ಗ್ರಾಪಂಗಳಿಗೆ ಬಲ ತುಂಬಿದ್ದೇ ಕಾಂಗ್ರೆಸ್‌: ಲಾಡ್‌

ಕ್ಷೇತ್ರ ವ್ಯಾಪ್ತಿಯಾದ್ಯಂತ ಗ್ರಾಮೀಣ ಜನರ ಬದುಕನ್ನು ಹಸನುಗೊಳಿಸಲು ಶ್ರಮಿಸುತ್ತೇನೆ.

Team Udayavani, Dec 1, 2021, 5:10 PM IST

ಗ್ರಾಪಂಗಳಿಗೆ ಬಲ ತುಂಬಿದ್ದೇ ಕಾಂಗ್ರೆಸ್‌: ಲಾಡ್‌

ಕಲಘಟಗಿ: ಕಾಂಗ್ರೆಸ್‌ ಸರಕಾರ ಸದಾ ಗ್ರಾಮೀಣಾಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡುತ್ತಲಿದ್ದು, ಪಂಚಾಯತ್‌ ರಾಜ್‌ ವ್ಯವಸ್ಥೆಯ ಮೂಲಕ ಅಧಿಕಾರ ವಿಕೇಂದ್ರೀಕರಣಗೊಳಿಸಿ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಬಲ ತುಂಬಿದೆ ಎಂದು ಮಾಜಿ ಸಚಿವ ಸಂತೋಷ ಲಾಡ್‌ ಹೇಳಿದರು.

ವಿಧಾನ ಪರಿಷತ್‌ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಸಲೀಂ ಅಹ್ಮದ್‌ ಅವರ ಪರ ಜರುಗಿದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಹಿಂದಿನ ಕಾಂಗ್ರೆಸ್‌ ಸರಕಾರ ಗ್ರಾಪಂಗಳಿಗೆ ಹೆಚ್ಚಿನ ಅಧಿಕಾರ ದೊರಕುವಂತೆ ಮಾಡಿರುವುದರಿಂದಾಗಿ ಇಂದು ನೇರವಾಗಿ ದಿಲ್ಲಿಯಿಂದ ಗ್ರಾಪಂಗಳಿಗೆ ಅನುದಾನಗಳು ಹರಿದು ಬರುತ್ತಲಿವೆ. ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ತಾವೇ ಸ್ವತಃ ಕ್ರಿಯಾ ಯೋಜನೆಗಳನ್ನು ರಚಿಸಿ ತಮ್ಮ ಗ್ರಾಮಗಳ ಅಭಿವೃದ್ಧಿಗೆ ಮುಂದಾಗಲು ಕಾಂಗ್ರೆಸ್‌ ಸರಕಾರ ಅವಕಾಶ ಕಲ್ಪಿಸಿಕೊಟ್ಟಿದೆ. ಇದರ ಪರಿಣಾಮವಾಗಿ ಉದ್ಯೋಗ ಖಾತ್ರಿ ಯೋಜನೆಯೂ ಸೇರಿದಂತೆ ಹಲವಾರು
ಯೋಜನೆಗಳು ಗ್ರಾಮೀಣಾಭಿವೃದ್ಧಿಗೆ ಪೂರಕವಾಗಿವೆ. ವಿಧಾನ ಪರಿಷತ್‌ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಸಲೀಂ ಅಹ್ಮದ್‌ ಅವರನ್ನು ಪ್ರಥಮ ಪ್ರಾಶಸ್ತ್ಯದ ಮತಗಳಿಂದ ಗೆಲ್ಲಿಸಬೇಕು ಎಂದರು.

