ಖಾರವಾಯಿತು ಹಸಿ ಮೆಣಸಿನಕಾಯಿ

|ಕೀಟಬಾಧೆಯಿಂದ ಕಂಗಾಲಾದ ಬೆಳೆಗಾರ |ಇಳುವರಿ ಹೊಸ್ತಿಲಲ್ಲಿ ಕಾಡಿದ ಎಲೆ ಮುಟುರ |ಬರಗಾಲದಲ್ಲಿ ಬರೆ

Team Udayavani, Jun 23, 2019, 8:49 AM IST

hubali-tdy-1..

ಧಾರವಾಡ: ಮುಂಗಾರು ವಿಳಂಬದಿಂದ ಬಿತ್ತನೆಗೆ ರೈತ ಸಮುದಾಯ ಹಿಂದೇಟು ಹಾಕುತ್ತಿರುವ ಸನ್ನಿವೇಶದಲ್ಲಿ ಜಿಲ್ಲೆಯಲ್ಲಿ ಈಗ ಹಸಿ ಮೆಣಸಿನಕಾಯಿ ಬೆಳೆದ ರೈತರು ಕೀಟಬಾಧೆಯಿಂದ ಕಂಗಾಲಾಗಿದ್ದಾರೆ. ಜೊತೆಗೆ ಮುಂದೆ ಹಸಿ ಹಾಗೂ ಒಣ ಮೆಣಸಿನಕಾಯಿ ಬೆಳೆಯಲು ಕಾಯುತ್ತಿರುವ ರೈತರೂ ಆತಂಕಕ್ಕೆ ಒಳಗಾಗಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 340 ಹೆಕ್ಟೇರ್‌ ಪ್ರದೇಶದಲ್ಲಿ ನೀರಾವರಿಯಿಂದ ಹಸಿ ಮೆಣಸಿನಕಾಯಿ ಬೆಳೆ ಬೆಳೆಯಲಾಗಿದ್ದು, ಇನ್ನೇನು ಇಳುವರಿ ಕೈ ಸೇರುವ ಕಾಲ ಸನ್ನಿಹಿತದಲ್ಲಿದೆ. ಆದರೆ ಹವಾಮಾನ ವೈಪರೀತ್ಯ ಹಾಗೂ ಮಳೆ ಬಾರದೇ ಮೋಡ ಕವಿದ ವಾತರಣದಿಂದ ಈ ಬೆಳೆಗೆ ಕೀಟಬಾಧೆ ಶುರುವಾಗಿದೆ.

ಕ್ಷೀಣಿಸಿದ ಹಸಿ ಮೆಣಸಿನಕಾಯಿ: ಜಿಲ್ಲೆಯಲ್ಲಿ ವಾರ್ಷಿಕ 2 ಸಾವಿರ ಹೆಕ್ಟೇರ್‌ದಲ್ಲಿ ಹಸಿ ಮೆಣಸಿನಕಾಯಿ ಬೆಳೆಯಲಾಗುತ್ತಿದ್ದು, ನೀರಾವರಿ ವ್ಯವಸ್ಥೆ ಬಳಕೆ ಮಾಡಿ ಈವರೆಗೆ 340 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯಲಾಗಿದೆ. ಈ ರೈತರು ಬೋರ್‌ವೆಲ್ ನೆಚ್ಚಿಕೊಂಡಿದ್ದು, ಬೋರ್‌ವೆಲ್ಗಳಿಂದ ನೀರಿನ ಲಭ್ಯತೆ ಕಡಿಮೆ ಆದ ಕಾರಣ ಬಿತ್ತನೆ ಪ್ರಮಾಣದ ಮೇಲೆ ನೇರ ಹೊಡೆತ ಬೀಳುವಂತೆ ಮಾಡಿದೆ. ಸದ್ಯ ಬೆಳೆದು ನಿಂತು ಇಳುವರಿ ಸಮಯದಲ್ಲಿ ಕಂಡು ಬಂದಿರುವ ರೋಗ ಲಕ್ಷಣಗಳು ರೈತರ ಮೊಗದಲ್ಲಿ ಚಿಂತೆ ಮೂಡುವಂತೆ ಮಾಡಿದೆ. ಇನ್ನೂ ಜೂನ್‌ ತಿಂಗಳಲ್ಲಿ ಮಳೆಯಾಶ್ರಿತವಾಗಿ ಹಸಿ ಮೆಣಸಿನಕಾಯಿ ಬೆಳೆಯುವ ರೈತರು ಮಳೆಗಾಗಿ ಕಾಯುತ್ತಿದ್ದು, ಸದ್ಯಅವರಿಗೆ ಈಗ ರೋಗದ ಭೀತಿ ಇಲ್ಲ.

