ರೈತರ ಬಿಕ್ಕಟ್ಟು ಪರಿಹಾರಕ್ಕೆ ರಾಜಿ ರಹಿತ ಹೋರಾಟ ಅಗತ್ಯ
The solution to the peasant crisis not requires compromise
Team Udayavani, May 22, 2019, 11:54 AM IST
ಧಾರವಾಡ: ಕವಿಸಂನಲ್ಲಿ ನೀರಸಾಗರ ಕೆರೆಗೆ ನೀರು ತುಂಬಿಸುವಂತೆ ಆಗ್ರಹಿಸಿ ರೈತ-ಕೃಷಿ ಕಾರ್ಮಿಕರ ಸಂಘಟನೆಯಿಂದ ಹಮ್ಮಿಕೊಂಡಿದ್ದ ರೈತರ ಸಮಾವೇಶದಲ್ಲಿ ಎಸ್.ಆರ್. ಹಿರೇಮಠ ಮಾತನಾಡಿದರು.
ಧಾರವಾಡ: ರೈತರ ಬಿಕ್ಕಟ್ಟು ಪರಿಹಾರಕ್ಕೆ ರಾಜಿ ರಹಿತ ಹೋರಾಟ ಕಟ್ಟಬೇಕಿದೆ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್. ಹಿರೇಮಠ ಹೇಳಿದರು.
ಕವಿಸಂನಲ್ಲಿ ನೀರಸಾಗರ ಕೆರೆಗೆ ನೀರು ತುಂಬಿಸುವಂತೆ ಆಗ್ರಹಿಸಿ ರೈತ-ಕೃಷಿ ಕಾರ್ಮಿಕರ ಸಂಘಟನೆಯಿಂದ ಹಮ್ಮಿಕೊಂಡಿದ್ದ ರೈತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ಸರ್ಕಾರಗಳೇ ತಮ್ಮ ಮೂಗಿನಡಿಯಲ್ಲಿ ಕೆರೆಗಳ ಒತ್ತುವರಿಗೆ ಕುಮ್ಮಕ್ಕು ಕೊಡುತ್ತಿವೆ. ನೀರಿನ ಮೂಲಗಳನ್ನು ಬರಡು ಮಾಡುವ ಹುನ್ನಾರದಲ್ಲಿವೆ. ಈ ಎಲ್ಲ ಹುನ್ನಾರಗಳನ್ನು ಸೋಲಿಸಬೇಕು. ನೀರಸಾಗರ ಕೆರೆಗೆ ನೀರು ತುಂಬಿಸುವ ವ್ಯಾಪಕವಾದ ಈ ಹೋರಾಟವನ್ನು ಎಲ್ಲರೂ ಸೇರಿ ಕಟ್ಟಿ ಬೆಳೆಸಬೇಕಿದೆ. ಆ ದಿಕ್ಕಿನಲ್ಲಿ ಎಲ್ಲರೂ ಸಜ್ಜಾಗಬೇಕು ಎಂದರು.
ಆರ್ಕೆಎಸ್ ರೈತ ಸಂಘಟನೆ ರಾಜ್ಯ ಖಜಾಂಚಿ ವಿ. ನಾಗಮ್ಮಾ ಮಾತನಾಡಿ, ಇಂದು ಕುಡಿಯುವ ನೀರಿಗೆ ತತ್ವಾರವಿದ್ದರೂ ಕಾರ್ಪೊರೇಟ್ ಕಂಪನಿಗಳಿಗೆ ನೀರಿನ ಪೂರೈಕೆ ಮಾಡಲಾಗುತ್ತಿದೆ. ಸರ್ಕಾರಗಳು ಜನಪರವಾಗಿ ಕೆಲಸ ಮಾಡಿದರೆ ನೀರಸಾಗರ ಕೆರೆಗೆ ಕೇವಲ ಒಂದು ವರ್ಷದಲ್ಲೇ ನೀರು ತುಂಬಿಸುವುದು ದೊಡ್ಡ ವಿಷಯವಲ್ಲ. ಆದರೆ ಈ ಸರ್ಕಾರಗಳು ಜನಪರವಾಗಿಲ್ಲ. ಆದ್ದರಿಂದ ಹೋರಾಟದ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕಿದೆ. ಎಲ್ಲ ಗ್ರಾಮದ ರೈತರು ಪ್ರಬಲ ಹೋರಾಟ ಬೆಳೆಸಬೇಕು ಎಂದು ಹೇಳಿದರು.
ಎಸ್ಯುಸಿಐ(ಕಮ್ಯುನಿಸ್ಟ್) ಪಕ್ಷದ ರಾಜ್ಯ ಸಮಿತಿ ಸದಸ್ಯ ರಾಮಾಂಜನಪ್ಪ ಆಲ್ದಳ್ಳಿ ಮಾತನಾಡಿ, ಹುಬ್ಬಳ್ಳಿ, ಕುಂದಗೋಳ ಹಾಗೂ ಕಲಘಟಗಿ ತಾಲೂಕಿನ ಸುಮಾರು 20-25 ಹಳ್ಳಿಗಳಿಗೆ ಕುಡಿಯುವ ನೀರು ಮತ್ತು ಕೃಷಿಗೆ ಆಧಾರವಾಗಿದ್ದ ನೀರಸಾಗರ ಕೆರೆ ಇಂದು ಬತ್ತಿ ಬೆಂಗಾಡಾಗಿದೆ. ಕೃಷಿಯನ್ನೇ ನಂಬಿರುವ ರೈತರು ಹೊಲಗಳಲ್ಲಿ ಹೊಸ ಬೋರ್ವೆಲ್ಗಳನ್ನು 500 ಅಡಿ ಆಳ ಕೊರೆಸಿದರೂ ಅಲ್ಪ-ಸ್ವಲ್ಪ ನೀರು ಸಿಗುವುದು ಕಷ್ಟವಾಗಿದೆ. ಈ ಭಾಗದ ರೈತರ ಬದುಕು ಹಸನಾಗಬೇಕಾದರೆ ನೀರಸಾಗರ ಕೆರೆಗೆ ನೀರು ತುಂಬಬೇಕಾಗಿದೆ ಎಂದರು.
ಆರ್ಕೆಎಸ್ ರೈತ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಶರಣು ಗೋನವಾರ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ವೆಂಕನಗೌಡ ಪಾಟೀಲ, ಲಕ್ಷ್ಮಣ ಜಡಗನ್ನವರ, ಅಲ್ಲಾವುದ್ದಿನ ಅಡ್ಲಿ, ಸದಸ್ಯರಾದ ಕಲ್ಲಪ್ಪ ರಾಮನಾಳ, ಪಕ್ಕೀರಪ್ಪ ಕೋಟಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್