ನೌಕರರ ಮುಷ್ಕರ; ನೀರು ವ್ಯತ್ಯಯ ಸಾಧ್ಯತೆ

ಜಲಮಂಡಳಿಯಲ್ಲಿ 600ಕ್ಕೂ ಹೆಚ್ಚು ನೌಕರರು 20 ವರ್ಷದಿಂದ ನಿರಂತರ ಕೆಲಸ ಮಾಡುತ್ತಿದ್ದಾರೆ

Team Udayavani, Apr 26, 2022, 10:19 AM IST

5

ಧಾರವಾಡ: ಅವಳಿನಗರದಲ್ಲಿ ಜಲಮಂಡಳಿ ಅಧೀನದಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ, ಗುತ್ತಿಗೆ ಹಾಗೂ ಹಂಗಾಮಿ ನೌಕರರು ತಮ್ಮ ಬೇಡಿಕೆ ಈಡೇರಿಕೆಗಾಗಿ ಏ.26ರಿಂದ ಸಾಮೂಹಿಕವಾಗಿ ಕೆಲಸ ಬಹಿಷ್ಕರಿಸಿ ಪ್ರತಿಭಟನೆಗೆ ಮುಂದಾಗಿದ್ದು, ಅವಳಿನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಬಹುದು ಎಂದು ಸಂಘದ ಅಧ್ಯಕ್ಷ ವಿ.ಎನ್‌. ಹಳಕಟ್ಟಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹು-ಧಾ ಮಹಾನಗರ ನೀರು ಸರಬರಾಜು ನಿರ್ವಹಣೆಗಾಗಿ ಕರ್ನಾಟಕ ಜಲಮಂಡಳಿಯಿಂದ ಕಳೆದ 20 ವರ್ಷಗಳಿಂದಲೂ ಗುತ್ತಿಗೆ, ದಿನಗೂಲಿ ಹಂಗಾಮಿ ನೌಕರರನ್ನು ನೇಮಕ ಮಾಡಿಕೊಳ್ಳಲಾಗಿದೆ. ಆದರೆ ಈಗ ನೀರು ಸರಬರಾಜು ನಿರ್ವಹಣೆಯನ್ನು ಮೆ| ಎಲ್‌ ಆಂಡ್‌ ಟಿ ಕಂಪನಿಗೆ ಗುತ್ತಿಗೆ ವಹಿಸಿ, ಕೆಲಸಕ್ಕೆ ಹೊಸಬರನ್ನು ನೇಮಕ ಮಾಡಿಕೊಳ್ಳಲು ಅವಕಾಶ ಕೊಟ್ಟಿರುವುದು ಖಂಡನೀಯ. ಈ ಹಿನ್ನೆಲೆಯಲ್ಲಿ ಏ.26ರಿಂದ ಜಲಮಂಡಳಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದರು.

ಇದೀಗ ಜಲಮಂಡಳಿಯಲ್ಲಿ 600ಕ್ಕೂ ಹೆಚ್ಚು ನೌಕರರು 20 ವರ್ಷದಿಂದ ನಿರಂತರ ಕೆಲಸ ಮಾಡುತ್ತಿದ್ದಾರೆ. ಆದರೆ, ಪಾಲಿಕೆಯವರು ಕರ್ನಾಟಕ ಜಲಮಂಡಳಿಯವರಿಂದ ಪ್ರಸ್ತುತ ಕೆಲಸ ಮಾಡುತ್ತಿರುವ ಸಿಬ್ಬಂದಿಯನ್ನು ಸಾಮೂಹಿಕವಾಗಿ ವಜಾ ಮಾಡಿ, ಹೊಸಬರನ್ನು ನೇಮಕ ಮಾಡಿಕೊಂಡು ಕೆಲಸ ನಿರ್ವಹಿಸುವಂತೆ ಖಾಸಗಿ ಗುತ್ತಿಗೆದಾರ ಎಲ್‌ ಆಂಡ್‌ ಟಿ ಅವರಿಗೆ ಅನುಮತಿ ನೀಡಿ ಅನ್ಯಾಯ ಎಸಗಿದೆ ಎಂದು ದೂರಿದರು.

