ಸಿದ್ದರಾಮಯ್ಯ ಕಂಡರೆ ಸಣ್ಣ ಹುಡುಗರೂ ಭಯಪಡುವುದಿಲ್ಲ: ಶೆಟ್ಟರ್ ವ್ಯಂಗ್ಯ
Team Udayavani, Jan 20, 2023, 1:30 PM IST
ಹುಬ್ಬಳ್ಳಿ: ನಾವು ಮಾಡಿದ ಅಡುಗೆ ಬಿಜೆಪಿಯವರು ಬಡಿಸಿದ್ದಾರೆ ಎನ್ನುವ ಕಾಂಗ್ರೆಸ್ ನವರು, ತಾವೇ ಏಕೆ ಬಡಿಸಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಪ್ರಶ್ನಿಸಿದರು.
ತಾಂಡಾ ನಿವಾಸಿಗಳಿಗೆ ರಾಜ್ಯ ಸರ್ಕಾರದಿಂದ ಹಕ್ಕುಪತ್ರ ವಿತರಣೆ ಮಾಡಿದ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಗೆ ಶುಕ್ರವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.
ಕೇಂದ್ರ ಮತ್ತು ರಾಜ್ಯದಲ್ಲಿ 60ಕ್ಕೂ ಹೆಚ್ಚು ವರ್ಷ ಅಧಿಕಾರದಲ್ಲಿದ್ದ ಕಾಂಗ್ರೆಸ್ ನವರು ತಾವು ಮಾಡಿದ ಅಡುಗೆಯನ್ನು ಇದುವರೆಗೆ ಏಕೆ ಬಡಿಸಲಿಲ್ಲ ಎಂದು ತಿರುಗೇಟು ನೀಡಿದರು.
ನಾವು ಹಕ್ಕು ಪತ್ರ ಕೊಟ್ಟಾಗ ಕಾಂಗ್ರೆಸ್ ನವರಿಗೆ ಜ್ಞಾನೋದಯವಾಗಿದೆ. ಬಂಜಾರ ಸಮುದಾಯವರಿಗೆ ನ್ಯಾಯ ಕೊಡಿಸುವ ಬಿಜೆಪಿ ಕಾರ್ಯಕ್ರಮದ ಯಶಸ್ಸು ಕಂಡು ಹೊಟ್ಟೆ ಉರಿದಿದೆ. ಅದಕ್ಕಾಗಿ ಈ ರೀತಿ ಸಲ್ಲದ ಟೀಕೆ ಮಾಡುತ್ತಿದ್ದಾರೆ ಎಂದು ಕುಟುಕಿದರು.
ಇದನ್ನೂ ಓದಿ:ಯಶಸ್ಸು ತಂದುಕೊಟ್ಟ ದೈವಕ್ಕೆ ಕೋಲ ಕೊಟ್ಟು ಹರಕೆ ತೀರಿಸಿದ ‘ಕಾಂತಾರ’ ತಂಡ
ಬಿಜೆಪಿ ಮುಸ್ಲಿಂ ವಿರೋಧಿಯಲ್ಲ. ಅವರನ್ನು ಹೊರಗಿಡುವ ಕೆಲಸ ಪಕ್ಷ ಎಂದೂ ಮಾಡಿಲ್ಲ. ಹಿಂದೂ ಸಮಾಜ ಒಂದುಗೂಡಿಸುವ ಕೆಲಸ ಆರೆಸ್ಸೆಸ್ ಮಾಡುತ್ತಿದೆ. ಎಲ್ಲಾ ಜಾತಿ ಮತ್ತು ಧರ್ಮದವರನ್ನು ಒಗ್ಗೂಡಿಸಿಕೊಂಡು ಹೋಗಿ ಎಂದು ಮೋದಿ ಹೇಳಿದ್ದಾರೆ. ಕಾಂಗ್ರೆಸ್ ನವರು ಮುಸ್ಲಿಮರನ್ನು ಮತಬ್ಯಾಂಕ್ ಮಾಡಿಕೊಂಡು ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ಯಾರಿಗೂ ಮತಬ್ಯಾಂಕ್ ಆಗಬೇಡಿ ಎಂದು ನಾವು ವಾಸ್ತವದ ನೆಲೆಯಲ್ಲಿ ಹೇಳುತ್ತಿದ್ದೇವೆ ಎಂದರು.
ಮೋದಿ ಅವರು ಸಿದ್ದರಾಮಯ್ಯನವರಿಗೆ ಭಯಪಡುತ್ತಾರೆ ಎಂಬುದು ಈ ವರ್ಷದ ದೊಡ್ಡ ಹೊಸ ಜೋಕ್. ವಿಶ್ವದಲ್ಲೇ ಪ್ರಭಾವಿಯಾದ ಮೋದಿ ಅವರು ಇವರಿಗೆ ಭಯ ಪಡುವುದುಂಟೆ. ಹಾಗೆ ನೋಡಿದರೆ, ಸಿದ್ದರಾಮಯ್ಯ ಅವರನ್ನು ಕಂಡರೆ ಸಣ್ಣ ಹುಡುಗರು ಸಹ ಭಯಪಡುವುದಿಲ್ಲ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ
Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್