ಅಭ್ಯರ್ಥಿ ಸಲೀಂ ಅಹ್ಮದ್‌ ಮಾತನಾಡಿ, ಕ್ಷೇತ್ರ ವ್ಯಾಪ್ತಿಯಾದ್ಯಂತ ಗ್ರಾಮೀಣ ಜನರ ಬದುಕನ್ನು ಹಸನುಗೊಳಿಸಲು ಶ್ರಮಿಸುತ್ತೇನೆ. ಕಳೆದೆರಡು ಬಾರಿ ವಿಧಾನ ಪರಿಷತ್ತಿನ ಸದಸ್ಯರಾಗಿ ತಾವು ಮಾಡಿರುವ ಪ್ರಾಮಾಣಿಕ ಸೇವಾ ಕಾರ್ಯಗಳೇ ತಮಗೆ ಶ್ರೀರಕ್ಷೆಯಾಗಿದ್ದು, ಪ್ರಜ್ಞಾವಂತ ಮತದಾರರಾದ ತಾವೆಲ್ಲರೂ ಪ್ರಥಮ ಪ್ರಾಶಸ್ತ್ಯದ ಮತಗಳನ್ನು ನೀಡಿ ಆಶೀರ್ವದಿಸಬೇಕೆಂದು ಮನವಿ ಮಾಡಿದರು. ಶಾಸಕ ಶ್ರೀನಿವಾಸ ಮಾನೆ ಅವರು ಮಾತನಾಡಿ, ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಕೃಷಿಕರ ಬದುಕು ದುಸ್ಥರವಾಗಿದ್ದು, ರಾಜ್ಯ ಸರಕಾರ ಪರಿಹಾರ ಹಾಗೂ ನೆರವು ನೀಡುವಲ್ಲಿ ವಿಫಲವಾಗಿದೆ.

ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುತ್ತಿರುವ ಮೋದಿಯವರ ಕೇಂದ್ರ ಸರಕಾರವು ಬಡ ಹಾಗೂ ಮಧ್ಯಮ ವರ್ಗದ ಜನರ ನೆಮ್ಮದಿಯ ಬದುಕನ್ನು ಕಸಿದುಕೊಂಡಿದೆ. ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಲ್ಲಿ ಮತ ಕೇಳುವ ಹಕ್ಕನ್ನು ಬಿಜೆಪಿಯವರು ಕಳೆದುಕೊಂಡಂತಾಗಿದೆ ಎಂದು ಟೀಕಿಸಿದರು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅನಿಲಕುಮಾರ ಪಾಟೀಲ, ಐ.ಜಿ.ಸನದಿ, ಎಸ್‌.ಆರ್‌. ಪಾಟೀಲ, ಹನುಮಂತಪ್ಪ ಅಲ್ಕೊಡ, ಮಂಜುನಾಥಗೌಡ ಮುರಳ್ಳಿ, ಚಂದ್ರಶೇಖರ ಜುಟ್ಟಲ್‌, ಅಜಮತುಲ್ಲಾಖಾನ ಜಹಗಿರದಾರ, ಇಸ್ಮಾಯಿಲ್‌ ತಮಟಗಾರ, ಹರಿಶಂಕರ ಮಠದ, ರಾಮನಗೌಡ ಪಾಟೀಲ, ನರೇಶ ಮಲೆನಾಡು, ನಿಂಗಪ್ಪ ಬೆಳ್ಳಿವಾಲಿ, ದಾನಪ್ಪ ಕಬ್ಬೇರ, ಆನಂದ ಕಲಾಲ, ಸೋಮಶೇಖರ ಬೆನ್ನೂರ, ರಫೀಕ್‌ ಸುಂಕದ್‌, ಲಿಂಗರೆಡ್ಡಿ ನಡುವಿನಮನಿ, ಗಂಗಾಧರ ಚಿಕ್ಕಮಠ, ಬಾಬು ಅಂಚಟಗೇರಿ, ಬಾಳು ಖಾನಾಪುರ, ಹನುಮಂತ ಚವರಗುಡ್ಡ, ಬಾಬಾಜಾನ ತೇರಗಾಂವ್‌, ಭೋಜಪ್ಪ ಲಮಾಣಿ ಮೊದಲಾದವರಿದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.