ಪ್ಲಾಸ್ಟಿಕ್ ತ್ಯಾಜ್ಯದಲ್ಲಿ ಇಂಧನ ಶಕ್ತಿ
Team Udayavani, Nov 15, 2019, 11:07 AM IST
ಹುಬ್ಬಳ್ಳಿ: ಹತ್ತಾರು ವರ್ಷಗಳು ಗತಿಸಿದರೂ ಕರಗದ ಪ್ಲಾಸ್ಟಿಕ್ ತ್ಯಾಜ್ಯ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಪ್ರಯೋಗಾರ್ಥ ಪಾಲಿಕೆ ಕೈಗೊಂಡ ಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದ್ದು, ಅ. 2ರಂದು ಗಾಂಧಿ ಜಯಂತಿಯಂದು ಅವಳಿ ನಗರದಲ್ಲಿ ಸಂಗ್ರಹಿಸಲಾದ 6 ಟನ್ ಪ್ಲಾಸ್ಟಿಕ್ ತ್ಯಾಜ್ಯವನ್ನು ಬಾಗಲಕೋಟೆಯ ಜೆ.ಕೆ.ಸಿಮೆಂಟ್ ಕಾರ್ಖಾನೆ ಸಂಗ್ರಹಿಸಿಕೊಂಡು ಇಂಧನವಾಗಿ ಬಳಸಿಕೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆಯನ್ವಯ ರಾಜ್ಯ ಸರಕಾರ ಗಾಂಧಿ ಜಯಂತಿಯಂದು ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಲು ಸ್ಥಳಿಯ ಸಂಸ್ಥೆಗಳಿಗೆ ನಿರ್ದೇಶನ ನೀಡಿತ್ತು. ಮಹಾನಗರ ಪಾಲಿಕೆ ಕೈಗೊಂಡ ಅಭಿಯಾನಕ್ಕೆ ಇದಕ್ಕೆ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದ್ದು, ಹಲವು ಸಂಘ-ಸಂಸ್ಥೆಗಳು ಹಾಗೂ ಶಾಲಾ-ಕಾಲೇಜುಗಳು ಸಕ್ರಿಯವಾಗಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹದಲ್ಲಿ ತೊಡಗಿದ್ದವು. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ತಮ್ಮ ವಿದ್ಯಾಸಂಸ್ಥೆಗಳ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿದ್ದ ಸಂಗ್ರಹಿಸಿದ್ದ ಪ್ಲಾಸ್ಟಿಕ್ ತ್ಯಾಜ್ಯವನ್ನು ಕಾರವಾರ ರಸ್ತೆಯ ಹೇಸಿಮಡ್ಡಿಯಲ್ಲಿ ಮಹಾನಗರ ಪಾಲಿಕೆ ವತಿಯಿಂದ ಪ್ರತ್ಯೇಕವಾಗಿ ಸುರಿಯಲಾಗಿತ್ತು.
ಸಿಮೆಂಟ್ ಫ್ಯಾಕ್ಟರಿಗೆ ಯಾಕೆ?: ಸಿಮೆಂಟ್ ಕಾರ್ಖಾನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಇಂಧನದ ಬಳಕೆಯಾಗುತ್ತದೆ. ಕಲ್ಲಿದ್ದಲಿನೊಂದಿಗೆ ಪ್ಲಾಸ್ಟಿಕ್ ತ್ಯಾಜ್ಯವನ್ನು ಇಂಧನವಾಗಿ ಬಳಸುವುದರಿಂದ ಕಲ್ಲಿದ್ದಲು ಉಳಿಸಲು ಸಾಧ್ಯವಾಗಿದೆ. ಕಲ್ಲಿದ್ದಲಿನೊಂದಿಗೆ ಪ್ಲಾಸ್ಟಿಕ್ ತ್ಯಾಜ್ಯ ದಹಿಸಬಹುದಾಗಿದೆ. ಸಿಮೆಂಟ್ ಕಾರ್ಖಾನೆಗಳಲ್ಲಿ ಹೊಗೆ ಹೋಗುವ ಚಿಮಣಿಗಳಲ್ಲಿ ಇಲೆಕ್ಟ್ರೋಸ್ಟಾಟಿಕ್ ಪ್ರಿಸಿಪೇಟರ್ ಕಡ್ಡಾಯವಾಗಿರುತ್ತದೆ. ಇದು ಪರಿಸರ ಮಾಲಿನ್ಯ ಮಾಡುವ ವಿಷಕಾರಕ ಅನಿಲಗಳನ್ನು ಸಂಗ್ರಹಿಸಿಟ್ಟುಕೊಂಡು, ಪರಿಸರಕ್ಕೆ ಮಾಲಿನ್ಯ ಉಂಟು ಮಾಡದ ಹೊಗೆಯನ್ನು ಮಾತ್ರ ಚಿಮಣಿ ಮೂಲಕ ಹೊರಗೆ ಬಿಡುತ್ತದೆ.
