ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ
Team Udayavani, Jan 20, 2022, 11:35 PM IST
ಹುಬ್ಬಳ್ಳಿ: ಪೊಲೀಸರು ಬೇಗನೆ ಹೊಟೇಲುಗಳನ್ನು ಬಂದ್ ಮಾಡಿಸಿದ್ದರಿಂದ ಊಟ ಸಿಕ್ಕಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿ ನೂರಾರು ರೈತರು ಇಲ್ಲಿನ ಎಪಿಎಂಸಿ ಎದುರು ಹು-ಧಾ ಮುಖ್ಯ ರಸ್ತೆ ಹಾಗೂ ಬಿಆರ್ ಟಿಎಸ್ ರಸ್ತೆ ಬಂದ್ ಮಾಡಿ ಗುರುವಾರ ರಾತ್ರಿ ಪ್ರತಿಭಟಿಸಿದರು.
ಮೆಣಸಿನಕಾಯಿ ಮಾರಾಟಕ್ಕೆ ಧಾರವಾಡ ಸೇರಿದಂತೆ ಗದಗ, ಬಾಗಲಕೋಟೆ ಜಿಲ್ಲೆ ಹಾಗೂ ಬೇರೆ ಬೇರೆ ಊರುಗಳಿಂದ ರೈತರು ಬಂದಿದ್ದರು. ಮೆಣಸಿನಕಾಯಿ ತೂಕ ಆಗಿಲ್ಲ. ಪೊಲೀಸರು ಬೇಗನೇ ಎಲ್ಲ ಹೋಟೆಲ್ ಗಳನ್ನು ಬಂದ್ ಮಾಡಿಸಿದ್ದಾರೆ. ಹೀಗಾಗಿ ಇಲ್ಲಿಯೇ ವಾಸ್ತವ್ಯ ಮಾಡಿರುವ ನಮಗೆ ರಾತ್ರಿ ಊಟ ಸಿಗುತ್ತಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿ ರಸ್