ಪ್ರತಿ ಮೂರು ವರ್ಷಕ್ಕೊಮ್ಮೆ ಮಾತು: ಜಡೆಯ ಸ್ವಾಮೀಜಿ


Team Udayavani, Mar 31, 2017, 1:10 PM IST

hub1.jpg

ಹುಬ್ಬಳ್ಳಿ: ವರ್ಷಕ್ಕೊಮ್ಮೆ ಯುಗಾದಿ ಹಬ್ಬದಂದು ಮಾತ್ರ ನಾವು ಮಾತನಾಡುತ್ತಿದ್ದೆವು. ಆದರೆ ಇನ್ನು ಮೇಲೆ ಮೂರು ವರ್ಷಕ್ಕೊಮ್ಮೆ ಮಾತನಾಡುವುದಾಗಿ ಎಂದು ಮೌನಯೋಗಿ ಜಡೆಯ ಶಾಂತಲಿಂಗೇಶ್ವರ ಮಹಾ ಸ್ವಾಮೀಜಿ ನುಡಿದರು. 

ಇಲ್ಲಿಯ ಲ್ಯಾಮಿಂಗ್ಟನ್‌ ರಸ್ತೆಯ ದಿ| ಪಾರ್ವತೆಮ್ಮ ಬುಳ್ಳಾ ಹತ್ತಿ ಕಾರ್ಖಾನೆ ಆವರಣದಲ್ಲಿ ನಡೆದ ಹೊಸ ಸಂವತ್ಸರ ಯುಗಾದಿ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು,ಪಾರ್ವತೆಮ್ಮ ಬುಳ್ಳಾ ಅವರು ತಾವು ಜೀವಂತ ಇರುವವರೆಗೂ ವರ್ಷಕ್ಕೊಮ್ಮೆ ಯುಗಾದಿ ಹಬ್ಬದ ದಿನದಿಂದಾದರೂ ಮಾತನಾಡಿ ಎಂದು ಮನವಿ ಮಾಡಿದ್ದರು.

ಹೀಗಾಗಿ ಪ್ರತಿ ವರ್ಷಕ್ಕೊಮ್ಮೆ ಮಾತನಾಡುತ್ತಿದ್ದೆವು. ಆದರೆ ಮಾತೋಶ್ರೀ ಅವರು ಕಳೆದ ನ. 6ರಂದು ನಮ್ಮನ್ನು ಬಿಟ್ಟು ಹೋಗಿದ್ದರಿಂದ ಇನ್ಮುಂದೆ ವರ್ಷಕ್ಕೊಮ್ಮೆ ಮಾತನಾಡುವುದಿಲ್ಲ. ಅಧಿಕ ಮಾಸ ಬಂದ ಆ ವರ್ಷದ ಯುಗಾದಿ ಹಬ್ಬದ ದಿನದಂದು ಅಂದರೆ ಮೂರು ವರ್ಷಕ್ಕೊಮ್ಮೆ ಮಾತ್ರ ಮಾತನಾಡುವುದಾಗಿ ಪ್ರಕಟಿಸಿದರು. 

ಹು-ಧಾ ನಡುವೆಯೂ ಸಮಾಧಾನ: ಕಲಬುರಗಿ, ಸೊಲ್ಲಾಪುರ, ವಿಜಯಪುರ, ಬಾಗಲಕೋಟೆ, ಬೆಂಗಳೂರಿನಲ್ಲಿ “ಸಮಾಧಾನ’ ಸ್ಥಾಪಿಸಲಾಗಿದೆ. ಮುಂದಿನ ದಿನಗಳಲ್ಲಿ ಹುಬ್ಬಳ್ಳಿ- ಧಾರವಾಡ ನಡುವೆ ಸಮಾಧಾನವೊಂದನ್ನು ಸ್ಥಾಪಿಸಲು ಭಕ್ತರು ಮುಂದೆ ಬಂದಿದ್ದಾರೆ. ನಿಂಗಣ್ಣಗೌಡ ಎಂಬುವರು ಎರಡು ಎಕರೆ ಭೂಮಿ ನೀಡುತ್ತಿದ್ದಾರೆ.

ಸಮಾಧಾನದ ಎಲ್ಲ ಉಸ್ತುವಾರಿ ಭಕ್ತರೇ ನೋಡಿಕೊಳ್ಳುತ್ತಾರೆ. ನಾವು ಹಣಕಾಸು ಸೇರಿದಂತೆ ಯಾವ ವಿಚಾರದಲ್ಲೂ ತಲೆ ಹಾಕುವುದಿಲ್ಲ. ತಮ್ಮ ಹಿರಿಯ ಗುರುಗಳು ಮಠದ ಲೆಕ್ಕ ನೋಡಬ್ಯಾಡ- ನಿನ್ನ ಲೆಕ್ಕ ಬಿಡಬ್ಯಾಡ ಎಂದಿದ್ದರು. ಹಣ ಎಲ್ಲಿ ಕೂಡಿರುತ್ತದೆಯೋ ಅಲ್ಲಿ ಜಗಳ ಶುರುವಾಗುತ್ತೆ ಎಂದರು. ಮಕ್ಕಳಿಂದು ಏನೆಲ್ಲ ಸಂಪಾದಿಸುತ್ತಿದ್ದಾರೆ. 

ಆದರೆ ಹೆತ್ತ ತಂದೆ- ತಾಯಿಯನ್ನು ಗೌರವದಿಂದ ನೋಡಿಕೊಳ್ಳಲಾಗುತ್ತಿಲ್ಲ. ಜೀವನದುದ್ದಕ್ಕೂ ಮಕ್ಕಳ ಏಳ್ಗೆಗೆ ಶ್ರಮಿಸುವ ಗುರು-ಹಿರಿಯರಿಗೆ ಏನೂ ಕೊಡಬೇಕಿಲ್ಲ. ಅವರಿಗೆ ಒಂದಿಷ್ಟು ಪ್ರೀತಿ- ಗೌರವ, ಆಶ್ರಯ ನೀಡಿದರೆ ಅದೇ ದೊಡ್ಡ ಕೊಡುಗೆ ಎಂದರು. ನಾವು ಗುರು ಹಿರಿಯರನ್ನು ನೋಡಿದರೆ ಮುಂದೆ ನಮ್ಮ ಮಕ್ಕಳು ನಮ್ಮನ್ನು ನೋಡುತ್ತಾರೆ ಎನ್ನುವ ಮನೋಭಾವ ಎಲ್ಲರಲ್ಲಿ ಬರುವುದು ಅಗತ್ಯ.

ನಾಲ್ಕೈದು ಮಕ್ಕಳಿದ್ದರೂ ವಯೋವೃದ್ಧರು ಯಾರೂ ಇಲ್ಲದ ಹಾಗೆ ಬದುಕುವ ಸ್ಥಿತಿ ಹಾಗೂ ಮನಸ್ಸುಗಳು ನಿರ್ಮಾಣವಾಗುತ್ತಿವೆ. ಇದು ನಿವಾರಣೆಯಾಗಬೇಕು. ವಯೋವೃದ್ಧರನ್ನು ಸಲಹುವ ನಿಟ್ಟಿನಲ್ಲಿ ವೃದ್ಧಾಶ್ರಮವೊಂದನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ವೃದ್ಧಾಶ್ರಮ ಸ್ಥಾಪಿಸುವುದು ದೊಡ್ಡದಲ್ಲ.

ಸೇವೆಯಿಂದ ದುಡಿಯುವವರು ದೊರೆಯುವುದು ಮುಖ್ಯವಾಗಿದೆ. ಭಕ್ತರು ಹಣ-ದೇಣಿಗೆ ಕೊಡಬಹುದು. ಆದರೆ ಸೇವೆ ಮಾಡುವ ಭಕ್ತರು ಬೇಕಾಗಿದ್ದಾರೆ. ಸೇವೆ ಮಾಡುವರು ಮುಂದೆ ಬರಬೇಕೆಂದರು. ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ ವೃದ್ಧಾಶ್ರಮಕ್ಕಾಗಿ ಮೊದಲ ಹಂತವಾಗಿ ಎರಡು ಲಕ್ಷ ರೂ. ನೀಡುವುದಾಗಿ ಘೋಷಿಸಿದರಲ್ಲದೇ, ತಮಗೆ ಬಂದ ಆಸ್ತಿ ನೀಡುವುದಾಗಿ ಪ್ರಕಟಿಸಿದರು.