ಕರ್ನಾಟಕ ಜಲಮಂಡಳಿಯ ಹಂಗಾಮಿ, ಗುತ್ತಿಗೆ ಹಾಗೂ ದಿನಗೂಲಿ ನೌಕರರನ್ನು ಹು-ಧಾ ಮಹಾನಗರ ಪಾಲಿಕೆಯು ವರ್ಕ್‌ ಸಮೇತ ಹಸ್ತಾಂತರ ಮಾಡಿ ಆದೇಶ ಹೊರಡಿಸಬೇಕು. ಯೋಜನೆ ಪೂರ್ಣಗೊಳ್ಳುವವರೆಗೂ ನಿಯೋಜನೆ ಮೇರೆಗೆ ಎಲ್‌ಆಂಡ್‌ಟಿ ಅವರಲ್ಲಿ ಸೇವೆ ನಿರ್ವಹಿಸುವಂತೆ ಆದೇಶವನ್ನು ಮಹಾನಗರ ಪಾಲಿಕೆ ಮಾಡಬೇಕು. ಹೀಗಾದರೆ ಜಲಮಂಡಳಿ ನೌಕರರು ತಕ್ಷಣ ಕೆಲಸಕ್ಕೆ ಹಾಜರು ಆಗುತ್ತೇವೆ. ಇಲ್ಲವಾದರೆ ಧರಣಿ ನಿರಂತರ ಮುಂದುವರಿಯಲಿದೆ ಎಂದು ಎಚ್ಚರಿಸಿದರು.

ನೀರು ಸರಬರಾಜು ಇಂದಿನಿಂದ ಎಲ್‌ ಆ್ಯಂಡ್‌ ಟಿಗೆ ಹಸ್ತಾಂತರ:

ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯ ಒಟ್ಟು 82 ವಾರ್ಡ್‌ ಗಳಲ್ಲಿ ನೀರು ಸರಬರಾಜು ಕಾರ್ಯವನ್ನು ಜಲಮಂಡಳಿಯಿಂದ ಎಲ್‌ ಆ್ಯಂಡ್‌ ಟಿ ಕಂಪೆನಿಗೆ ಏ.26ರಿಂದ ಹಸ್ತಾಂತರಿಸಲಾಗುತ್ತಿದೆ. ಅವಳಿನಗರದಲ್ಲಿ ಇಲ್ಲಿಯವರೆಗೆ ಕರ್ನಾಟಕ ನಗರ ನೀರು ಸರಬರಾಜು-ಒಳಚರಂಡಿ ಮಂಡಳಿಯಿಂದ ನಿರ್ವಹಿಸಲಾಗುತ್ತಿತ್ತು. ಅವಳಿ ನಗರದ ಸಾರ್ವಜನಿಕರಿಗೆ ನೀರಿನ ಕೊರತೆಯಾಗದಂತೆ ಇನ್ನೂ ಹೆಚ್ಚಿನ ಸೌಲಭ್ಯವನ್ನು ಕಲ್ಪಿಸಲು 24/7 ಒತ್ತಡಪೂರಿತ ನಿರಂತರ ನೀರು ಸರಬರಾಜು ಯೋಜನೆಯನ್ನು ಜಾರಿಗೊಳಿಸಲು ಅನುಮೋದನೆಯಾಗಿ ಈಗಾಗಲೇ ಚೆನ್ನೈನ ಮೆ| ಎಲ್‌ ಆ್ಯಂಡ್‌ ಟಿ ಕಂಪೆನಿಗೆ ಕಾರ್ಯಾದೇಶ ನೀಡಲಾಗಿದೆ.

ಈ ಪ್ರಕ್ರಿಯೆ ಸುಗಮವಾಗಿ ಹಸ್ತಾಂತರವಾಗುವವರೆಗೆ ನೀರು ಸರಬರಾಜಿನಲ್ಲಿ ಅಡೆ ತಡೆಗಳು ಉಂಟಾದಲ್ಲಿ ಸಾರ್ವಜನಿಕರು ತಾಳ್ಮೆ ಕಳೆದುಕೊಳ್ಳದೆ ಸಹಕರಿಸಲು ಹಾಗೂ ನೀರು ಸರಬರಾಜಿಗೆ ಸಂಬಂಧಿಸಿದಂತೆ ದೂರುಗಳನ್ನು ಆಲಿಸಲು ಮೇ| ಎಲ್‌ ಆ್ಯಂಡ್‌ ಟಿ ಪ್ರತಿನಿಧಿ ಗೋವಿಂದರಾಜನ್‌ ಮೊ: 919488744344, ಅಭಿಜಿತ ದಾಸ ಮೊ: 917506518032 ಹಾಗೂ ವಿ.ಟಿ. ಗುಡಿ ಕಾರ್ಯ ನಿರ್ವಾಹಕ ಅಭಿಯಂತರು(ಹುಬ್ಬಳ್ಳಿ) ಮೊ: 91 9606098435/ 9606098401 ಹುಬ್ಬಳ್ಳಿ, ಕಾರ್ಯ ನಿರ್ವಾಹಕ ಅಭಿಯಂತರು(ಧಾರವಾಡ) ಮೊ: 91 9449846000 ಸಂಪರ್ಕಿಸಲು ಕೋರಲಾಗಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.