ಅಕ್ಟೋಬರ್‌ ಅಂತ್ಯಕ್ಕೆ ಸೇವೆಗೆ ಸಜ್ಜಾಗುವ ನಿರೀಕ್ಷೆ


Team Udayavani, Aug 10, 2018, 4:11 PM IST

10-agust-18.jpg

ಹುಬ್ಬಳ್ಳಿ: ಇಲ್ಲಿನ ಕಿಮ್ಸ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆ ಕಟ್ಟಡ ಕಾಮಗಾರಿ ಬಹುತೇಕ ಮುಗಿದಿದ್ದು, ವಿವಿಧ ವೈದ್ಯಕೀಯ ಹಾಗೂ ಇನ್ನಿತರ ಸೌಲಭ್ಯಗಳ ಅಳವಡಿಕೆಯೊಂದಿಗೆ ಅಕ್ಟೋಬರ್‌ ವೇಳೆಗೆ ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಳ್ಳುವ ನಿರೀಕ್ಷೆ ಇದೆ.

ಅಂದಾಜು 150 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆಗೆ ಸೆಪ್ಟೆಂಬರ್‌ ಮೊದಲ ವಾರದಿಂದ ಶಸ್ತ್ರಚಿಕಿತ್ಸಾ ಘಟಕ ಸೇರಿದಂತೆ ವೈದ್ಯಕೀಯ ಗ್ಯಾಸ್‌ ಪೈಪಿಂಗ್‌ ಸಿಸ್ಟಮ್‌ (ಎಂಜಿಪಿಎಸ್‌) ಅಳವಡಿಸುವ ಕಾಮಗಾರಿ ಆರಂಭವಾಗಲಿದೆ. ಅಕ್ಟೋಬರ್‌ದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ.

ಕೇಂದ್ರ ಸರಕಾರದ ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ 3ರ ಅಡಿ 120 ಕೋಟಿ ರೂ. ಹಾಗೂ ರಾಜ್ಯ ಸರಕಾರದ 30 ಕೋಟಿ ರೂ. ಅನುದಾನ ಸೇರಿ ಒಟ್ಟು 150 ಕೋಟಿ ರೂ. ವೆಚ್ಚದಲ್ಲಿ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆಯು ನಿರ್ಮಾಣವಾಗುತ್ತಿದೆ. ಈ ಹಣವನ್ನು ಸಿವಿಲ್‌ ಕಾಮಗಾರಿಯ ಮೆಕ್ಯಾನಿಕಲ್‌, ಇಲೆಕ್ಟ್ರಿಕಲ್‌, ಪ್ಲಂಬಿಂಗ್‌ (ಎಂಇಪಿ)ಗೆ 75 ಕೋಟಿ ರೂ. ಹಾಗೂ 65 ಕೋಟಿ ರೂ. ವೆಚ್ಚದಲ್ಲಿ ವೈದ್ಯಕೀಯ ಗ್ಯಾಸ್‌ ಪೈಪಿಂಗ್‌ ಸಿಸ್ಟಮ್‌ (ಎಂಜಿಪಿಎಸ್‌)ಗೆ, ಮಾಡ್ಯುಲರ್‌ ಆಪರೇಶನ್‌ ಥೇಟರ್‌ (ಎಂಒಟಿ)ಗೆ ಮತ್ತು ವೈದ್ಯಕೀಯ ಉಪಕರಣ (ಎಂಇ) ಹಾಗೂ 10 ಕೋಟಿ ರೂ. ವೆಚ್ಚದಲ್ಲಿ ವೈದ್ಯಕೀಯ ಪೀಠೊಪಕರಣ, ಆಡಳಿತಾತ್ಮಕ ಪೀಠೊಪಕರಣಕ್ಕೆ ಖರ್ಚು ಮಾಡಲಾಗುತ್ತಿದೆ. ಕೇಂದ್ರ ಸರಕಾರ ಸ್ವಾಮ್ಯದ ಹೈದರಾಬಾದ್‌ ಮೂಲದ ಎಚ್‌ಎಲ್‌ಎಲ್‌-ಹೈಟ್ಸ್‌ ಕಂಪನಿ ಈ ಕಾಮಗಾರಿಯ ನಿರ್ವಹಣೆ ಮಾಡುತ್ತಿದೆ. ನಾಸಿಕ್‌ ಮೂಲದ ಹರ್ಷ ಕನ್‌ಸ್ಟ್ರಕ್ಷನ್‌ ಕಂಪನಿಯು ಅಂದಾಜು 1.70 ಲಕ್ಷ ಚದರಡಿ ವಿಸ್ತೀರ್ಣದಲ್ಲಿ ಕಟ್ಟಡ ನಿರ್ಮಿಸುತ್ತಿದೆ.

