ದೇವಗಿರಿಯಲ್ಲಿ ಎನ್ನೆಸ್ಸೆಸ್‌ ಶಿಬಿರ ಸಂಪನ್ನ


Team Udayavani, Mar 12, 2019, 7:39 AM IST

hub-3.jpg

ಧಾರವಾಡ: ದೇವಗಿರಿ ಗ್ರಾಮದಲ್ಲಿ ಕರ್ನಾಟಕ ಕಾನೂನು ಮಹಾವಿದ್ಯಾಲಯ ಹಮ್ಮಿಕೊಂಡಿದ್ದ ಎನ್ನೆಸ್ಸೆಸ್‌ ಶಿಬಿರ ವಿವಿಧ ಸೇವಾ ಕಾರ್ಯಗಳೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತು.

ಒಂದು ವಾರ ನಡೆದ ಶಿಬಿರದಲ್ಲಿ ಗ್ರಾಮದಲ್ಲಿ ಸ್ವತ್ಛತೆ, ಹೂಳು ತೆಗೆಯುವುದು, ನೀರಿನ ಮೂಲಗಳ ಸಂರಕ್ಷಣೆ, ಮಳೆನೀರು ಸಂಗ್ರಹ, ಅಂತರ್ಜಲ ರಕ್ಷಣೆ, ಮತದಾನ ಜಾಗೃತಿ, ಶಾಲಾ ಅವರಣದ ಸ್ವತ್ಛತೆ ಮತ್ತು ರಂಗ ಮಂಟಪ ನಿರ್ವಹಣೆ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದರು. 

ವರದಕ್ಷಿಣೆ ವಿರೋಧ, ಮಕ್ಕಳಿಗೆ ಅಕ್ಷರ ಕಲಿಕೆ, ಗ್ರಾಮ ನೈರ್ಮಲ್ಯ, ಸಸಿ ನೆಡುವುದು, ರಾಷ್ಟ್ರೀಯ ಭಾವೈಕ್ಯತೆ ಮತ್ತು ಮಹಿಳಾ ಸಬಲೀಕರಣ ಕುರಿತು ಸಂಪನ್ಮೂಲ ವ್ಯಕ್ತಿಗಳು ಗ್ರಾಮಕ್ಕೆ ಭೇಟಿಕೊಟ್ಟು ಉಪನ್ಯಾಸ ನೀಡಿದರು.

ಗ್ರಾಹಕ ಸಮಸ್ಯೆಗಳ ಕುರಿತು ಹಿರಿಯ ವಕೀಲರಾದ ಬಸವಪ್ರಭು ಹೊಸಕೇರಿ ಕೊನೆಯ ದಿನ ಉಪನ್ಯಾಸ ನೀಡಿದರು. ಸಿಪಿಐ ಮುಖಂಡರಾದ ಡಾ| ಸಿದ್ದನಗೌಡ ಪಾಟೀಲ ಅವರು ಗ್ರಾಮೀಣರ ಬದುಕು ಹಸನಾಗಲು ಮಾಡಬೇಕಿರುವ ಅಗತ್ಯ ಕೆಲಸಗಳ ಕುರಿತು ಮಾತನಾಡಿದರು. ಬಾಬು ಪಾಗೋಜಿ, ಸೋಮಲಿಂಗ ಯಂಕಮ್ಮನವರ, ತಾನಾಜಿ ದುರ್ಗಾಯಿ ಇನ್ನಿತರರು ಪಾಲ್ಗೊಂಡಿದ್ದರು. 

ಗ್ರಾಮಾಭಿವೃದ್ಧಿಯಿಂದ ದೇಶದ ಪ್ರಗತಿ: ಚಿಕ್ಕನಗೌಡ 
ಹುಬ್ಬಳ್ಳಿ: ಗ್ರಾಮಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶ ಪ್ರಗತಿ ಹೊಂದಲು ಸಾಧ್ಯ ಎಂದು ಮಾಜಿ ಶಾಸಕ ಎಸ್‌.ಐ.
ಚಿಕ್ಕನಗೌಡ್ರ ಹೇಳಿದರು.

