ಆನ್‌ಲೈನ್‌ ಪರೀಕ್ಷೆಗೆ ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಆಕ್ಷೇಪ

ಆಫ್ಲೈನ್‌ ಬೋಧನೆ ನಂತರ ಆಫ್ಲೈನ್‌ ಪರೀಕ್ಷೆಗೆ ಒತ್ತಾಯ

Team Udayavani, Jul 5, 2020, 11:52 AM IST

ಆನ್‌ಲೈನ್‌ ಪರೀಕ್ಷೆಗೆ ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಆಕ್ಷೇಪ

ಹುಬ್ಬಳ್ಳಿ: ಇಲ್ಲಿನ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯ ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಜು. 21ರಿಂದ ಆನ್‌ಲೈನ್‌ ಪರೀಕ್ಷೆಗೆ ಮುಂದಾಗಿದ್ದು, ಇದಕ್ಕೆ ವಿದ್ಯಾರ್ಥಿಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಆನ್‌ಲೈನ್‌ ಪರೀಕ್ಷೆಗೆ ಹಾಜರಾಗದಿರಲು ಬಹುತೇಕ ವಿದ್ಯಾರ್ಥಿಗಳು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ವಿವಿಧ ವಿಭಾಗಗಳ 2ನೇ, 4ನೇ ಹಾಗೂ 6ನೇ ಸೆಮಿಸ್ಟರ್‌ ಪರೀಕ್ಷೆಗಳನ್ನು ಜು. 21ರಿಂದ ಆನ್‌ಲೈನ್‌ ಮೂಲಕ ನಡೆಸಲು ವಿವಿ ನಿರ್ಧರಿಸಿದೆ. ಕೋವಿಡ್ ಹಾಗೂ ಲಾಕ್‌ಡೌನ್‌ನಿಂದಾಗಿ ಗ್ರಾಮೀಣ ಸೇರಿದಂತೆ ವಿವಿಧೆಡೆಗಳಲ್ಲಿರುವ ವಿದ್ಯಾರ್ಥಿಗಳು ಮಾತ್ರ, ಆನ್‌ಲೈನ್‌ ಪರೀಕ್ಷೆ ಬೇಡ. ಒಂದು ತಿಂಗಳು ಆಫ್ಲೈನ್‌ ಬೋಧನೆ ನಂತರ ಆಫ್ ಲೈನ್‌ ಪರೀಕ್ಷೆ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ಕುರಿತು ವಿದ್ಯಾರ್ಥಿಗಳು ಟ್ವಿಟರ್‌ ಅಭಿಯಾನ ಕೈಗೊಂಡಿದ್ದಾರೆ.

ಲಾಕ್‌ಡೌನ್‌ ಕಾರಣದಿಂದಾಗಿ ಈಗಾಗಲೇ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕ ಬೋಧನೆ ಕೈಗೊಳ್ಳಲಾಗಿದ್ದು, ಇದೀಗ ಆನ್‌ಲೈನ್‌ ಪರೀಕ್ಷೆ ಕೈಗೊಳ್ಳಲಾಗುತ್ತಿದೆ. ಪರೀಕ್ಷೆಗೆ ಪೂರಕವಾಗಿ ಜು.6 ಮತ್ತು 7ರಂದು ಅಣಕು ಪರೀಕ್ಷೆ ಕೈಗೊಳ್ಳಲಾಗುತ್ತಿದ್ದು, 21ರಿಂದ ಪರೀಕ್ಷೆ ನಡೆಯಲಿವೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕ್ರಮಕ್ಕೆ ಮುಂದಾಗಿದ್ದಾಗಿ ವಿವಿ ಹೇಳುತ್ತಿದೆ.

ಆದರೆ, ವಿದ್ಯಾರ್ಥಿಗಳು ಆನ್‌ಲೈನ್‌ ಬೋಧನೆ ಬಹುತೇಕರಿಗೆ ಅರ್ಥವಾಗಿಲ್ಲ. ಆನ್‌ ಲೈನ್‌ ಬೋಧನೆ ಸಂದರ್ಭದಲ್ಲೇ ಸರಿಯಾಗಿ ಕೇಳದಿರುವುದು ಇನ್ನಿತರ ಸಮಸ್ಯೆಗಳು ಎದುರಾಗಿದ್ದವು. ಅದು ಉಪನ್ಯಾಸಕರಿಗೂ ಗೊತ್ತಿದೆ. ವಿಷಯವೇ ಅರ್ಥವಾಗಿಲ್ಲ ಎಂದ ಮೇಲೆ ಪರೀಕ್ಷೆ ಬರೆಯುವುದಾದರೂ ಹೇಗೆ, ಬೋಧನೆ ಸಂದರ್ಭದಲ್ಲೇ ಆನ್‌ಲೈನ್‌ ಸಮಸ್ಯೆ ನೀಡಿದೆ. ಪರೀಕ್ಷೆ ಸಂದರ್ಭದಲ್ಲಿ ಇಂಟರ್‌ನೆಟ್‌ ಕೈಕೊಟ್ಟರೆ ಏನು ಮಾಡುವುದು ಎಂಬುದು ವಿದ್ಯಾರ್ಥಿಗಳ ಪ್ರಶ್ನೆ.