ಕೀಟಬಾಧೆ ಉಪಟಳ: 5-6 ತಿಂಗಳ ಅವಧಿಯ ಈ ಬೆಳೆಯನ್ನು ಜನವರಿಯಲ್ಲಿ ಬೆಳೆದಿದ್ದು, ಇನ್ನೂ ಒಂದೂವರೆ ತಿಂಗಳಲ್ಲಿ ಉತ್ತಮ ಇಳುವರಿ ನೀಡುತ್ತೆ ಎಂಬ ನಿರೀಕ್ಷೆಯಲ್ಲಿರುವ ರೈತರಲ್ಲಿ ಕೀಟಬಾಧೆ ಆತಂಕ ಹೆಚ್ಚಾಗಿದೆ. ಜಿಲ್ಲೆಯ ಅಲ್ಲಲ್ಲಿ ಈಗ ಎಲೆ ಮುಟುರ ರೋಗ ಕಾಣಿಸಿಕೊಂಡಿದ್ದು, ತನ್ನ ವ್ಯಾಪ್ತಿ ವಿಸ್ತರಿಸಿಕೊಳ್ಳುತ್ತಿದೆ. ಗಾಳಿ ಮೂಲಕವೇ ಹರಡುವ ಈ ರೋಗದಿಂದ ಮೆಣಸಿನಕಾಯಿ ಗಿಡದ ರಸವೇ ಮಾಯವಾಗಿ ಸಾಯುತ್ತದೆ. ಅದರಲ್ಲೂ ಹವಾಮಾನ ವೈಪರೀತ್ಯ, ಮಳೆ ಕ್ಷೀಣಿಸಿರುವ ಈಗಿನ ಮೋಡ ಕವಿದ ವಾತಾವರಣ ರೋಗ ಹರಡಲು ಪೂರಕವಾಗಿದೆ.

ಹತೋಟಿಗೆ ಕ್ರಮವುಂಟು: ಮಳೆ ಬಂದರೆ ಈ ರೋಗಕ್ಕೆ ಕಡಿವಾಣ ಬೀಳುತ್ತದೆಯೆಂದು ತೋಟಗಾರಿಕೆ ಇಲಾಖೆ ತಜ್ಞರು ಹೇಳುತ್ತಿದ್ದಾರೆ. ಆದರೆ ಎಷ್ಟೇ ಔಷಧಿ ಹೊಡೆದರೂ ಹತೋಟಿಗೆ ಬರುತ್ತಿಲ್ಲ ಎಂಬುದು ರೈತರ ಅಳಲು. ಪ್ರತಿ ಲೀಟರ್‌ ನೀರಿಗೆ ಕಾನ್‌ ಫಿಟಾರ್‌ ಔಷಧಿ 0.25 ಎಂಎಲ್ ಹಾಗೂ ಹೆರ್ಯಾಕೊನಾಟೋಲ್ ಔಷಧಿಯನ್ನು 1 ಎಂಎಲ್ ಸೇರಿಸಿ 1-2 ಸಲ ಸಿಂಪಡಿಸಿದರೆ ರೋಗ ಹತೋಟಿಗೆ ಬರಲಿದೆ. ಔಷಧಿ ಸಿಂಪಡಿಸಿದ ವಾರದ ನಂತರ ಎಡೆಕುಂಟಿ ಹೊಡೆದರೆ ಉತ್ತಮ ಫಲಿತಾಂಶ ಸಿಗಲಿದೆ ಎಂದು ಸಹಾಯಕ ತೋಟಗಾರಿಕೆ ಅಧಿಕಾರಿ ಪ್ರವೀಣ ಕಾಮಾಟಿ ‘ಉದಯವಾಣಿ’ಗೆ ತಿಳಿಸಿದ್ದಾರೆ.

ಒಣ ಮೆಣಸಿನಕಾಯಿಗೂ ಆತಂಕ: ಜಿಲ್ಲೆಯಲ್ಲಿ ಕಳೆದ ಬಾರಿ 31,293 ಹೆಕ್ಟರ್‌ ಪ್ರದೇಶದಲ್ಲಿ ಮಳೆಯಾಶ್ರಿತ ಒಣ ಮೆಣಸಿನಕಾಯಿ ಬೆಳೆಯಲಾಗಿತ್ತು. ಕುಂದಗೋಳ ತಾಲೂಕಿನಲ್ಲಿಯೇ 14,700 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. 8-9 ತಿಂಗಳ ಅವಧಿಯಲ್ಲಿ ಇಳುವರಿ ನೀಡುವ ಒಣ ಮೆಣಸಿನಕಾಯಿ ಬಿತ್ತನೆ ಜುಲೈ ತಿಂಗಳಿಂದ ಆರಂಭವಾಗಲಿದೆ. ಇದಕ್ಕೂ ಮುನ್ನ ಮುಂಗಾರಿನ ಉತ್ತಮ ಮಳೆ ಬೇಕಿದ್ದು, ರೈತರೂ ಮಳೆಗೆ ಕಾಯುತ್ತಿದ್ದಾರೆ. ನಿಗದಿತ ಪ್ರಮಾಣದ ಮಳೆ ಆಗದಿದ್ದರೆ ಒಣ ಮೆಣಸಿನಕಾಯಿ ಬಿತ್ತನೆ ಹಾಗೂ ಇಳುವರಿ ಮೇಲೂ ನೇರ ಪರಿಣಾಮ ಉಂಟಾಗಲಿದೆ.

