ರಂಗಾಯಣದಿಂದ ಪ್ರತಿಭೆಗಳಿಗೆ ಪ್ರೋತ್ಸಾಹ

ರಂಗಾಸಕ್ತರಿಗೆ ನಮ್ಮ ಕಲೆ, ಪರಂಪರೆ, ಸಂಸ್ಕೃತಿಯ ರಸದೌತಣ ನೀಡುತ್ತಿದೆ.

Team Udayavani, Nov 9, 2021, 6:09 PM IST

ರಂಗಾಯಣದಿಂದ ಪ್ರತಿಭೆಗಳಿಗೆ ಪ್ರೋತ್ಸಾಹ

ಧಾರವಾಡ: ಪ್ರತಿಯೊಬ್ಬ ಮನುಷ್ಯನಲ್ಲೂ ಯಾವುದಾದ ರೊಂದು ಪ್ರತಿಭೆ ಅಡಗಿರುತ್ತದೆ. ಬದುಕನ್ನು ರೂಪಿಸುವಂತಹ ಕಲೆ, ಸಾಹಿತ್ಯ, ನೃತ್ಯ ಸೇರಿದಂತೆ ಹಲವಾರು ಬಗೆಯ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಕಾರ್ಯವನ್ನು ರಂಗಾಯಣ ಮಾಡುತ್ತಿದೆ ಎಂದು ತೋಂಟದಾರ್ಯ ಮಠದ ಡಾ|ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು.

ನಗರದ ರಂಗಾಯಣದ ಸುವರ್ಣ ಸಾಂಸ್ಕೃತಿಕ ಸಮುಚ್ಛಯ ಸಭಾಂಗಣದಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ವಾರಾಂತ್ಯ ನಾಟಕ ಪ್ರದರ್ಶನ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ರಂಗಾಯಣ ಪ್ರತಿ ವಾರ ಇಂತಹ ಕಾರ್ಯಕ್ರಮ ಆಯೋಜಿಸುವ ಮೂಲಕ ರಂಗಾಸಕ್ತರಿಗೆ ನಮ್ಮ ಕಲೆ, ಪರಂಪರೆ, ಸಂಸ್ಕೃತಿಯ ರಸದೌತಣ ನೀಡುತ್ತಿದೆ. ಮನುಷ್ಯನು ತನ್ನ ಅಂತರಂಗದಲ್ಲಿರುವ ಸಂಸ್ಕೃತಿಯ ಸೌಂದರ್ಯ ಬೆಳೆಸಿಕೊಳ್ಳಬೇಕು ಎಂದರು.

ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿದ ನ್ಯಾಯವಾದಿ ಬಸವಪ್ರಭು ಲಖಮಗೌಡ ಪಾಟೀಲ ಮಾತನಾಡಿ, ಪ್ರಚಲಿತ ವಿದ್ಯಮಾನಗಳ ಕುರಿತು ನಾಟಕಗಳನ್ನು ರಚಿಸಿ, ಪ್ರಸ್ತುತಪಡಿಸುವ ಮೂಲಕ ಜನರ ಮೇಲೆ ಪ್ರಭಾವ ಬೀರಲಾಗುತ್ತದೆ. ನಾಟಕಗಳು ಜನರಿಗೆ ಮನರಂಜನೆ ಮಾತ್ರವಲ್ಲ ಇತಿಹಾಸ, ಪರಂಪರೆ, ಸಂಸ್ಕೃತಿ ಕುರಿತಾದ ಜ್ಞಾನ-ತಿಳಿವಳಿಕೆ ನೀಡುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ರಂಗಾಯಣ ನಿರ್ದೇಶಕ ರಮೇಶ ಪರವಿನಾಯ್ಕರ ಮಾತನಾಡಿ, ರಂಗಾಯಣವು ಪ್ರತಿ ವಾರವೂ ನಾಟಕಗಳನ್ನು ಏರ್ಪಡಿಸುವ ಮೂಲಕ ರಂಗಾಸಕ್ತರಿಗೆ ಮನರಂಜನೆ ಜತೆಗೆ ತಿಳಿವಳಿಕೆ ನೀಡುತ್ತಿದೆ. ಇದಲ್ಲದೆ ಪ್ರವಚನಗಳ ಮೂಲಕ ಸಮಾಜವನ್ನು ತಿದ್ದುವ ಕಾರ್ಯವನ್ನು ಮಠಾಧೀಶರು ಮಾಡುತ್ತಿದ್ದಾರೆ. ರಂಗಾಯಣ ಸಹ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ನಾಟಕಗಳನ್ನು ಪ್ರದರ್ಶನ ಮಾಡುತ್ತಿವೆ ಎಂದರು.

ಅಥಣಿ ಮೋಟಗಿಮಠದ ಶ್ರೀಪ್ರಭುಚನ್ನಬಸವ ಸ್ವಾಮೀಜಿ, ಚಿತ್ರಕಲಾ ಶಿಲ್ಪಿ ಶ್ರೀ ಡಿ.ವಿ ಹಾಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ಹಾಗೂ ಪಂ|ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ನ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಹಿರಿಯ ಸಾಹಿತಿ ಡಾ|ಬಾಳಣ್ಣ ಶೀಗೀಹಳ್ಳಿ ಸೇರಿದಂತೆ ಹಲವರು ಇದ್ದರು. ಡಾ|ಗಿರೀಶ ಕಾರ್ನಾಡ ಅವರು ರಚಿಸಿ, ಮಹಾದೇವ ಹಡಪದ ನಿರ್ದೇಶಿಸಿದ ತಲೆದಂಡ ನಾಟಕವನ್ನು ಸಮುದಾಯ ಧಾರವಾಡ ಘಟಕ ಕಲಾವಿದರು ಪ್ರದರ್ಶಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.