ಜು.21ರಿಂದ ನಡೆಯುವ ಪರೀಕ್ಷೆ 50 ಅಂಕಗಳದ್ದಾಗಿದ್ದು, ಒಂದೂವರೆ ತಾಸಿನ ಅವಧಿಯದ್ದಾಗಿದೆ. ವಿವಿ ಪ್ರಕಾರ ಆನ್‌ಲೈನ್‌ ಪರೀಕ್ಷೆಗೆ ವಿದ್ಯಾರ್ಥಿಗಳು ಒಂದು ಲ್ಯಾಪ್‌ಟಾಪ್‌, ಒಂದು ಸ್ಮಾರ್ಟ್‌ಫೋನ್‌, ಕನಿಷ್ಠ 3 ಜಿಬಿ ಡಾಟಾ ಸಾಮರ್ಥ್ಯದೊಂದಿಗೆ ತಯಾರು ಇರಬೇಕಾಗಿದೆ. ಪರೀಕ್ಷೆಯನ್ನು ಒಂದೂವರೆ ತಾಸಿನಲ್ಲಿ ಪೂರ್ಣಗೊಳಿಸಬೇಕಾಗಿದೆ. ಈ ವೇಳೆ ಇಂಟರ್‌ನೆಟ್‌ ಕೈಕೊಟ್ಟರೆ, ಮರು ಸಂಪರ್ಕ, ಪರೀಕ್ಷೆ ಮೇಲ್ವಿಚಾರಕರನ್ನು ಸಂಪರ್ಕಿಸಿ ಕೀ ಸಂಖ್ಯೆ ಪಡೆಯುವುದಕ್ಕೆ ಸಮಯ ಹೋದರೆ, ಸಮಯದೊಳಗೆ ಉತ್ತರಿಸುವುದು ಕಷ್ಟವಾಗಲಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಇಂಟರ್‌ನೆಟ್‌, ವಿದ್ಯುತ್‌ ಸಮಸ್ಯೆ ಇದ್ದು, ಅವರು ಹೇಗೆ ಆನ್‌ಲೈನ್‌ ಪರೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾಧ್ಯ ಎಂಬುದು ವಿದ್ಯಾರ್ಥಿಗಳ ಅನಿಸಿಕೆ.

ಯುಜಿಸಿ ಮಾರ್ಗಸೂಚಿಯಂತೆ ಒಂದು ತಿಂಗಳು ಆಫ್ಲೈನ್‌ ಕ್ಲಾಸ್‌ ತೆಗೆದುಕೊಂಡು, ಆಫ್ ಲೈನ್‌ ಪರೀಕ್ಷೆ ತೆಗೆದುಕೊಳ್ಳಬೇಕು ಎಂಬುದಾಗಿದೆ. ಆದರೆ, ವಿವಿಯವರು ಇದಾವುದನ್ನು ಗಣನೆಗೆ ತೆಗೆದುಕೊಳ್ಳದೆ, ವಿದ್ಯಾರ್ಥಿಗಳಿಗೆ ಮೇಲ್‌ ಮೂಲಕ ಸಂದೇಶ ರವಾನಿಸಿ, ಆನ್‌ಲೈನ್‌ ಪರೀಕ್ಷೆ ಎಂದು ತಿಳಿಸಿದ್ದಾರೆ. ವಿವಿಧ ಕಡೆ ಇರುವ ವಿದ್ಯಾರ್ಥಿಗಳಿಗೆ ಇದು ಕಷ್ಟವಾಗಲಿದೆ. ವಿದ್ಯಾರ್ಥಿಗಳ ಜತೆ ಚರ್ಚಿಸದೆ ಏಕಾಏಕಿ ಪರೀಕ್ಷೆ ಘೋಷಣೆಮಾಡಲಾಗಿದೆ. ಈ ಬಗ್ಗೆ ವಿದ್ಯಾರ್ಥಿಗಳು ಟ್ವಿಟರ್‌ ಅಭಿಯಾನ ನಡೆಸಿದ್ದು, ಆನ್‌ಲೈನ್‌ ಪರೀಕ್ಷೆಗೆ ಶೇ.95 ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಬೇಕಾದ ಪುರಾವೆಗಳು ಇವೆ. ಇಷ್ಟಾದರೂ ವಿವಿ ಒಪ್ಪುತ್ತಿಲ್ಲ. ಸಂಬಂಧಿಸಿದ ವಿಭಾಗಗಳ ಮುಖ್ಯಸ್ಥರನ್ನು ಸಂಪರ್ಕಿಸಿದರೆ ಸ್ಪಂದಿಸುತ್ತಿಲ್ಲ. ಬಹುತೇಕ ವಿದ್ಯಾರ್ಥಿಗಳು ಆನ್‌ಲೈನ್‌ ಅಣಕು ಪರೀಕ್ಷೆ ಹಾಗೂ ಜು. 21ರಿಂದ ನಡೆಯುವ ಪರೀಕ್ಷೆಗೆ ಗೈರು ಹಾಜರಾಗಲು ನಿರ್ಧರಿಸಿದ್ದಾಗಿ ಹೆಸರು ಹೇಳಲಿಚ್ಛಿಸದ ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.