ಸಾಮಾಜಿಕ ಜಾಲತಾಣ ನಿಗಾಕ್ಕೆ ನಿರ್ವಹಣಾ ಘಟಕ ಸ್ಥಾಪನೆ
Team Udayavani, Jun 27, 2018, 5:14 PM IST
ಹಾವೇರಿ: ಪೊಲೀಸ್ ಇಲಾಖೆಯ ಪೂರ್ವ ವಲಯದ ಎಲ್ಲ 10 ಜಿಲ್ಲೆಗಳಲ್ಲೂ ಸಾಮಾಜಿಕ ಜಾಲತಾಣ ನಿರ್ವಹಣಾ ಘಟಕಗಳನ್ನು ಸ್ಥಾಪಿಸಲಾಗಿದೆ. ಸಾರ್ವಜನಿಕರ ದೂರುಗಳಲ್ಲದೇ ಸ್ವಯಂ ನಿಗಾವಹಿಸಿ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಗಾವಲಿರಿಸಲಾಗಿದೆ ಎಂದು ಪೂರ್ವ ವಲಯ ಐಜಿಪಿ ಶರತ್ಚಂದ್ರ ತಿಳಿಸಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಕೋಮುಗಲಭೆ ಹುಟ್ಟುಹಾಕುವವರ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ವಲಯದ ಶಿವಮೊಗ್ಗ ಜಿಲ್ಲೆ ಕೋಮು ಸೂಕ್ಷ್ಮ ಜಿಲ್ಲೆಯಾಗಿದ್ದು, ಅತ್ಯಂತ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ಉಳಿದಂತೆ ಯಾವುದೇ ಕಾನೂನಾತ್ಮಕ ಸಮಸ್ಯೆಗಳು ಗಂಭೀರತೆಯನ್ನು ಹೊಂದಿಲ್ಲ ಎಂದರು.
ಪೂರ್ವ ವಲಯದ ಎಲ್ಲ ಜಿಲ್ಲೆಗಳಲ್ಲೂ ಕೋಮು ಸೌಹಾರ್ದತೆಗೆ ಆದ್ಯತೆ ನೀಡಲಾಗಿದೆ. ಕೋಮು ವಾತಾವರಣವನ್ನು ಕದಡುವ ವ್ಯಕ್ತಿಗಳ ಮೇಲೆ ನಿಗಾ ವಹಿಸಲಾಗುತ್ತಿದೆ. ಪೊಲೀಸ್ ಇಲಾಖೆ ಬ್ರಿಟಿಷ್ ಕಾಲದ ಆಡಳಿತ ಪದ್ಧತಿಯಿಂದ ಹೊರಬಂದು ಜನಸ್ನೇಹಿಯಾಗಿ ಕೆಲಸ ಮಾಡುತ್ತಿದೆ. ಬೀಟ್ ವ್ಯವಸ್ಥೆಯಂತಹ ಹಲವು ಜನಸ್ನೇಹಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಈಗಾಗಲೇ ಪೊಲೀಸ್ ಇಲಾಖೆ ರೂಪಿಸಿರುವ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಂಡರೆ ಅತ್ಯುತ್ತಮವಾದ ಪೊಲೀಸ್ ಸೇವೆಯನ್ನು ಜನರಿಗೆ ನೀಡಬಹುದಾಗಿದೆ ಎಂದರು.
