ಪಕ್ಷದ ಪ್ರತಿ ಕಾರ್ಯಕರ್ತನೂ ಅಭ್ಯರ್ಥಿಯೇ!

| ಕ್ಷೇತ್ರದ ವಿವಿಧೆಡೆ ಡಿಕೆಶಿ ಮತಯಾಚನೆ | ಮಾಜಿ ಸಚಿವ ವಿನಯ್‌ ಕುಲಕರ್ಣಿ ಪ್ರಚಾರಕ್ಕೆ ಹೆಗಲು

Team Udayavani, May 10, 2019, 11:17 AM IST

hubali-tdy-1..

ಹುಬ್ಬಳ್ಳಿ: ಇಂಗಳಗಿ ಬಳಿ ಜಗ್ಗಲಗಿ ಬಾರಿಸಿದ ಡಿ.ಕೆ. ಶಿವಕುಮಾರ ಹಾಗೂ ವಿನಯ ಕುಲಕರ್ಣಿ.

ಹುಬ್ಬಳ್ಳಿ: ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರು ಪ್ರತಿಯೊಬ್ಬರ ಮನೆಗೆ ಹೋಗಿ ಕುಸುಮಾವತಿ ಪರವಾಗಿ ಮತಯಾಚನೆ ಮಾಡಬೇಕು. ಇದು ಪಕ್ಷದ ಪ್ರತಿಯೊಬ್ಬರ ಚುನಾವಣೆ ಎಂದು ಗಂಭೀರವಾಗಿ ತೆಗೆದುಕೊಂಡು ಮತ ಕೇಳಬೇಕು ಎಂದು ಸಚಿವ ಡಿ.ಕೆ. ಶಿವಕುಮಾರ ಹೇಳಿದರು.

ಬೆಟದೂರು ಗ್ರಾಮದಲ್ಲಿ ಪಕ್ಷದ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಇದು ಕುಸುಮಾವತಿಯವರ ಚುನಾವಣೆಯಲ್ಲ. ಇದು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರ ಚುನಾವಣೆಯಾಗಿದ್ದು, ಪ್ರತಿಯೊಬ್ಬರೂ ಅಭ್ಯರ್ಥಿಯಂತೆ ಚುನಾವಣೆ ಮಾಡಬೇಕು. ಪ್ರತಿಯೊಂದು ಬೂತ್‌ನಲ್ಲಿ ಹೆಚ್ಚಿನ ಲೀಡ್‌ ನೀಡಬೇಕು ಎಂದರು.

ಮೇ 23 ದೊಡ್ಡ ಬದಲಾವಣೆ: ದೇಶದಲ್ಲಿ ಮೇ 23 ನಂತರ ದೊಡ್ಡ ಬದಲಾವಣೆಯಾಗಲಿದೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ ಮೈತ್ರಿ ಸರಕಾರ ಐದು ವರ್ಷಗಳ ಕಾಲ ಗಟ್ಟಿಯಾಗಿರುತ್ತದೆ. ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದ ಸರಕಾರ ಸುಭದ್ರವಾಗಿರುತ್ತದೆ. ಬಿಜೆಪಿ ನಾಯಕರ ಹೇಳಿಕೆಗಳ ಬಗ್ಗೆ ತಲೆಕೆಡಿಸಿ ಕೊಳ್ಳಬಾರದು ಎಂದು ಹೇಳಿದರು.

ನೀರಿನ ಸಮಸ್ಯೆ ನನಗಿರಲಿ: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ ಎಂಬುವುದನ್ನು ಸ್ಥಳೀಯರು ನನ್ನ ಗಮನಕ್ಕೆ ತಂದಿದ್ದಾರೆ. ಚುನಾವಣೆ ನೀತಿ ಸಂಹಿತೆ ಇರುವುದರಿಂದ ಈಗ ಯಾವುದೇ ಆಶ್ವಾಸನೆ ನೀಡುವುದಿಲ್ಲ. ಈ ನೀರಿನ ಸಮಸ್ಯೆ ಡಿ.ಕೆ. ಶಿವಕುಮಾರಗಿರಲಿ. ಈ ಕುರಿತು ಬಂದು ಭೇಟಿಯಾಗುವಂತೆ ಸ್ಥಳೀಯ ಮುಖಂಡರಿಗೆ ಸೂಚಿಸಿದರು.