ಪಾಳೆ ಗ್ರಾಮದಲ್ಲಿ ಅದರಗುಂಚಿ ಸಿಐಸಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಎಂಕಾಂ ಸ್ನಾತಕೋತ್ತರ ವಿಭಾಗದ ಎನ್ನೆಸ್ಸೆಸ್‌ ವಿಶೇಷ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಭಾರತ ಹಳ್ಳಿಗಳಿಂದ ಕೂಡಿದ ರಾಷ್ಟ್ರವಾಗಿರುವುದರಿಂದ ಪ್ರಮುಖವಾಗಿ ಗ್ರಾಮಗಳ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಿದೆ. ವಿದ್ಯಾರ್ಥಿಗಳು ಸಾಮಾಜಿಕ ಕಾಳಜಿಯನ್ನು ರೂಢಿಸಿಕೊಂಡು ದೇಶದ ಪ್ರಗತಿಗೆ ಶ್ರಮಿಸಬೇಕು ಎಂದು ಹೇಳಿದರು.

ಆರ್‌.ಎಫ್. ಭರಮಗೌಡರ ಮಾತನಾಡಿದರು. ಶ್ರೀ ಷಡಕ್ಷರಯ್ಯ ಹಿರೇಮಠ ಸಾನ್ನಿಧ್ಯ ವಹಿಸಿದ್ದರು. ಎಚ್‌.ಯು. ಮುಜಿತನವರ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯೆ ಚನ್ನಮ್ಮ ಶಿವನಗೌಡ್ರ, ಜಿಪಂ ಮಾಜಿ ಸದಸ್ಯ ಜಿ.ವಿ. ಕಳ್ಳಿಮನಿ, ಎನ್‌.ಜೆ. ಬಡಿಗೇರ ಇನ್ನಿತರರಿದ್ದರು.

ಸಮಾಜಮುಖೀ ಕಾರ್ಯ ಕೈಗೊಳ್ಳಿ
ಕುಂದಗೋಳ: ತಾಲೂಕಿನ ಗುಡಗೇರಿ ಗ್ರಾಮದಲ್ಲಿ ಕುಂದಗೋಳ ಸರ್ಕಾರಿ ಡಿಗ್ರಿ ಕಾಲೇಜಿನ ಎನ್ನೆಸ್ಸೆಸ್‌ ಘಟಕ ಹಮ್ಮಿಕೊಂಡ ಶಿಬಿರದಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು.

ವಿಜಯಕುಮಾರ ಹಾಲಿ ಮಾತನಾಡಿ, ವಿದ್ಯಾರ್ಥಿಗಳು ಸಮಾಜಮುಖೀ ಕಾರ್ಯವನ್ನು ತಮ್ಮ ಕಾಲೇಜಿನ ಎನ್ನೆಸ್ಸೆಸ್‌ ಮೂಲಕ ವ್ಯಕ್ತಪಡಿಸಿಕೊಂಡು ಸಾಗಿದಾಗ ಅವರಲ್ಲಿ ಹೊಸಹುಮ್ಮಸ್ಸು ಮೂಡಿದಂತಾಗುತ್ತದೆ ಎಂದರು.
 
ಪ್ರಾಚಾರ್ಯ ಎಂ.ಕೆ. ಅಂಗಡಿ ಅಧ್ಯಕ್ಷತೆ ವಹಿಸಿದ್ದರು. ತಾಪಂ ಸದಸ್ಯ ಬಸನಗೌಡ ಕರೆಹೊಳಲಪ್ಪಗೌಡ್ರ, ನಿಂಗಪ್ಪ ಕುಡುವಕ್ಕಲ, ದಾಕ್ಷಾಯಿಣಿ ಕೊಪ್ಪದ, ಬಸವರಾಜ ಮಡಿವಾಳರ, ಪ್ರೊ| ರಾಧಾಮತಿ ನಾಕೋಡ ಇದ್ದರು. ಕೃಷ್ಣಪ್ಪ ಲಮಾಣಿ ನಿರೂಪಿಸಿದರು, ಪ್ರವೀಣ ತಿಮ್ಮನಗೌಡ್ರ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.