ಇದರಿಂದ ಪರಿಸರಕ್ಕೆ ಯಾವುದೇ ಸಮಸ್ಯೆ ಇರುವುದಿಲ್ಲ. ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ನಿಷೇಧಿಸಿದ್ದರೂ ಪ್ಲಾಸ್ಟಿಕ್ ಮಾರಿ ದೊಡ್ಡ ತಲೆನೋವಾಗಿದೆ. ಪ್ಲಾಸ್ಟಿಕ್ ತ್ಯಾಜ್ಯ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಪ್ಲಾಸ್ಟಿಕ್ ತ್ಯಾಜ್ಯವನ್ನು ಉಚಿತವಾಗಿ ನೀಡಲು ಸಿದ್ಧವಾಗಿದೆ. ಆದರೆ ಸಿಮೆಂಟ್ ಫ್ಯಾಕ್ಟರಿಗಳು ಸಾಗಾಣಿಕೆಯ ಕಾರಣದಿಂದ ಪ್ಲಾಸ್ಟಿಕ್ ತ್ಯಾಜ್ಯ ತೆಗೆದುಕೊಂಡು ಹೋಗಲು ನಿರಾಸಕ್ತಿ ತೋರುತ್ತಿವೆ. ಸಿಮೆಂಟ್ ಫ್ಯಾಕ್ಟರಿಗಳಲ್ಲಿ ಪ್ರತಿದಿನ ಒಂದು ನಿಗದಿತ ಪ್ರಮಾಣದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಇಂಧನವಾಗಿ ಬಳಸಿದರೆ ಸಮಸ್ಯೆ ಸ್ವಲ್ಪ ಮಟ್ಟಿಗ ನಿವಾರಣೆಯಾಗಬಹುದಾಗಿದೆ. ರಸ್ತೆ ಕಾಮಗಾರಿಯಲ್ಲೂ ಪ್ಲಾಸ್ಟಿಕ್ ತ್ಯಾಜ್ಯ ಬಳಸುವ ಚಿಂತನೆ ನಡೆದಿದೆ. ಈ ದಿಸೆಯಲ್ಲಿ ತ್ವರಿತ ಕ್ರಮ ಅಗತ್ಯವಾಗಿದೆ.
ಪ್ರತಿ ದಿನ ಅವಳಿನಗರದಲ್ಲಿ ಸುಮಾರು 2-3 ಟನ್ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವಾಗು¤ದ್ದು, ಕಾರವಾರ ರಸ್ತೆಯ ಕಸಸಂಗ್ರಹ ಸ್ಥಳದಲ್ಲಿ ಸುರಿಯಲಾಗುತ್ತದೆ. ಅ. 2ರಂದು ಸ್ವತ್ಛತಾ ಅಭಿಯಾನ ನಿಮಿತ್ತ ಸಂಗ್ರಹಗೊಂಡ 6 ಟನ್ ಪ್ಲಾಸ್ಟಿಕ್ ತ್ಯಾಜ್ಯವನ್ನು ಜೆ.ಕೆ. ಸಿಮೆಂಟ್ ಫ್ಯಾಕ್ಟರಿಯವರಿಗೆ ಉಚಿತವಾಗಿ ತೆಗೆದುಕೊಂಡು ಹೋಗಲು ತಿಳಿಸಲಾಗಿದೆ. ಆದರೆ ಸಾಗಾಣಿಕೆ ವೆಚ್ಚ ಅಧಿಕವಾಗುವುದರಿಂದ ಫ್ಯಾಕ್ಟರಿಯವರು ಆಸಕ್ತಿ ತೋರುತ್ತಿಲ್ಲ. ಪ್ಲಾಸ್ಟಿಕ್ ತ್ಯಾಜ್ಯ ಯಾವ ರೀತಿ ಬಳಸುತ್ತಾರೆ ಎಂಬುದನ್ನು ಸಮರ್ಪಕವಾಗಿ ತಿಳಿಸಬೇಕು. ವಿಜಯಕುಮಾರ, ಪಾಲಿಕೆ ಘನ ತ್ಯಾಜ್ಯ ವಿಲೇವಾರಿ ವಿಭಾಗದ ಕಾರ್ಯಪಾಲಕ ಅಭಿಯಂತರ
-ವಿಶ್ವನಾಥ ಕೋಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
MUST WATCH
ಹೊಸ ಸೇರ್ಪಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?