ತಲೆಕೆಡಿಸಿಕೊಳ್ಳಬೇಡಿ: ಮಾಜಿ ಸಚಿವ ಶ್ರೀರಾಮುಲು ಅವರ ಹೇಳಿಕೆ ಕುರಿತು ಜನರು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಪಕ್ಷದಿಂದ ಅವರ ವಿರುದ್ಧ ದೂರು ನೀಡಲಾಗುತ್ತಿದೆ. ಸಂಪೂರ್ಣ ತನಿಖೆ ನಡೆಸಲಾಗುತ್ತದೆ. ಶಿವಳ್ಳಿ ಅವರು ಕ್ಷೇತ್ರದಲ್ಲಿ ಹೇಗಿದ್ದರು ಎನ್ನುವ ಕುರಿತು ಈಗಾಗಲೇ ಇಲ್ಲಿನ ಅಧಿಕಾರಿಗಳು, ವರ್ತಕರು, ಸಾಮಾನ್ಯ ಜನರು ಸೇರಿದಂತೆ ವಿರೋಧ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರೊಂದಿಗೆ ಮಾತನಾಡಿದ್ದೇನೆ. ಅವರಂತಹ ಒಳ್ಳೆಯ ವ್ಯಕ್ತಿತ್ವದ ಜನಪ್ರತಿನಿಧಿ ಮತ್ತೂಬ್ಬರಿಲ್ಲ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.

ಜಗ್ಗಲಿಗೆ ಬಾರಿಸಿ, ಐಸ್‌ಕ್ರೀಂ ಸವಿದ ಡಿಕೆಶಿ:
ಇಂಗಳಗಿ ಗ್ರಾಮದಲ್ಲಿ ಬಹಿರಂಗ ಸಭೆ ಹೊರಟ ಸಂದರ್ಭದಲ್ಲಿ ಗ್ರಾಮ ದೇವತೆ ಮೆರವಣಿಗೆಯಲ್ಲಿ ಡಿಕೆಶಿ ಜಗ್ಗಲಿಗೆ ಬಾರಿಸಿದರು. ಕಲಾವಿದರ ತಲೆ ಮೇಲಿದ್ದ ಪೇಟಾ ತೆಗೆದುಕೊಂಡು ತಾವೇ ಸುತ್ತಿಕೊಂಡು ಜಗ್ಗಲಿಗೆ ಬಾರಿಸಿದರು. ಮಾಜಿ ಸಚಿವ ವಿನಯ ಕುಲಕರ್ಣಿ ಸಾಥ್‌ ನೀಡಿದರು. ಜಾನುವಾರುಗಳ ಮೈ ಸವರಿ ನಮಸ್ಕರಿಸಿದರು. ಜನರು ಸೆಲ್ಫೀ ತೆಗೆದುಕೊಳ್ಳಲು ಮುಗಿಬಿದ್ದರು. ಕಮಡೊಳ್ಳಿಯಲ್ಲಿ ಐಸ್‌ ಕ್ರೀಂ ಖರೀದಿಸಿ ಸವಿದರು. ಛಬ್ಬಿ ಗ್ರಾಮದಲ್ಲಿ ಮುತ್ತೈದೆಯರು ಆರತಿ ಮಾಡುವ ಮೂಲಕ ಡಿಕೆಶಿ ಹಾಗೂ ಮುಖಂಡರಿಗೆ ಅದ್ಧೂರಿ ಸ್ವಾಗತ ಕೋರಿದರು.
ಇಂಗಳಗಿ ಗ್ರಾಮದಲ್ಲಿ ಬಹಿರಂಗ ಸಭೆ ಹೊರಟ ಸಂದರ್ಭದಲ್ಲಿ ಗ್ರಾಮ ದೇವತೆ ಮೆರವಣಿಗೆಯಲ್ಲಿ ಡಿಕೆಶಿ ಜಗ್ಗಲಿಗೆ ಬಾರಿಸಿದರು. ಕಲಾವಿದರ ತಲೆ ಮೇಲಿದ್ದ ಪೇಟಾ ತೆಗೆದುಕೊಂಡು ತಾವೇ ಸುತ್ತಿಕೊಂಡು ಜಗ್ಗಲಿಗೆ ಬಾರಿಸಿದರು. ಮಾಜಿ ಸಚಿವ ವಿನಯ ಕುಲಕರ್ಣಿ ಸಾಥ್‌ ನೀಡಿದರು. ಜಾನುವಾರುಗಳ ಮೈ ಸವರಿ ನಮಸ್ಕರಿಸಿದರು. ಜನರು ಸೆಲ್ಫೀ ತೆಗೆದುಕೊಳ್ಳಲು ಮುಗಿಬಿದ್ದರು. ಕಮಡೊಳ್ಳಿಯಲ್ಲಿ ಐಸ್‌ ಕ್ರೀಂ ಖರೀದಿಸಿ ಸವಿದರು. ಛಬ್ಬಿ ಗ್ರಾಮದಲ್ಲಿ ಮುತ್ತೈದೆಯರು ಆರತಿ ಮಾಡುವ ಮೂಲಕ ಡಿಕೆಶಿ ಹಾಗೂ ಮುಖಂಡರಿಗೆ ಅದ್ಧೂರಿ ಸ್ವಾಗತ ಕೋರಿದರು.

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.