ಉದ್ಯೋಗ ಖಾತ್ರಿ ನೀರಾವರಿಗೂ ವಿಸ್ತರಣೆ

ವಾಲ್ಮೀಯಲ್ಲಿ ಸಭೆ |ಇಲಾಖೆಗಳ ಮಧ್ಯೆ ಸಮನ್ವಯತೆಗೆ ಸಲಹೆ |ಪ್ರತಿ ರೈತನಿಗೂ ನೀರು ತಲುಪಿಸುವ ಹೊಣೆ

Team Udayavani, Jul 9, 2021, 6:53 PM IST

8hub-dwd13

ಧಾರವಾಡ: ಜಿಲ್ಲೆಯ ಮಲಪ್ರಭಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ ನೀರಾವರಿ ನಿರ್ವಹಣೆ ಕಾಮಗಾರಿಗಳನ್ನು ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳುವ ಸಂಬಂಧ ವಾಲ್ಮೀ ಸಂಸ್ಥೆಯ ನೇತೃತ್ವದಲ್ಲಿ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ (ನರೇಗಾ) ಅಧಿಕಾರಿಗಳು ಹಾಗೂ ನೀರು ಬಳಕೆದಾರರ ಸಹಕಾರ ಸಂಘಗಳ ಪದಾಧಿಕಾರಿಗಳ ಸಮನ್ವಯ ಸಭೆ ಜರುಗಿತು.

ವಾಲ್ಮೀ ನಿರ್ದೇಶಕ ಡಾ| ರಾಜೇಂದ್ರ ಪೋದ್ದಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನೀರಾವರಿ ಇಲಾಖೆಯ ಉದ್ದೇಶಗಳನ್ನು ಸಾಧಿ ಸಲು ಮಲಪ್ರಭಾ ಅಚ್ಚುಕಟ್ಟು ಪ್ರದೇಶದಡಿ ಬರುವ ಪ್ರತಿಯೊಬ್ಬ ರೈತನಿಗೂ ನೀರು ತಲುಪಿಸುವುದು ಮಹತ್ವದ ಜವಾಬ್ದಾರಿಯಾಗಿದೆ. ಜಲ ಸಂಪನ್ಮೂಲ ನಿರ್ವಹಣೆಗೆ ನರೇಗಾ ಯೋಜನೆ ಮಹತ್ವದ್ದಾಗಿದೆ. ಇದರ ಸಂಪೂರ್ಣ ಲಾಭ ಪಡೆಯಲು ಸಂಬಂಧಪಟ್ಟ ನೀರಾವರಿ ಇಲಾಖೆ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಹಾಗೂ ನೀರು ಬಳಕೆದಾರರ ಸಮನ್ವಯತೆ ಅತ್ಯಂತ ಅವಶ್ಯಕವಾಗಿದೆ ಎಂದರು.

ಪಿಆರ್‌ಇಡಿ ಸಹಾಯಕ ನಿರ್ದೇಶಕ ಜಗದೀಶ ಹಡಪದ ಮಾತನಾಡಿ, ನರೇಗಾ ಬೇಡಿಕೆ ಆಧಾರಿತ ಕಾರ್ಯಕ್ರಮವಾಗಿರುವುದರಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಹುದು. ನರೇಗಾ ಯೋಜನೆಯ ಲಾಭಗಳನ್ನು ರೈತರಿಗೆ ದೊರಕಿಸಿಕೊಡುವ ನಿಟ್ಟಿನಲ್ಲಿ ಕ್ಷೇತ್ರಮಟ್ಟದಲ್ಲಿ ವಿವಿಧ ಇಲಾಖೆಗಳ ಸಮನ್ವಯತೆ ಮತ್ತು ತಿಳಿವಳಿಕೆ ಬಹು ಮುಖ್ಯವಾಗಿದೆ ಎಂದರು. ನೀರಾವರಿ ಇಲಾಖೆ ಅಭಿಯಂತರಾದ ರಾಘವೇಂದ್ರ ಜಾಲಗಾರ ಹಾಗೂ ಆರ್‌.ಪಿ. ಅರವಿಂದ ಅವರು, ರೈತರ ಹೊಲಗಳಿಗೆ ಸಮರ್ಪಕವಾಗಿ ನೀರನ್ನು ತಲುಪಿಸುವ ಕಾಮಗಾರಿಗಳನ್ನು ನೀರಾವರಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆಗಳು ಯಾವ ರೀತಿ ಒಮ್ಮುಖ ಸಾ ಧಿಸಬಹುದು ಎಂದು ವಿವರಿಸಿದರು.

ನೀರು ಬಳಕೆದಾರರ ಸಹಕಾರಿ ಸಂಘಗಳ ಪರವಾಗಿ ಮಲಪ್ರಭಾ ನೀರಾವರಿ ಬಳಕೆದಾರರ ಸಂಘಗಳ ಮಹಾಮಂಡಳಗಳ ಅಧ್ಯಕ್ಷ ಡಿ.ವೈ. ಕಾಡಪ್ಪನವರ ಹಾಗೂ ಮಹಾಮಂಡಳದ ಮುಖ್ಯ ಕಾರ್ಯನಿರ್ವಾಹಕ ಅಧಿ  ಕಾರಿ ಜಿ.ಎಸ್‌. ದುಮ್ಮಳ್ಳಿ ಅವರು ನೀರಾವರಿ ಜಾಲದ ದುರಸ್ತಿ ಕುರಿತು ಮಾಹಿತಿ ನೀಡಿದರು. ವಾಲ್ಮೀ ಪ್ರಾಧ್ಯಾಪಕ ಬಿ.ವೈ. ಬಂಡಿವಡ್ಡರ ಪ್ರಾಸ್ತಾವಿಕ ಮಾತನಾಡಿ, ವ್ಯವಸ್ಥಿತ ಕಾಮಗಾರಿ ನಿರ್ವಹಿಸಲು ಹೆಚ್ಚಿನ ಅನುದಾನ ಪಡೆಯಲು ಉದ್ಯೋಗ ಖಾತ್ರಿ ಯೋಜನೆ ಯಾವ ರೀತಿ ಉಪಯೋಗವಾಗುತ್ತದೆ ಎಂದರು.

ನೀರಾವರಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಅ ಧಿಕಾರಿಗಳು ಹಾಗೂ ನೀರು ಬಳಕೆದಾರರ ಸಹಕಾರಿ ಸಂಘಗಳ ಪದಾಧಿ  ಕಾರಿಗಳು, ಮಲಪ್ರಭಾ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾ ಮಂಡಳದ ನಿರ್ದೇಶಕ ಸದಾಶಿವಗೌಡ ಪಾಟೀಲ ಭಾಗವಹಿಸಿದ್ದರು. ವಾಲ್ಮೀ ಸಹಾಯಕ ನಿರ್ದೇಶಕ ಪ್ರಭಾಕರ ಹಾದಿಮನಿ ಸ್ವಾಗತಿಸಿದರು. ವಾಲ್ಮೀ ಸಹಾಯಕ ಎಂಜಿನಿಯರ್‌ ಮಹದೇವಗೌಡ ಹುತ್ತನಗೌಡರ ನಿರೂಪಿಸಿದರು. ವಾಲ್ಮೀ ಸಮಾಲೋಚಕ ಸುರೇಶ ಕುಲಕರ್ಣಿ ವಂದಿಸಿದರು.

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.