ಈಶ್ವರಪ್ಪ ಪುತ್ರನಿಗೆ ಟಿಕೆಟ್ ಕೇಳಿರಲಿಲ್ಲ ಅದೆಲ್ಲಾ ಮಾಧ್ಯಮದವರ ಸೃಷ್ಟಿ : ಬೊಮ್ಮಾಯಿ
Team Udayavani, Nov 17, 2019, 8:03 PM IST
ಹುಬ್ಬಳ್ಳಿ: ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ತಮ್ಮ ಪುತ್ರನಿಗೆ ರಾಣಿಬೆನ್ನೂರ ಕ್ಷೇತ್ರದ ಟಿಕೆಟ್ ಕೇಳಿರಲಿಲ್ಲ, ಅದೆಲ್ಲ ಮಾಧ್ಯಮದ ಸೃಷ್ಟಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಈಶ್ವರಪ್ಪ ಪುತ್ರನಿಗೆ ಟಿಕೆಟ್ ಕೊಡಿಸಲು ಯಾವುದೇ ಲಾಬಿ ಮಾಡಿಲ್ಲ. ರಾಣಿಬೆನ್ನೂರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಯ್ಕೆಗೆ ಯಾವುದೇ ಸಮಿತಿ ರಚಿಸಿಲ್ಲ. ಅಭ್ಯರ್ಥಿ ಆಯ್ಕೆಗಾಗಿ ಸಮಿತಿ ರಚನೆ ಮಾಡುವ ಪದ್ಧತಿ ನಮ್ಮ ಪಕ್ಷದಲ್ಲಿಲ್ಲ. ರಾಣಿಬೆನ್ನೂರಿನಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಅರುಣಕುಮಾರ ಹೆಸರು ಫೈನಲ್ ಆಗಿದೆ. ಅದರಲ್ಲಿ ಯಾವುದೇ ಬದಲಾವಣೆಯಿಲ್ಲ. ಪ್ರತಿ ಚುನಾವಣೆಯಲ್ಲೂ ಆಕಾಂಕ್ಷಿಗಳಿಗೆ ಟಿಕೆಟ್ ಸಿಗದಿದ್ದಾಗ ಅಸಮಾಧಾನ ಸಹಜ. ಗೆಲ್ಲುವ ಪಕ್ಷದಲ್ಲಿ ಅಸಮಾಧಾನ ಹೆಚ್ಚಾಗಿರುತ್ತದೆ. ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದು, ನಮ್ಮ ಮುಖಂಡರು ಬಂಡಾಯ ಶಮನ ಮಾಡಲಿದ್ದಾರೆ. ಗೋಕಾಕ ಕ್ಷೇತ್ರದಲ್ಲಿ ಅಶೋಕ ಪೂಜಾರ ಅವರ ಬಂಡಾಯ ತಣ್ಣಗಾಗಿಸಲಾಗುವುದು. 15 ಕ್ಷೇತ್ರಗಳಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು 12-13 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