ನೈಸರ್ಗಿಕ ಸಂಪನ್ಮೂಲ ದುರುಪಯೋಗ ಸಲ್ಲ
Team Udayavani, Apr 24, 2018, 5:04 PM IST
ಹುಬ್ಬಳ್ಳಿ: ಸ್ವಯಂಘೋಷಿತ ಬುದ್ಧಿಜೀವಿ ಮನುಷ್ಯನ ದುರಾಸೆಯಿಂದ ನೈಸರ್ಗಿಕ ಸಂಪನ್ಮೂಲಗಳ ದುರುಪಯೋಗವಾಗುತ್ತಿದೆ ಎಂದು ಅಗಸ್ತ್ಯ ವಿಜ್ಞಾನ ಕೇಂದ್ರದ ಮುಖ್ಯಸ್ಥ ಗುರು ಮದ್ನಳ್ಳಿ ವಿಷಾದ ವ್ಯಕ್ತಪಡಿಸಿದರು. ನಗರದ ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನದ ಕೋರ್ ವಿಜ್ಞಾನ ಚಟುವಟಿಕಾ ಕೇಂದ್ರದಿಂದ ವಿಶ್ವ ಭೂ ದಿನದ ನಿಮಿತ್ತ ಹಮ್ಮಿಕೊಂಡಿದ್ದ ಪರಿಸರ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜೀವಿಗಳ ಪೋಷಣೆಗೆ ಅಗತ್ಯವಿರುವುದೆಲ್ಲವೂ ಭೂಗ್ರಹದ ಮೇಲಿದೆ. ಮನುಕುಲ, ಜೀವಸಂಕುಲದ ಒಳಿತಿಗಾಗಿ ಸಂಪನ್ಮೂಲಗಳು ಬಳಕೆಯಾಗಬೇಕಿದೆ. ಭೂಮಿಯನ್ನು ಪ್ರದೂಷಣೆಯಿಂದ ರಕ್ಷಿಸಿ ಸಸಿನೆಟ್ಟು ಮರವಾಗಿ ಬೆಳೆಸಿ ಅಧಿಕ ಭೂ ತಾಪಮಾನದಿಂದ ಭೂಮಿ ರಕ್ಷಿಸುವ ಅನಿವಾರ್ಯತೆ ಇದೆ ಎಂದರು. ಚಿಗುರು ಉಚಿತ ಬೇಸಿಗೆ ಶಿಬಿರದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು ನಗರದ ಗೋಕುಲ ರಸ್ತೆಯ ಕೈಗಾರಿಕಾ ಪ್ರದೇಶದಲ್ಲಿ ಸಂಚರಿಸಿ ಪರಿಸರ ಕಾಳಜಿ ಕುರಿತು ಅರಿವು ಮೂಡಿಸಿದರು.
ಸಾರ್ವಜನಿಕರು ಹಾಗೂ ಕಾರ್ಮಿಕರ ಕೈಗೆ ಹಸಿರು ಬ್ಯಾಂಡ್ ಕಟ್ಟಿ, ಸಸಿಗಳನ್ನು ವಿತರಿಸಿ ಪರಿಸರ ರಕ್ಷಣೆ ಕುರಿತು ಜಾಗೃತಿ ಮೂಡಿಸಿದರು. ವಿಜ್ಞಾನ ಕೇಂದ್ರದಲ್ಲಿ ವಿಶ್ವ ಭೂದಿನ ನಿಮಿತ್ತ ಹಾಗೂ ಪರಿಸರ ರಕ್ಷಣೆ ಕುರಿತು ಪಿಪಿಟಿ ಪ್ರದರ್ಶಿಸಿ ವಿವರಿಸಲಾಯಿತು. ಕಾರ್ಯಕ್ರಮದಲ್ಲಿ ಮಂಜುನಾಥ ಜಾನಣ್ಣವರ, ಫಕ್ಕೀರೇಶ್ವರ ಮಡಿವಾಳರ, ಶಂಕರ ಕುರುಬರ, ಹನುಮಂತಪ್ಪ ಬಿ., ಶಶಿಕಲಾ ಗೌರಿ, ನಿವೇದಿತಾ ಜವಳಿಮಠ, ಸುಜಯ ಭೋಜಕರ, ನಿಂಗನಗೌಡ ಸತ್ತಿಗೌಡ್ರ, ಪುಂಡಲೀಕ ದೇವರಮನಿ, ದೀಪ್ತಿ ಗಾಯಕವಾಡ, ಬಸವರಾಜ ಮುದಗಲ್ಲ, ನಾರಾಯಣ ಚವ್ಹಾಣ, ಹನ್ನಿಫಾ ಗೋಟೇಗಾರ, ಜ್ಯೋತಿ ಕಾಪರೆ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