ವಾಲ್ಮಿಯಲ್ಲಿ ಜಲಪೀಠ ಸ್ಥಾಪನೆ ಅಗತ್ಯ
Team Udayavani, Jun 16, 2019, 9:48 AM IST
ಧಾರವಾಡ: ವಾಲ್ಮಿ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಡಾ| ಗೋಪಾಲ ಕಡೇಕೋಡಿ ಉದ್ಘಾಟಿಸಿದರು.
ಧಾರವಾಡ: ಅಂತರ್ಜಲ ಕುಸಿತ, ಕೃಷಿಗೆ ಕಲುಷಿತ ನೀರು ಬಳಕೆ ಮತ್ತು ಕೃಷಿಯಲ್ಲಿ ನೀರಿನ ಹೆಚ್ಚಿನ ಬಳಕೆಯಿಂದ ಭೂ ಫಲವತ್ತತೆ ನಾಶವಾಗುತ್ತಿದೆ ಎಂದು ಪರಿಸರ ಅರ್ಥಶಾಸ್ತ್ರಜ್ಞ ಡಾ| ಗೋಪಾಲ ಕಡೇಕೋಡಿ ಹೇಳಿದರು.
ವಾಲ್ಮಿ ಸಂಸ್ಥೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಂಸ್ಥೆಯ 34ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನೀರು ಮತ್ತು ನೆಲದ ವಿಷಯದಲ್ಲಿ ಜಾಗತಿಕ ಮಟ್ಟದಲ್ಲಿ ವಿಜ್ಞಾನಿಗಳು ಅನೇಕ ಸಂಶೋಧನೆಗಳನ್ನು ಕೈಕೊಂಡು ಕೆಲವು ಮಾದರಿಗಳನ್ನು ಅಭಿವೃದ್ಧಿ ಪಡಿಸಿದ್ದಾರೆ. ಬೆಳೆಗೆ ಬೇಕಾದಷ್ಟು ನೀರನ್ನು ಮಾತ್ರ ಹೇಗೆ ಬಳಕೆ ಮಾಡಬೇಕು ಮತ್ತು ಯಾವ ಪ್ರದೇಶದಲ್ಲಿ ಯಾವ ಬೆಳೆ ಬೆಳೆದರೆ ಸೂಕ್ತ ಎನ್ನುವ ಬಗ್ಗೆ ಅಧ್ಯಯನಗಳನ್ನು ಕೈಕೊಳ್ಳಬೇಕಾಗಿದೆ. ರಾಜ್ಯದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳು ಇರುವುದರಿಂದ ಸಹಭಾಗಿತ್ವದಲ್ಲಿ ನೀರನ್ನು ಬಳಸಿ ಅಭಿವೃದ್ಧಿಯೆಡೆಗೆ ನಡೆಯಲು ಅನುಕೂಲವಾಗುತ್ತದೆ. ಹೀಗಾಗಿ ಹೆಚ್ಚಿನ ಅಧ್ಯಯನಕ್ಕಾಗಿ ವಾಲ್ಮಿಯಲ್ಲಿ ಜಲ ಪೀಠವನ್ನು ಸ್ಥಾಪಿಸುವ ಅಗತ್ಯವಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ವಾಲ್ಮಿ ನಿರ್ದೇಶಕ ಡಾ| ರಾಜೇಂದ್ರ ಪೋದ್ದಾರ ಮಾತನಾಡಿ, ನೀರಿಲ್ಲದೆ ಬರಗಾಲ ಒಂದೆಡೆಯಾದರೆ ಅತೀ ನೀರಾವರಿಯಿಂದ ಭೂಮಿ ಹಾಳಾಗುತ್ತಿರುವುದು ಇನ್ನೊಂದೆಡೆಯಾಗಿದೆ. ಮುಂದಿನ ಜಾಗತಿಕ ಮಹಾಯುದ್ಧ ನೀರಿಗಾಗಿಯೇ ಎನ್ನುವಂತಾಗಿದೆ. ಇಂಥಹ ಸಂದರ್ಭದಲ್ಲಿ ನೀರು ಮತ್ತು ಮಣ್ಣಿನ ಸಂರಕ್ಷಣೆ-ಸದ್ಬಳಕೆ ಸಂಸ್ಥೆಗೆ ಸವಾಲಾಗಿ ಪರಿಣಮಿಸಿದೆ. ಜಾಗತಿಕ ಸರ್ವೇ ಪ್ರಕಾರ ಜಲ ಸಂಕಷ್ಟ ಮೊದಲನೇ ಸಮಸ್ಯೆಯಾಗಿದ್ದರೂ ಈ ವಿಷಯ ಚರ್ಚೆಗೆ ಬರದೇ ಇರುವುದು ವಿಷಾದನೀಯ ಎಂದು ಹೇಳಿದರು.
ಮಲಪ್ರಭಾ ಯೋಜನಾ ವಲಯದ ಮುಖ್ಯ ಅಭಿಯಂತ ಮಹಜರ ಜಾವೀದ ಮಾತನಾಡಿ, ಕೃಷಿಯಲ್ಲಿ ನೀರು ಮಿತವಾಗಿ ಬಳಸುವ ಅಗತ್ಯವಿದೆ. ಕಾಲುವೆಯಲ್ಲಿ ಕುಡಿಯುವ ನೀರು ಪೂರೈಕೆಗಾಗಿಯೇ ಹರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಕೃಷಿಗೆ ಲಭ್ಯವಿರುವ ಸ್ವಲ್ಪ ನೀರನ್ನು ತುಂತುರು ಮತ್ತು ಹನಿ ನೀರಾವರಿ ಪದ್ಧತಿಗಳನ್ನು ಅಳವಡಿಸಬೇಕಾದ ಅವಶ್ಯಕತೆ ಇದೆ ಎಂದರು.
ವಿಜಯಪುರ ಜಿಪಂ ಮಾಜಿ ಉಪಾಧ್ಯಕ್ಷ ಸುಮನ್ ಕೋಲಾರ ಮಾತನಾಡಿ, ರೈತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಜಲ ಮತ್ತು ನೆಲ ಸಂರಕ್ಷಣೆ ವಿಷಯವಾಗಿ ತರಬೇತಿ ಪಡೆಯುವ ಅವಶ್ಯಕತೆ ಇದೆ. ರಾಜ್ಯದಲ್ಲಿ ಅನೇಕ ಸ್ತ್ರೀ ಶಕ್ತಿ ಸಂಘಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಜಲ-ನೆಲ ಸಂರಕ್ಷಣೆ ಕೆಲಸದಲ್ಲಿ ಎಲ್ಲರೂ ತೊಡಗಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಡಾ| ಬಾಲಚಂದ್ರ ತೆಂಬೆ, ಎಸ್.ಡಿ. ನಾಯ್ಕರ್, ಆರ್.ಎ. ನಾಗಣ್ಣ ಮೊದಲಾದವರು ಭಾಗವಹಿಸಿದ್ದರು. ಜಲ-ನೆಲ ಕ್ಷೇತ್ರದ ಎಂಟು ಜನ ಸಾಧಕರಿಗೆ ಸನ್ಮಾನ ಮಾಡಲಾಯಿತು. ರವೀಂದ್ರ ಭಟ್ ನಿರೂಪಿಸಿದರು. ಕೃಷ್ಣಾಜಿರಾವ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್