ಗೊಗ್ಗೆಹಳ್ಳಿ ಸಂಗಮೇಶ್ವರ ಶಿವಾಚಾರ್ಯರು ಆಶೀರ್ವಚನ  ನೀಡಿ, ಸೂರ್ಯ ಉದಯಿಸುವಾಗ ಓಂ ಎನ್ನುವ ಶಬ್ದ ಬರುತ್ತದೆ ಎಂಬುದನ್ನು ಸಾವಿರಾರು ವರ್ಷಗಳ ಹಿಂದೆ ಹೇಳಿದ್ದನ್ನು ನಾಸಾ ವಿಜ್ಞಾನಿಗಳು ದೃಢಪಡಿಸಿದ್ದಾರೆ ಎಂದರು. ಮೂಡಿಯ ಸದಾಶಿವ ಮಹಾಸ್ವಾಮೀಜಿ, ಜಡೆಯ ಅಮರೇಶ್ವರ ಶಿವಾಚಾರ್ಯರು, ಗೌಡೇಶ ಬಿರಾದಾರ ಸೇರಿದಂತೆ ಅಪಾರ ಭಕ್ತವಂದ ಹಾಜರಿದ್ದರು.  

ಟಾಪ್ ನ್ಯೂಸ್

Hubli; ಅಂಜಲಿ ನಿವಾಸದಲ್ಲಿ ಸಿಐಡಿ ತಂಡದಿಂದ ಸ್ಥಳ ಮಹಜರು

Hubli; ಅಂಜಲಿ ನಿವಾಸದಲ್ಲಿ ಸಿಐಡಿ ತಂಡದಿಂದ ಸ್ಥಳ ಮಹಜರು

RCB Coach Andy Flower Drops Big IPL 2025 Auction Hint

IPL: ಸಿರಾಜ್, ದಯಾಳ್, ವೈಶಾಖ್ ಗೆ ಮುಗಿಯಿತಾ ಆರ್ ಸಿಬಿ ಪಯಣ; ಕೋಚ್ ಫ್ಲವರ್ ಹೇಳಿದ್ದೇನು?

POCSO Case: ಅನ್ಯ ಕೋಮಿನ ಯುವಕನಿಂದ ಅಪ್ರಾಪ್ತೆಗೆ ಕಿರುಕುಳ: ಪೋಕ್ಸೋ ಕೇಸ್ ದಾಖಲು!

POCSO Case: ಅನ್ಯ ಕೋಮಿನ ಯುವಕನಿಂದ ಅಪ್ರಾಪ್ತೆಗೆ ಕಿರುಕುಳ: ಪೋಕ್ಸೋ ಕೇಸ್ ದಾಖಲು!

Anwarul Azim Anwar; ಹನಿ ಟ್ರ್ಯಾಪ್ ಮಾಡಿ ಬಾಂಗ್ಲಾ ಸಂಸದನ ಹತ್ಯೆ; ಢಾಕಾದಲ್ಲಿ ಮಹಿಳೆ ಬಂಧನ

Anwarul Azim Anwar; ಹನಿ ಟ್ರ್ಯಾಪ್ ಮಾಡಿ ಬಾಂಗ್ಲಾ ಸಂಸದನ ಹತ್ಯೆ; ಢಾಕಾದಲ್ಲಿ ಮಹಿಳೆ ಬಂಧನ

10km ದೂರದಲ್ಲಿರುವ ಪ್ರವಾಸಿತಾಣಕ್ಕೆ ಕರೆದೊಯ್ಯಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಬಾಲಕಿ

10km ದೂರದಲ್ಲಿರುವ ಪ್ರವಾಸಿತಾಣಕ್ಕೆ ಕರೆದೊಯ್ಯಲಿಲ್ಲವೆಂದು ನೇಣಿಗೆ ಶರಣಾದ 10 ವರ್ಷದ ಬಾಲಕಿ

Head Coach; ಬಿಸಿಸಿಐ ಆಫರ್ ತಿರಸ್ಕರಿಸಿದ್ದೇನೆ ಎಂದ ಪಾಂಟಿಂಗ್; ತಿರುಗೇಟು ನೀಡಿದ ಜಯ್ ಶಾ

Head Coach; ಬಿಸಿಸಿಐ ಆಫರ್ ತಿರಸ್ಕರಿಸಿದ್ದೇನೆ ಎಂದ ಪಾಂಟಿಂಗ್; ತಿರುಗೇಟು ನೀಡಿದ ಜಯ್ ಶಾ

ಸಿದ್ದರಾಮಯ್ಯ

Mysore; ಲೋಕಸಭೆ ಮುಗಿದ ಕೂಡಲೇ ಜಿಪಂ, ತಾಪಂ, ಬಿಬಿಎಂಪಿ ಚುನಾವಣೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಅಂಜಲಿ ನಿವಾಸದಲ್ಲಿ ಸಿಐಡಿ ತಂಡದಿಂದ ಸ್ಥಳ ಮಹಜರು