ಎಂಟಿಆರ್‌ ಕಂಪನಿಗೂ ಬೇಕು ಜಿಲ್ಲೆಯ ಒಣ ಮೆಣಸಿನಕಾಯಿ

ಜಿಲ್ಲೆಯ ಒಣ ಮೆಣಸಿನಕಾಯಿಗೆ ಉತ್ತಮ ಬೇಡಿಕೆ ಇದ್ದು, ಕುಂದಗೋಳದ ಬ್ಯಾಡಗಿ ಮೆಣಸಿನಕಾಯಿಯ ಬಣ್ಣ, ಖಾರಕ್ಕೆ ಮನ ಸೋಲದವರಿಲ್ಲ. ಪ್ರತಿಷ್ಠಿತ ಎಂಟಿಆರ್‌ ಕಂಪನಿಯೇ ನೇರವಾಗಿ ರೈತರಲ್ಲಿ ಬಂದು ಒಣ ಮೆಣಸಿನಕಾಯಿ ಖರೀದಿ ಮಾಡುತ್ತಿದೆ. ತೋಟಗಾರಿಕೆ ಇಲಾಖೆ ಮುಂದಾತ್ವದಲ್ಲಿ ಕಳೆದ ವರ್ಷದಿಂದ ಇದು ಆರಂಭಗೊಂಡಿದೆ. ಕಳೆದ ಬಾರಿ ಎಂಟಿಆರ್‌ ಕಂಪನಿ ಜಿಲ್ಲೆಯ ರೈತ ಉತ್ಪಾದಕರ ಸಂಘದಿಂದ ಪ್ರತಿ ಕೆಜಿಗೆ 130 ರೂ.ದಂತೆ 45 ಲಕ್ಷ ರೂ. ಬೆಲೆಯ 30 ಟನ್‌ಗಳಷ್ಟು ಒಣ ಮೆಣಸಿನಕಾಯಿ ಖರೀದಿಸಿದ್ದು, ಈ ಸಲ 100 ಟನ್‌ ಖರೀದಿಸಲು ಕಂಪನಿ ಮುಂದೆ ಬಂದಿದೆ. ಆದರೆ ಮಳೆ ಕೊರತೆಯಿಂದ ಇಳುವರಿ ಕೊರತೆ ಜೊತೆಗೆ ಗುಣಮಟ್ಟದ ಮೇಲೂ ಹೊಡೆತ ಬಿದ್ದರೆ ರೈತ ಉತ್ಪಾದಕರ ಸಂಘದ 1 ಸಾವಿರ ಒಣ ಮೆಣಸಿನಕಾಯಿ ಬೆಳೆಯುವ ರೈತರಿಗೆ ಹೊಡೆತ ಬೀಳುವ ಲಕ್ಷಣಗಳಿವೆ.
ರೋಗ ಬಾಧೆಗೆ ತುತ್ತಾದ ಬೆಳೆಗೆ ವಿಮೆಯೂ ಇಲ್ಲ:

ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ಜಾರಿ ಮಾಡಿದ್ದು, ಅದು ಕಳೆದ ಬಾರಿ 100 ಹೆಕ್ಟೇರ್‌ ಪ್ರದೇಶದಲ್ಲಿ ಹಸಿ ಮೆಣಸಿನಕಾಯಿ ಬೆಳೆದ ಹೋಬಳಿಗಳಾದ ಅಮ್ಮಿನಬಾವಿ, ಧಾರವಾಡ, ಗರಗ, ಛಬ್ಬಿ ಹಾಗೂ ದುಮ್ಮವಾಡಗಳಿಗೆ ಈ ಸಲ ಅನ್ವಯಿಸಲಾಗಿದೆ. ಜೂ. 30 ರೊಳಗೆ ರೈತರು ವಿಮೆ ಅರ್ಜಿ ಹಾಕಲು ಅವಕಾಶ ಇದ್ದು, ಮುಂದೆ ಹವಾಮಾನ ವೈಪರೀತ್ಯದಿಂದ ಬೆಳೆಗೆ ಹಾನಿಯಾದರೆ ವಿಮೆ ದೊರಕಲಿದೆ. ಆದರೆ ನೀರಾವರಿ ಮೂಲಕ ಬೆಳೆದು ಈಗ ರೋಗಕ್ಕೆ ತುತ್ತಾಗಿರುವ ಬೆಳೆಗೆ ವಿಮೆಯೂ ಇಲ್ಲ. ಹೀಗಾಗಿ ಈ ರೈತರು ಇನ್ನಷ್ಟು ಸಂಕಷ್ಟ ಎದುರಿಸುವಂತಾಗಿದೆ.
•ಶಶಿಧರ್‌ ಬುದ್ನಿ

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.