ಹರ್ಷ ಕಂಪನಿಗೆ 69.70 ಕೋಟಿ ರೂ. ವೆಚ್ಚದಲ್ಲಿ 18 ತಿಂಗಳ ಅವಧಿಯಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿಕೊಡಲು 2016ರ ಆ. 12ರಂದು ಟೆಂಡರ್‌ ನೀಡಲಾಗಿತ್ತು. ಅದರಂತೆ ಕಂಪನಿ ಕಾಮಗಾರಿ ಆರಂಭಿಸಿ, ಮಾರ್ಚ್‌ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಲು ಯೋಜಿಸಿತ್ತು. ಆದರೆ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆ ಕಟ್ಟಡದ ಮುಂಭಾಗದಲ್ಲಿದ್ದ ಶವಾಗಾರ ಸ್ಥಳಾಂತರ, ತ್ಯಾಜ್ಯ ಶುದ್ಧೀಕರಣ ಘಟಕಕ್ಕೆ ರಾಜ್ಯ ಸರಕಾರದ ಅನುದಾನ ನೀಡುವಲ್ಲಿ ಹಾಗೂ ಅಗ್ನಿಶಾಮಕ ದಳ ಇಲಾಖೆಯಿಂದ ಅನುಮತಿ ದೊರೆಯದ್ದರಿಂದ ಕಟ್ಟಡ ಕಾಮಗಾರಿ ವಿಳಂಬವಾಗಿತ್ತು. ಏಪ್ರಿಲ್‌ ಮೊದಲ ವಾರದಲ್ಲಿ ಶವಾಗಾರ ಸ್ಥಳಾಂತರ ಮಾಡಲಾಗಿದ್ದು, ಅದರ ಕಟ್ಟಡ ತೆರವುಗೊಳಿಸಲಾಗಿದೆ. ಕಂಪನಿಯು ಈಗ ಕಟ್ಟಡ ಮುಂಭಾಗದಲ್ಲಿ ಕಾಮಗಾರಿ ಕೈಗೆತ್ತಿಕೊಂಡಿದ್ದು, ಇಲ್ಲಿ ದೂರಸಂಪರ್ಕ ಇಲಾಖೆಯ ಕೇಬಲ್‌, ವಿದ್ಯುತ್‌ ಸಂಪರ್ಕ ಕೇಬಲ್‌, ನೀರು ಸರಬರಾಜು ಪೈಪ್‌ಲೈನ್‌ ಗಳು ಅಡಚಣೆ ಆಗುತ್ತಿವೆ. ಇವುಗಳಿಗೆ ಧಕ್ಕೆಯಾಗದ ರೀತಿ ಕಾಮಗಾರಿ ನಡೆಸುತ್ತಿದ್ದಾರೆ.

