ಮಳೆಗೆ ಕುಸಿದು ಬಿದ್ದ ಶಾಲಾ ಕೊಠಡಿ
Team Udayavani, Jun 24, 2018, 3:46 PM IST
ಬಾದಾಮಿ: ಶುಕ್ರವಾರ ರಾತ್ರಿ ಬಿದ್ದ ಮಳೆಗೆ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ಕಟ್ಟಡ ಕುಸಿದು ಬಿದ್ದಿದೆ. ಇಂತಹ ಶಿಥಿಲಾವಸ್ಥೆಯ ಕಟ್ಟಡದಲ್ಲಿ ಮಕ್ಕಳು ಭಯದ ವಾತಾವರಣದಲ್ಲಿ ಕಲಿಯುತ್ತಿದ್ದಾರೆ.
ತಾಲೂಕು ಕೇಂದ್ರದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯು 1965ರಲ್ಲಿ ಅಂದಿನ ಶಾಸಕರಾಗಿದ್ದ ದಿಂ.ಕೆ.ಎಂ.ಪಟ್ಟಣಶೆಟ್ಟಿಯವರು ಶಂಕುಸ್ಥಾಪನೆ ನೆರವೇರಿಸಿದ್ದರು. ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಈ ಶಾಲೆಯಲ್ಲಿ 1 ರಿಂದ 7 ನೇ ತರಗತಿಯವರೆಗೆ ಶಿಕ್ಷಣ ನೀಡುತ್ತಿದ್ದು, ಒಟ್ಟು 185 ಮಕ್ಕಳು ಅಧ್ಯಯನ ಮಾಡುತ್ತಿದ್ದಾರೆ. ಒಟ್ಟು 8 ಜನ ಶಿಕ್ಷಕರಿದ್ದಾರೆ. ತರಗತಿಗೆ ತಕ್ಕಂತೆ ಈ ಶಾಲೆಗೆ 7 ಕೊಠಡಿಗಳು ಬೇಕಾಗಿದ್ದು, ಈಗ 4 ಕೊಠಡಿಗಳಿವೆ. ಇದರಲ್ಲಿ 3 ಹಂಚಿನ ಕಟ್ಟಡ ಸುಸ್ಥಿತಿಯಲ್ಲಿವೆ. ಈಗ ಒಂದು ಕೊಠಡಿ ಶಿಥಿಲಾವಸ್ಥೆಯಿಂದ ಕುಸಿದು ಬಿದ್ದಿದೆ.
ಬಯಲಲ್ಲಿಯೇ ಪಾಠ: ಶಾಲೆಯಲ್ಲಿ ಅಗತ್ಯ ತಕ್ಕಂತೆ ಶಾಲಾ ಕೊಠಡಿಗಳು ಇಲ್ಲದ ಕಾರಣ ಮಕ್ಕಳು ಶಾಲೆಯ ಹೊರಗೆ ಬಯಲಿನಲ್ಲಿ ಪಾಠ ಅಧ್ಯಯನ ಮಾಡುತ್ತಿದ್ದಾರೆ. ಮಕ್ಕಳ ಸಂಖ್ಯೆ ಮತ್ತು ತರಗತಿಗೊಂದರಂತೆ ಶಾಲಾ ಕೊಠಡಿಗಳು ಇಲ್ಲದ ಕಾರಣ ಕೊಠಡಿ ಕೊರತೆ ಇರುವುದರಿಂದ ಪಾಠ ಮಾಡಲು ತೊಂದರೆಯಾಗಿದೆ.
