ಬೊಮ್ಮಾಯಿ ಅವರನ್ನು ನಾವೇನು ರಬ್ಬರ್ ಸ್ಟ್ಯಾಂಪ್ ಎಂದಿಲ್ಲ: ಸಿದ್ದರಾಮಯ್ಯ
Team Udayavani, Jul 31, 2021, 1:48 PM IST
ಹುಬ್ಬಳ್ಳಿ: ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ನಾವೇನು ರಬ್ಬರ್ ಸ್ಟ್ಯಾಂಪ್ ಎಂದು ಹೇಳಿಲ್ಲ. ಅವರಷ್ಟಕ್ಕೆ ಅವರು ನಾನು ರಬ್ಬರ್ ಸ್ಟ್ಯಾಂಪ್ ಅಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ. ಇದರ ಅರ್ಥ ಏನೆಂಬುದು ರಾಜ್ಯದ ಜನತೆಗೆ ಗೊತ್ತಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ರಬ್ಬರ್ ಸ್ಟ್ಯಾಂಪ್ ಅಲ್ಲ. ಪುನಃ ಹೀಗೆನ್ನಬೇಡಿ ಎಂದು ಬೊಮ್ಮಾಯಿ ಅವರೇ ಹೇಳುತ್ತಿದ್ದಾರೆ. ಮುಖ್ಯಮಂತ್ರಿ ದೆಹಲಿಗೆ ಹೋಗಿರುವುದು ಹೈಕಮಾಂಡ್ ಆಶೀರ್ವಾದ ತೆಗೆದುಕೊಳ್ಳಲು ಎನ್ನುವುದಾದರೆ ರಾಜ್ಯದಲ್ಲಿ ಉಂಟಾಗಿರುವ ಸಂಕಷ್ಟಕ್ಕೆ ಕೇಂದ್ರದ ಅನುದಾನ ಕೇಳುವವರು ಯಾರು ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಪ್ರವಾಹದಿಂದಾಗಿ ಜನರು ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡು ಬೀದಿಯಲ್ಲಿ ನಿಂತಿದ್ದಾರೆ. ಇಂತಹ ಸಂದರ್ಭದಲ್ಲಿ ಬಿಜೆಪಿ ನಾಯಕರು ಅಧಿಕಾರಕ್ಕಾಗಿ ಓಡಾಡುತ್ತಿದ್ದಾರೆ. ಜನಹಿತ ಸಂಪೂರ್ಣ ಮರೆತಿದ್ದಾರೆ. ಮುಖ್ಯಮಂತ್ರಿ ಕಾಟಾಚಾರಕ್ಕೆ ಉತ್ತರ ಕನ್ನಡ ಜಿಲ್ಲಾ ಪ್ರವಾಹ ವೀಕ್ಷಣೆ ಮಾಡಿದ್ದಾರೆ. ಪ್ರವಾಹ ಬೆಳಗಾವಿ, ಬಾಗಲಕೋಟೆ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆಗಿದೆ. ಮುಖ್ಯಮಂತ್ರಿಯಾದವರು ಇತರೆ ಜಿಲ್ಲೆಗಳಿಗೆ ಹೋಗಬೇಕಾಗಿತ್ತು. ಆದರೆ ಒಂದೇ ಜಿಲ್ಲೆಗೆ ಹೋಗಿ ಜನರನ್ನು ಮೆಚ್ಚಿಸುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಿಲ್ಲ, ಮಂತ್ರಿಗಳಿಲ್ಲ. ಹೀಗಾಗಿರುವಾಗ ಪ್ರವಾಹದಂತಹ ಪರಿಸ್ಥಿತಿಯಲ್ಲಿ ಜನರ ಸಮಸ್ಯೆಗೆ ಸ್ಪಂದಿಸುವವರು ಯಾರು. ಬಿಜೆಪಿಯವರಿಗೆ ಜನರ ಹಿತ ಬೇಕಾಗಿಲ್ಲ. ಅಧಿಕಾರ, ಭ್ರಷ್ಟಾಚಾರವೇ ಇವರ ಮುಖ್ಯ ಕಸುಬಾಗಿದೆ ಎಂದರು.
ಸಿಎಂ ಬದಲಾವಣೆ ಮಾಡುತ್ತಿದ್ದಂತೆ ಭ್ರಷ್ಟಾಚಾರ ತೊಲಗಿ ಪಾರದರ್ಶಕತೆ ಬರುತ್ತದೆಯೇ. ಇಂದಿನ ಮುಖ್ಯಮಂತ್ರಿ ಹಿಂದಿನ ಭ್ರಷ್ಟಾಚಾರ ಸರ್ಕಾರದಲ್ಲಿ ಮಂತ್ರಿಯಾಗಿದ್ದವರು. ವ್ಯಕ್ತಿ ಬದಲಾವಣೆಯಾಗಿದೆ ವಿನಃ ಭ್ರಷ್ಟಾಚಾರ ಮುಂದುವರಿಯಲಿದೆ. ಸಿದ್ದರಾಮಯ್ಯಗೆ ವಯಸ್ಸಾಗಿಲ್ಲ. ಶಾಂತಿಯಿಂದ ವರ್ತಿಸುತ್ತಿದ್ದೇನೆ. ಸಂಯಮ ಕಳೆದುಕೊಂಡಿಲ್ಲ ಎಂದು ಯಡಿಯೂರಪ್ಪ ಅವರ ಹೇಳಿಕೆಗೆ ತಿರುಗೇಟು ನೀಡಿದ ಅವರು, ಅವರಷ್ಟು ವಯಸ್ಸು ನನಗೆ ಆಗಿಲ್ಲ. ಹೀಗಾಗಿ ನಾನು ಶಾಂತಿಯಿಂದ ಇದ್ದೇನೆ ಎಂದರು.
ಬೊಮ್ಮಾಯಿ ಸಂಕಷ್ಟದ ಪರಿಸ್ಥಿತಿಯಲ್ಲಿ ಸಿಎಂ ಆಗಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ದಿವಾಳಿಯಾಗಿದೆ. ಬೆಳೆ ಪರಿಹಾರ, ನೆರೆ ಪರಿಹಾರ ಘೋಷಣೆ ಮಾಡಿ ಮೂರು ವರ್ಷ ಕಳೆದರೂ ಮನೆ, ಬೆಳೆ ಕಳೆದುಕೊಂಡವರಿಗೆ ಇನ್ನೂ ಪರಿಹಾರ ಬಂದಿಲ್ಲ. ಕೇಂದ್ರದಿಂದ ನ್ಯಾಯಯುತವಾಗಿ ಬರಬೇಕಾದ ಅನುದಾನವನ್ನು ರಾಜ್ಯ ಸರ್ಕಾರ ಪಡೆದುಕೊಳ್ಳಬೇಕು. ಈ ಬಗ್ಗೆ ಯಾರೂ ಧ್ವನಿ ಎತ್ತುತ್ತಿಲ್ಲ. ಇಂತಹ ಸರ್ಕಾರದಿಂದ ಜನರಿಗೆ ಯಾವ ಪ್ರಯೋಜನವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