ಈಗಾಗಲೇ ಕಟ್ಟಡದಲ್ಲಿ ಪ್ಲೋರಿಂಗ್‌, ಬಾಗಿಲು ಅಳವಡಿಕೆ, ಸೀಲಿಂಗ್‌ ಕಾಮಗಾರಿಯು ಬಹುತೇಕ ಮುಗಿದಿದ್ದು, ಕಟ್ಟಡದ ವರಾಂಡ್‌ದಲ್ಲಿ ಗ್ರೀಲ್‌ ಅಳವಡಿಕೆ ಇನ್ನಿತರೆ ಸಣ್ಣ-ಪುಟ್ಟ ಕಾಮಗಾರಿಗಳು ಬಾಕಿ ಉಳಿದಿದ್ದು, ಸಿವಿಲ್‌ ಕಾಮಗಾರಿಯು ಬಹುತೇಕ ಪೂರ್ಣಗೊಂಡಿದೆ. ಸೆಪ್ಟೆಂಬರ್‌ ಮೊದಲ ವಾರದಿಂದ ಶಸ್ತ್ರಚಿಕಿತ್ಸಾ ಘಟಕ ಹಾಗೂ ಎಂಜಿಪಿಎಸ್‌, ಎಂಓಟಿ, ಎಂಇಗಳ ಅಳವಡಿಕೆ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಕಟ್ಟಡ ಕಾಮಗಾರಿ ಕೈಗೆತ್ತಿಕೊಂಡಿರುವ ಹರ್ಷ ಕಂಪನಿಯು ಅಕ್ಟೋಬರ್‌ ಅಂತ್ಯದೊಳಗೆ ಪೂರ್ಣಗೊಸುವ ನಿಟ್ಟಿನಲ್ಲಿ ಭರದಿಂದ ಸಿದ್ಧತೆಗಳನ್ನು ನಡೆಸಿದೆ.

ಕಿಮ್ಸ್‌ನಲ್ಲಿ ನಿರ್ಮಾಣವಾಗುತ್ತಿರುವ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆ ಕಟ್ಟಡವು ಕಾರಣಾಂತರಗಳಿಂದ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಈಗ ಎಲ್ಲ ಸಮಸ್ಯೆಗಳು ಬಗೆಹರಿದಿವೆ. ಎಂಜಿಪಿಎಸ್‌, ಎಂಒಟಿ ಸೇರಿದಂತೆ ಇನ್ನಿತರೆ ಕಾಮಗಾರಿ ಬಾಕಿ ಇದ್ದು, ಅಕ್ಟೋಬರ್‌ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು.
ರತ್ನಾಚಲಂ, ಎಂಜಿನಿಯರಿಂಗ್‌ ಇನ್‌ಚಾರ್ಜ್‌, ಹೈಟ್‌

ಕಿಮ್ಸ್‌ ಆವರಣದಲ್ಲಿದ್ದ ಶವಾಗಾರ ಸ್ಥಳಾಂತರ ಸೇರಿದಂತೆ ಇನ್ನಿತರೆ ಕೆಲ ಸಮಸ್ಯೆಗಳಿಂದಾಗಿ ನಿಗದಿತ ಸಮಯದಲ್ಲಿ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆಯ ಕಟ್ಟಡ ಕಾಮಗಾರಿ ವಿಳಂಬವಾಗಿತ್ತು. ಏಪ್ರಿಲ್‌ನಲ್ಲಿ ಶವಾಗಾರ ಸ್ಥಳಾಂತರವಾಗಿದೆ. ಅಕ್ಟೋಬರ್‌ ಅಂತ್ಯದೊಳಗೆ ಕಟ್ಟಡದ ಕಾಮಗಾರಿ ಪೂರ್ಣಗೊಳಿಸಲಾಗುವುದು.
ಅನಿಲ ಸಂಪಗಾಂವ, ಪ್ರೊಜೆಕ್ಟ್
ಮ್ಯಾನೇಜರ್‌, ಹರ್ಷ ಕನ್‌ಸ್ಟ್ರಕ್ಷನ್‌ ಪ್ರೈ.ಲಿ.,

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.