರ್ಯಾಗಾರವನ್ನು ಎಲ್.ಕೆ. ಅತೀಕ್ ಉದ್ಘಾಟಿಸಿದರು.
ಧಾರವಾಡ: ಕರ್ನಾಟಕದಲ್ಲಿ ಸೀಮಿತ ದಿನಗಳ ಅವಧಿಯಲ್ಲಿ ಮಳೆ ಆಗುತ್ತಿದ್ದು, ಅದನ್ನು ವರ್ಷವಿಡೀ ಬಳಸಲು ಅನುಕೂಲವಾಗುವಂತೆ ಜಲ ಸಂರಕ್ಷಣೆ ವಿಧಾನಗಳನ್ನು ಅಳವಡಿಸಿಕೊಳ್ಳಬೇಕಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್ ಹೇಳಿದರು.
ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ(ವಾಲ್ಮಿ)ಯಲ್ಲಿ ಜಲಾಮೃತ ಯೋಜನೆಯ ತಾಂತ್ರಿಕ ಕೈಪಿಡಿ ಸಿದ್ಧಪಡಿಸುವ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ದಶಕಗಳಿಂದ ಬರಗಾಲ ಹಾಗೂ ಸತತ ಜಲ ಸಂಕಷ್ಟದಿಂದ ರಾಜ್ಯ ಬಳಲುತ್ತಿದ್ದು, ಇದಕ್ಕೆ ಪರಿಹಾರವಾಗಿ 2019ನ್ನು ಜಲ ವರ್ಷ ಎಂದು ಸರಕಾರ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಲಾಮೃತ ಎಂಬ ಯೋಜನೆಯನ್ನು ಘೋಷಿಸಿ ಅನುಷ್ಠಾನಗೊಳಿಸುತ್ತಿದೆ. ಇಲ್ಲಿಯವರೆಗೆ ಜಲ ಸಂಕಷ್ಟವನ್ನು ಪರಿಹರಿಸುವ ಮಾತುಗಳೇ ಆಗಿವೆ. ಆದರೆ ಇದೀಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಜಲಾಮೃತ ಯೋಜನೆ ರೂಪದಲ್ಲಿ ಒಂದು ಪ್ರಕ್ರಿಯೆಯನ್ನು ಪ್ರಾರಂಭಿಸಿದೆ ಎಂದರು.
ಜಲ-ನೆಲ ಸಂರಕ್ಷಣೆಯಲ್ಲಿ ಲಭ್ಯವಿರುವ ವೈಜ್ಞಾನಿಕ ತಂತ್ರಜ್ಞಾನಗಳನ್ನು ಬಳಸಿಕೊಳ್ಳುವುದರ ಜೊತೆಗೆ ಸಮುದಾಯ ಸಹಭಾಗಿತ್ವದಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುವುದು. ಜಲಾಮೃತ ಕುರಿತಂತೆ ಸಮಾಜದ ವಿವಿಧ ಸಮುದಾಯಗಳ ಅವಶ್ಯಕತೆಗಳನ್ನು ಪೂರೈಸಲು ಕೆರೆಗಳ ಅಭಿವೃದ್ಧಿ, ಚೆಕ್ಡ್ಯಾಂ ನಿರ್ಮಾಣ, ಜಲ ಸಾಕ್ಷರತೆ, ಕುಡಿಯುವ ನೀರು, ಅರಣ್ಯೀಕರಣ ಮುಂತಾದ ವಿಷಯಗಳನ್ನು ಒಳಗೊಂಡು ತಾಂತ್ರಿಕ ಕೈಪಿಡಿ ತಯಾರಿಸುವುದು ಕಾರ್ಯಾಗಾರದ ಉದ್ದೇಶವಾಗಿದೆ ಎಂದು ತಿಳಿಸಿದರು.
ವಾಲ್ಮಿ ನಿರ್ದೇಶಕ ಡಾ| ರಾಜೇಂದ್ರ ಪೋದ್ದಾರ ಮಾತನಾಡಿ, ಜಲ ಸಂಕಷ್ಟ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ ಅದು ಕೇವಲ ಮಾಹಿತಿ ವಿನಿಮಯ ಹಾಗೂ ಚರ್ಚೆಯ ವಿಷಯವಾಗಿತ್ತು. ಇದೀಗ ಕರ್ನಾಟಕ ರಾಜ್ಯ ಸರ್ಕಾರವು ಜಲಾಮೃತ ಯೋಜನೆ ಮೂಲಕ ಒಂದು ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಜಲಾಮೃತ ಯೋಜನೆ ದೇಶಕ್ಕೆ ಮಾದರಿಯಾಗಲಿದೆ. ಯೋಜನೆಯು ಕೇವಲ ಸರ್ಕಾರದ ಯೋಜನೆಗಳಲ್ಲಿ ಒಂದಾಗಿರದೇ ಜನರನ್ನು ಒಳಗೊಂಡು ಕರ್ನಾಟಕದ ಜಲ ಸುಭದ್ರತೆಗೆ ನಾಂದಿಯಾಗಲಿದೆ ಎಂದರು.
ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ ಹಾಗೂ ಮಾಜಿ ಶಾಸಕ ಬಿ.ಆರ್. ಪಾಟೀಲ ಮಾತನಾಡಿದರು. ಜಿಪಂ ಸಿಇಒ ಬಿ.ಸಿ. ಸತೀಶ, ಮುಖ್ಯ ಎಂಜಿನಿಯರ್ ಪ್ರಕಾಶಕುಮಾರ ಸೇರಿದಂತೆ 25 ಜನ ವಿಷಯ ತಜ್ಞರು, ಗ್ರಾಪಂ ಅಧ್ಯಕ್ಷರು, ಮಹಿಳೆಯರು ಹಾಗೂ ವಾಲ್ಮಿ ಸಿಬ್ಬಂದಿ ಇದ್ದರು. ಆರ್.ಎಂ. ಭಟ್ ಸ್ವಾಗತಿಸಿದರು. ಮಹದೇವಗೌಡ ಹುತ್ತನಗೌಡರ ನಿರೂಪಿಸಿದರು. ಕೃಷ್ಣಾಜಿರಾವ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli ಅಪಾರ್ಟಮೆಂಟ್ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ
Hubli: ದಿಂಗಾಲೇಶ್ವರರು ಸ್ಪರ್ಧಿಸುತ್ತಿರುವ ಸಮಯ, ಜಾಗ ಸರಿಯಿಲ್ಲ: ಗುಣಧರನಂದಿ ಮಹಾರಾಜ
L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ
Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ
UPSC ಪರೀಕ್ಷೆಯಲ್ಲಿ 101ನೇ ರ್ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ
MUST WATCH
ಹೊಸ ಸೇರ್ಪಡೆ
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