ಗುಣಮಟ್ಟದ ಶಿಕ್ಷಣ: ಶಾಲೆಯಲ್ಲಿ 8 ಜನ ಶಿಕ್ಷಕರು ಪಾಠ ಮಾಡುತಿದ್ದು, ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ಚೆಸ್ನಲ್ಲಿ ಈ ಶಾಲೆಯ ಮಹಾಲಕ್ಷ್ಮೀ ಕೋರನ್ನವರ, ಶೈಲಾ ನಂದಿಕೇಶ್ವರ ಸೇರಿದಂತೆ ಇತರ ಮಕ್ಕಳು ರಾಜ್ಯ ಮತ್ತು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ, ಬಹುಮಾನ ಪಡೆದಿದ್ದಾರೆ. ವಾಲಿಬಾಲ್, ಕಬಡ್ಡಿ, ಖೋಖೋ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ನೂತನ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ಸಿಎಂ, ಶಾಸಕ ಸಿದ್ದರಾಮಯ್ಯನವರು ಕಳೆದ ಜೂ.11 ರಂದು ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಆಗ್ರಹಿಸಿ ಮನವಿ ಸಲ್ಲಿಸಿದ್ದಾರೆ. ಶಾಲೆಯಲ್ಲಿ ಮೂಲ ಸೌಕರ್ಯಗಳಾದ ನೀರು, ಶೌಚಾಲಯ, ಆಟದ ಮೈದಾನ, ಕೊಠಡಿಗಳಲ್ಲಿ ಶಾಲಾ ಶಿಕ್ಷಕರೇ ಸ್ವಂತ ಹಣದಿಂದ ಪೈಪ್ಲೈನ್ ಅಳವಡಿಸಿ ನೀರಿನ ಸೌಕರ್ಯ ಮಾಡಿಕೊಂಡಿದ್ದಾರೆ. ಶಾಲೆಯಲ್ಲಿ ಶೌಚಾಲಯ ಇಲ್ಲದಾಗಿದೆ. ನೂತನ ಶೌಚಾಲಯ ನಿರ್ಮಾಣಕ್ಕಾಗಿ ಸರಕಾರದಿಂದ ಕಳೆದ ವರ್ಷವೇ ರೂ.1,75,000 ಮಂಜೂರಾಗಿದೆ. ಆದರೆ ಇದುವರೆಗೂ ಶೌಚಾಲಯ ನಿರ್ಮಿಸಿಲ್ಲ. ಇದರಿಂದ ಮಕ್ಕಳು ತೊಂದರೆ ಪಡುವಂತಾಗಿದೆ. ಆಟದ ಮೈದಾನ ಮತ್ತು ಕೊಠಡಿಗಳು ಇಲ್ಲದ ಕಾರಣ ಮಕ್ಕಳ ಕಲಿಕೆಗೆ ಬಹಳಷ್ಟು ತೊಂದರೆಯಾಗಿದೆ ಎಂದು ಪಾಲಕರು ಆತಂಕ ವ್ಯಕ್ತಪಡಿಸಿದ್ದಾರೆ.
ಜನಪ್ರತಿನಿಧಿಗಳು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ತುರ್ತು ಗಮನಹರಿಸಿ ಅಗತ್ಯ ಶಾಲಾ ಕೊಠಡಿಗಳನ್ನು ನಿರ್ಮಿಸುವುದರ ಜೊತೆಗೆ ಹಾಲಿ ಇರುವ ಕೊಠಡಿ ದುರಸ್ತಿ ಮಾಡಿಸಬೇಕು ಎಂದು ಪಾಲಕರು, ಎಸ್ಡಿಎಂಸಿ ಸದಸ್ಯರು, ಗ್ರಾಮಸ್ಥರು ಆಗ್ರಹಿಸಿದ್ದಾರೆ .
ಶಾಸಕ ಸಿದ್ದರಾಮಯ್ಯನವರು ಊರಿಗೆ ಭೇಟಿ ನೀಡಿದಾಗ ಶಾಲೆಗೆ ಅಗತ್ಯ ಕೊಠಡಿ ನಿರ್ಮಿಸಬೇಕು ಎಂದು ಮನವಿ
ಸಲ್ಲಿಸಲಾಗಿದೆ. ಈ ಕುರಿತು ಇಲಾಖೆಯ ಮೇಲಾಧಿಕಾರಿಗಳಿಗೂ ಸಹ ಬೇಡಿಕೆ ಸಲ್ಲಿಸಲಾಗಿದೆ.
ಬಿ.ಎಂ.ರೂಢಗಿ, ಶಾಲಾ ಮುಖ್ಯಶಿಕ್ಷಕಿ.
ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ತಕ್ಕಂತೆ ಶಾಲಾ ಕೊಠಡಿಗಳು ಇಲ್ಲದಾಗಿದೆ. ಇದರಿಂದ ಶಿಕ್ಷಣಕ್ಕೆ ತೊಂದರೆಯಾಗಿದೆ. ಕೂಡಲೇ ಸಂಬಂಧಿಸಿದವರು ಗಮನಹರಿಸಿ ಶೌಚಾಲಯ ಮತ್ತು ಅಗತ್ಯ ಶಾಲಾ ಕೊಠಡಿ ನಿರ್ಮಿಸಬೇಕು.
ಮಕ್ಕಳ ಪಾಲಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್