ಚಿಗರಿ ಪ್ರಯಾಣಿಕರ ಸಂಖ್ಯೆ ಹೆಚ್ಚಳ ನಿರೀಕ್ಷೆ
Team Udayavani, Jun 7, 2020, 9:14 AM IST
ಹುಬ್ಬಳ್ಳಿ: ಲಾಕ್ಡೌನ್ ಕಾರಣದಿಂದಾಗಿ ಸ್ಥಗಿತಗೊಂಡು ಶುಕ್ರವಾರದಿಂದ ಆರಂಭಗೊಂಡಿರುವ ಬಿಆರ್ಟಿಎಸ್ ಚಿಗರಿ ಬಸ್ ಸೇವೆಗೆ ನಿರೀಕ್ಷಿತ ಸ್ಪಂದನೆ ಪ್ರಯಾಣಿಕರಿಂದ ದೊರೆತಿಲ್ಲವಾದರೂ, ಸೋಮವಾರದಿಂದ ಪ್ರಯಾಣಿಕರ ಸಂಖ್ಯೆಯಲ್ಲಿ ಸುಧಾರಣೆಯಾಗುವ ನಿರೀಕ್ಷೆ ಸಂಸ್ಥೆಯದ್ದಾಗಿದೆ. ಜೂ. 1ರಿಂದ ಬಸ್ ಸೇವೆ ಆರಂಭಗೊಂಡ ನಂತರ ಅವಳಿನಗರದ ಮಧ್ಯೆ ಸಿಟಿ ಬಸ್ಗಳ ಸೇವೆ ಒದಗಿಸಲಾಗುತ್ತಿದೆ. ಮೂರು ದಿನಗಳಿಂದ ಬೇಂದ್ರೆ ಬಸ್ಗಳ ಸಂಚಾರಕ್ಕೂ ಅವಕಾಶ ಕಲ್ಪಿಸಲಾಗಿದೆ.
ಜೂ. 5ರಿಂದ ಬಿಆರ್ಟಿಎಸ್ ಬಸ್ಗಳ ಸಂಚಾರ ಕೂಡ ಆರಂಭಗೊಂಡಿದೆ. ಕೋವಿಡ್ ಸೋಂಕು ಹರಡುವ ಸಾಧ್ಯತೆಯಿಂದಾಗಿ ಸಾಮಾಜಿಕ ಅಂತರ ಕಾಪಾಡುವುದಕ್ಕಾಗಿ ಇಬ್ಬರು ಕೂಡುವ ಆಸನದಲ್ಲಿ ಒಬ್ಬ ವ್ಯಕ್ತಿ ಮಾತ್ರ ಕೂಡಲು ಅವಕಾಶ ನೀಡಿದ್ದರೂ ಸಂಚಾರ ದಟ್ಟಣೆಯಿಂದಾಗಿ ಪ್ರತಿ ಆಸನದಲ್ಲಿಯೂ ಕುಳಿತು ಪ್ರಯಾಣಿಸುತ್ತಿದ್ದರು. ದಿನದಿಂದ ದಿನಕ್ಕೆ ಬಸ್ನಲ್ಲಿ ಸಂಚರಿಸುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗ ಚಿಗರಿ ಬಸ್ಗಳು ಕೂಡ ಸೇವೆ ಆರಂಭಿಸಿರುವುದು ಜನರಿಗೆ ಅನುಕೂಲವಾಗಿದೆ.
ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಹುಬ್ಬಳ್ಳಿ-ಧಾರವಾಡ ಮಧ್ಯೆ ಒಟ್ಟು 40 ಹವಾನಿಯಂತ್ರಿತ ಬಸ್ ಗಳ ಸೇವೆ ಒದಗಿಸಲಾಗುತ್ತಿದೆ. ಕಳೆದೆರಡು ದಿನಗಳಿಂದ ಪ್ರಯಾಣಿಕರ ಪ್ರತಿಕ್ರಿಯೆ ತೃಪ್ತಿಕರವಾಗಿಲ್ಲ. ಆದರೆ ಸೋಮವಾರದಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಳಗೊಳ್ಳುವ ನಿರೀಕ್ಷೆಯಿದೆ ಎಂದು ಬಿಆರ್ಟಿಎಸ್ ವಿಶೇಷ ಅಧಿಕಾರಿ ವಿಶ್ವಜ್ಞ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