ಶಾಂತಿಯುತ ಜಿಲ್ಲೆ: ಪೂರ್ವ ವಲಯದ ಜಿಲ್ಲೆಗಳಲ್ಲಿ ಹಾವೇರಿ ಶಾಂತಿಯುತ ಜಿಲ್ಲೆಯಾಗಿದೆ. ವಾರ್ಷಿಕ ಅಪರಾಧ ವರದಿಗಳನ್ನು ಪರಿಗಣಿಸಿದಾಗ ವರ್ಷದಿಂದ ವರ್ಷಕ್ಕೆ ಅಪರಾಧ ಪ್ರಕರಣಗಳು ಹಾವೇರಿ ಜಿಲ್ಲೆಯಲ್ಲಿ ಇಳಿಮುಖವಾಗಿದೆ. ಅಪರಾಧ ಪ್ರಮಾಣ ಕಡಿಮೆ ಇದೆ. ಹಾವೇರಿ ಸೇರಿದಂತೆ ಪೂರ್ವ ವಲಯದ ಎಲ್ಲ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಿ ಅಕ್ರಮ ಮರಳು ಗಣಿಗಾರಿಕೆ, ಸಾಗಾಣಿಕ ತಡೆಗೆ ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಮರಳು ಟಾಸ್ಕ್ಪೋರ್ಸ್ ಸಮಿತಿ ಅನಧಿಕೃತ ಮರಳುಗಾರಿಕೆ ಕುರಿತಂತೆ ಕ್ರಮ ವಹಿಸಲಿದೆ. ಈ ಸಮಿತಿಯ ತೀರ್ಮಾನದಂತೆ ಪೊಲೀಸ್ ಇಲಾಖೆ ಕೆಲಸ ಮಾಡುತ್ತದೆ. ಮರಳು ಅಕ್ರಮ ನಡೆದರೆ ನೇರವಾಗಿ ನನ್ನನ್ನು ಸಂಪರ್ಕಿಸಬಹುದಾಗಿದೆ ಎಂದರು.
ವರ್ಗಾವಣೆ: ಸರ್ಕಾರದ ವರ್ಗಾವಣೆಯ ಮಾರ್ಗಸೂಚಿಯ ಅನುಸಾರ ಎಸ್ಐ ಮೇಲ್ಪಟ್ಟ ಅಧಿಕಾರಿಗಳನ್ನು ವಲಯವಾರು ಹಾಗೂ ಎಎಸ್ಐ ಕೆಳಮಟ್ಟದಿಂದ ಕೆಳಗಿನ ಅಧಿಕಾರಿಗಳನ್ನು ಜಿಲ್ಲೆಯೊಳಗೆ ವರ್ಗಾವಣೆ ಮಾಡಲಾಗುವುದು. ಸರ್ಕಾರದಿಂದ ಇನ್ನೂ ವರ್ಗಾವಣೆಯ ಮಾರ್ಗಸೂಚಿ ಬಂದಿಲ್ಲ. ಸದ್ಯದ ಮಟ್ಟಿಗೆ ಸರ್ಕಾರದ ಸೂಚನೆಯಂತೆ ಚುನಾವಣಾ ಕಾರಣಗಳಿಗಾಗಿ ವರ್ಗಾವಣೆಗೊಂಡ ಪೊಲೀಸ್ ಅಧಿಕಾರಿಗಳನ್ನು ಮರಳಿ ಚುನಾವಣಾ ಪೂರ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ. ಮಾರ್ಗಸೂಚಿಯಂತೆ 100 ಪೊಲೀಸರಿಗೆ ಶೇ.40ರಷ್ಟು ವಸತಿ ವ್ಯವಸ್ಥೆ ಕಲ್ಪಿಸಬೇಕು ಎಂದು ನಿಯಮವಿದೆ. 2020ರೊಳಗೆ ಶೇ.60ರ ಪ್ರಮಾಣದಲ್ಲಿ ವಸತಿ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ. ಪೊಲೀಸ್ ಕ್ಷೇಮಾಭಿವೃದ್ಧಿಯ ನಿಯಮಾವಳಿ ಅನುಸಾರ ವಸತಿ ಗೃಹಗಳ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ ಎಂದರು. ಜಿಲ್ಲಾಧಿಕಾರಿ ಡಾ| ಎಂ.ವಿ. ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಗಣೇಶನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Hubli ಅಪಾರ್ಟಮೆಂಟ್ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು