ಆಲಮಟ್ಟಿ ಎತ್ತರ’ ಚರ್ಚೆಯಲ್ಲೇ ಮುಳುಗಿದ ರೈತರು!


Team Udayavani, Aug 25, 2018, 4:20 PM IST

25-agust-22.jpg

ಬಾಗಲಕೋಟೆ: ಆಲಮಟ್ಟಿ ಜಲಾಶಯವನ್ನು ಈಗಿರುವ 519.60 ಮೀಟರ್‌ನಿಂದ 524.256 ಮೀಟರ್‌ಗೆ ಎತ್ತರಿಸಿದಾಗ ಹಿನ್ನೀರಿನಲ್ಲಿ ಮುಳುಗಡೆಯಾಗಲಿರುವ 12 ಹಳ್ಳಿಗಳ ಸಂತ್ರಸ್ತರು ತೀವ್ರ ಗೊಂದಲಕ್ಕೆ ಸಿಲುಕಿದ್ದಾರೆ. ಸರ್ಕಾರದ ಇಬ್ಬಗೆ ನೀತಿಯಿಂದ ಸಂತ್ರಸ್ತರು, ನಮ್ಮ ಹಳ್ಳಿಗಳು ಮುಳಗ್ತಾವಾ-ಮುಳಗಲ್ವಾ ಎಂಬ ಪ್ರಶ್ನೆ ನಿತ್ಯವೂ ಯುಕೆಪಿ ಅಧಿಕಾರಿಗಳ ಮುಂದಿಡುತ್ತಿದ್ದಾರೆ.

ಯುಕೆಪಿ ವ್ಯಾಪ್ತಿಯ ಯೋಜನೆಗಳನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸುವ ಜತೆಗೆ ರೈತರ ಫಲವತ್ತಾದ ಭೂಮಿ, ಹಲವು ವರ್ಷಗಳ ಕಾಲ ಬಾಂಧವ್ಯ ಹೊಂದಿರುವ ಗ್ರಾಮಗಳನ್ನು ಮುಳುಗಡೆಯಿಂದ ತಪ್ಪಿಸಲು ಈಗಾಗಲೇ ಸ್ವಾಧೀನಪಡಿಸಿಕೊಂಡ 519.60 ಮೀಟರ್‌ಗೆ ಮಿತಿಗೊಳಿಸಿ ಅದೇ ಸ್ವಾಧೀನ ಜಾಗೆಯಲ್ಲಿ ನಾರ್ವೆ ಮಾದರಿಯ ತಡೆಗೋಡೆ ನಿರ್ಮಿಸುವ ಯೋಜನೆ ಸಿದ್ಧಗೊಂಡು ನಾಲ್ಕು ವರ್ಷ ಕಳೆದಿವೆ. ಆದರೆ, ಸರ್ಕಾರ ಈ ಕುರಿತು ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಹೀಗಾಗಿ 12 ಹಳ್ಳಿಗಳ ಜನರು ತಮ್ಮ ಗ್ರಾಮಗಳು ಮುಳುಗಡೆ ಆಗುತ್ತವೆಯೋ, ಇಲ್ಲವೋ ಎಂಬ ಗೊಂದಲದಲ್ಲಿದ್ದಾರೆ.

ಯಾವ ಯಾವ ಗ್ರಾಮಗಳು?: ಆಲಮಟ್ಟಿ ಜಲಾಶಯದ ಎತ್ತರವನ್ನು 524.256 ಮೀಟರ್‌ಗೆ ಹೆಚ್ಚಿಸಲು ಕೃಷ್ಣಾ ನ್ಯಾಯಾಧಿಕರಣ 2010ರಲ್ಲಿ ಅನುಮತಿ ನೀಡಿದೆ. ಜಲಾಶಯ ಎತ್ತರಿಸಿದರೆ ಅವಳಿ ಜಿಲ್ಲೆಯ 22 ಗ್ರಾಮಗಳು ಹಾಗೂ ಸುಮಾರು 96 ಸಾವಿರ ಎಕರೆ ಫಲವತ್ತಾದ ಭೂಮಿ ಮುಳುಗಡೆಯಾಗುತ್ತದೆ. ಅದರಲ್ಲಿ ಸಾಧ್ಯತೆ ಇರುವ 12 ಗ್ರಾಮಗಳು, 4,855 ಎಕರೆ ಭೂಮಿ ಉಳಿಸಿಕೊಳ್ಳಲು, ಮುಖ್ಯವಾಗಿ ಇದಕ್ಕಾಗಿ ಸರ್ಕಾರದ ಬೊಕ್ಕಸಕ್ಕೆ 5,393 ಕೋಟಿ ಅನುದಾನ ಉಳಿಸುವ ಉದ್ದೇಶದಿಂದ ಅಂತಾರಾಷ್ಟ್ರೀಯ ಮಟ್ಟದ ಕಂಪನಿಗೆ ಗುತ್ತಿಗೆ ಕೂಡ ನೀಡಲಾಗಿತ್ತು. ಈ ಸಂಸ್ಥೆ ಯುಕೆಪಿ ವ್ಯಾಪ್ತಿಯಲ್ಲಿ ಮುಳುಗಡೆಯಿಂದ ತಪ್ಪಿಸಬಹುದಾದ ಗ್ರಾಮಗಳ ಸಮೀಕ್ಷೆ ನಡೆಸಿ, ವರದಿ ನೀಡಿದೆ.

ಮುಳುಗಡೆಯಿಂದ ತಪ್ಪಿಸಿ ಭೂಮಿ, ಮನೆ, ಅನುದಾನ ಎಲ್ಲವೂ ಉಳಿಸಲು ಗುರುತಿಸಿದ್ದು ಒಟ್ಟು 12 ಗ್ರಾಮಗಳು. ಅದರಲ್ಲಿ ಬಾಗಲಕೋಟೆ ತಾಲೂಕಿನ ಕಲಾದಗಿ, ಗೋವಿಂದಕೊಪ್ಪ, ಉದಗಟ್ಟಿ, ಬೀಳಗಿ ತಾಲೂಕಿನ ಆಲಗುಂಡಿ, ಕಾತರಕಿ, ಬಾವಲತ್ತಿ, ಕೊಪ್ಪ ಎಸ್‌.ಕೆ, ಜಮಖಂಡಿ ತಾಲೂಕಿನ ಹಿರೇಪಡಸಲಗಿ, ಕುಂಬಾರಹಳ್ಳ, ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ವಂದಾಲ ಗ್ರಾಮಗಳನ್ನು ಮುಳುಗಡೆಯಿಂದ ರಕ್ಷಿಸಲು ಉದ್ದೇಶಿಸಲಾಗಿದೆ.

5 ಸಾವಿರ ಕೋಟಿ ಉಳಿತಾಯ: ಸರ್ಕಾರ ಈ ಯೋಜನೆ ಕೈಗೊಂಡಲ್ಲಿ 12 ಗ್ರಾಮಗಳು, 4,855 ಎಕರೆ ಭೂಮಿ ಉಳಿಯಲಿದೆ. ಒಂದು ವೇಳೆ ಭೂಮಿ, ಕಟ್ಟಡ ಸ್ವಾಧೀನಪಡಿಸಿಕೊಂಡರೆ 5,60.97 ಕೋಟಿ ಪರಿಹಾರ ನೀಡಬೇಕು. ಅದರ ಬದಲು ನಾರ್ವೆ ಮಾದರಿ ಗೋಡೆ ನಿರ್ಮಿಸಿದರೆ ಅದಕ್ಕಾಗಿ ಕೇವಲ 247 ಕೋಟಿ ಖರ್ಚು ಆಗಲಿದೆ. ಇದರಿಂದ ಸರ್ಕಾರಕ್ಕೆ ಒಟ್ಟು 5,393.97 ಕೋಟಿ ಅನುದಾನದ ದೊರೆ ಇಳಿಯಲಿದೆ. ಅದಕ್ಕಾಗಿ ಯೋಜನೆ ರೂಪಿಸಿದ್ದರೂ ಅದನ್ನು ಜಾರಿಗೊಳಿಸುವ ಕುರಿತು ಸರ್ಕಾರ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಹೀಗಾಗಿ 524.256 ಮೀಟರ್‌ ವ್ಯಾಪ್ತಿಯೊಳಗೆ ಬರುವ ಭೂಮಿಯ ರೈತರು, ಗ್ರಾಮಗಳ ಸಂತ್ರಸ್ತರು ಗೊಂದಲದಲ್ಲಿದ್ದಾರೆ.

ಸರ್ಕಾರ ಮುಳುಗಡೆ ಮಾಡದಿದ್ದರೆ ಭೂಮಿಯಲ್ಲಿ ಹೊಸದಾಗಿ ಕೊಳವೆ ಬಾವಿ, ಮನೆ ನಿರ್ಮಾಣ ಇಲ್ಲವೇ ವಿವಿಧ ಭೂ ಅಭಿವೃದ್ಧಿ ಕೆಲಸ ಕೈಗೊಳ್ಳಬಹುದು. ಒಂದು ವೇಳೆ ಸ್ವಾಧೀನಪಡಿಸಿಕೊಂಡರೆ ನಾವು ಖರ್ಚು ಮಾಡಿದ ಹಣ ಸದ್ಬಳಕೆಯಾಗುವುದಿಲ್ಲ. ಹೀಗಾಗಿ ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು. ಈ ಕುರಿತು ವಿಳಂಬದಿಂದ ನಮ್ಮ ಭೂಮಿ, ಹಳ್ಳಿಗಳು ಮುಳುಗಡೆ ಆಗ್ತಾವಾ, ಇಲ್ಲವಾ ಎಂಬ ಚಿಂತೆ ಕಾಡುತ್ತಿದೆ ಎಂದು ಬೀಳಗಿ ತಾಲೂಕು ಕೊಪ್ಪ ಎಸ್‌.ಕೆ ಗ್ರಾಮದ ರೈತ ಮಾರುತಿ ಹೇಳಿದರು.

ಜಲಾಶಯ ಎತ್ತರದಿಂದ 12 ಗ್ರಾಮ, ಸುಮಾರು 5 ಸಾವಿರ ಎಕರೆ ಭೂಮಿ ಮುಳುಗಡೆಯಿಂದ ತಪ್ಪಿಸಲು ಹಾಗೂ 5393 ಕೋಟಿ ಅನುದಾನ ಉಳಿತಾಯದ ತಡೆಗೋಡೆ ನಿರ್ಮಾಣ ಕುರಿತ ಸಮಗ್ರ ಯೋಜನೆ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಇದು ಜಾರಿಗೊಳಿಸುವ ಕುರಿತು ಸರ್ಕಾರ ಅಂತಿಮ ನಿರ್ಧಾರ ಕೈಗೊಂಡಿಲ್ಲ. ತಡೆಗೋಡೆ ನಿರ್ಮಾಣ ಯೋಜನೆ ಕೈಬಿಟ್ಟಿಲ್ಲ. ಅಂತಿಮ ನಿರ್ಧಾರ ಕೈಗೊಳ್ಳಲು ಸರ್ಕಾರಕ್ಕೆ ಸ್ಪಷ್ಟನೆ ಕೇಳಲಾಗಿದೆ.
. ಜಗದೀಶ ರೂಗಿ, ಪ್ರಧಾನ ವ್ಯವಸ್ಥಾಪಕರು, ಯುಕೆಪಿ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.