Hubli; ಅಂಜಲಿ ನಿವಾಸದಲ್ಲಿ ಸಿಐಡಿ ತಂಡದಿಂದ ಸ್ಥಳ ಮಹಜರು

heavy rain in Dharwad

Dharwad ಜಿಲ್ಲೆಯಲ್ಲಿ ಮುಂದುವರೆದ ವರುಣನ ಆರ್ಭಟ: ಮನೆಗಳಿಗೆ ನುಗ್ಗಿದ ನೀರು

Hubli; Anjali case accused Girish is in CID custody for eight days

Hubli; ಅಂಜಲಿ ಹಂತಕ ಗಿರೀಶ್ ಎಂಟು ದಿನ ಸಿಐಡಿ ವಶಕ್ಕೆ

Dharwad: ದರೋಡೆಕೋರರನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದ ಲೇಡಿ ಪಿಎಸ್ಐ

Dharwad: ದರೋಡೆಕೋರರನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದ ಲೇಡಿ ಪಿಎಸ್ಐ

2A ಮೀಸಲಾತಿ ಕೊರಿ ಮತ್ತೆ ಪಂಚಮಸಾಲಿ ಹೋರಾಟ: ಬಸವ ಜಯಮೃತ್ಯುಂಜಯ ಶ್ರೀ‌

2A ಮೀಸಲಾತಿ ಕೋರಿ ಮತ್ತೆ ಪಂಚಮಸಾಲಿ ಹೋರಾಟ: ಬಸವ ಜಯಮೃತ್ಯುಂಜಯ ಶ್ರೀ‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hubli; ಅಂಜಲಿ ನಿವಾಸದಲ್ಲಿ ಸಿಐಡಿ ತಂಡದಿಂದ ಸ್ಥಳ ಮಹಜರು

Hubli; ಅಂಜಲಿ ನಿವಾಸದಲ್ಲಿ ಸಿಐಡಿ ತಂಡದಿಂದ ಸ್ಥಳ ಮಹಜರು

RCB Coach Andy Flower Drops Big IPL 2025 Auction Hint

IPL: ಸಿರಾಜ್, ದಯಾಳ್, ವೈಶಾಖ್ ಗೆ ಮುಗಿಯಿತಾ ಆರ್ ಸಿಬಿ ಪಯಣ; ಕೋಚ್ ಫ್ಲವರ್ ಹೇಳಿದ್ದೇನು?

ಮಂಗಳೂರು ಉತ್ತರ ವಲಯ: ಚಿಣ್ಣರು ಬರುತ್ತಿದ್ದಾರೆ, ಶಾಲೆಗಳು ಸುರಕ್ಷಿತವಾಗಿರಲಿ

ಮಂಗಳೂರು ಉತ್ತರ ವಲಯ: ಚಿಣ್ಣರು ಬರುತ್ತಿದ್ದಾರೆ, ಶಾಲೆಗಳು ಸುರಕ್ಷಿತವಾಗಿರಲಿ

POCSO Case: ಅನ್ಯ ಕೋಮಿನ ಯುವಕನಿಂದ ಅಪ್ರಾಪ್ತೆಗೆ ಕಿರುಕುಳ: ಪೋಕ್ಸೋ ಕೇಸ್ ದಾಖಲು!

POCSO Case: ಅನ್ಯ ಕೋಮಿನ ಯುವಕನಿಂದ ಅಪ್ರಾಪ್ತೆಗೆ ಕಿರುಕುಳ: ಪೋಕ್ಸೋ ಕೇಸ್ ದಾಖಲು!

Udupi; ಯಕ್ಷರಂಗಕ್ಕೆ ಜಿವ ತುಂಬುವ ಮಟ್ಟು ಲಕ್ಷ್ಮಣ ಶೆಟ್ಟಿಗಾರರ ಕೈಮಗ್ಗದ ಸೀರೆ

Udupi; ಯಕ್ಷರಂಗಕ್ಕೆ ಜಿವ ತುಂಬುವ ಮಟ್ಟು ಲಕ್ಷ್ಮಣ ಶೆಟ್ಟಿಗಾರರ ಕೈಮಗ್ಗದ ಸೀರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.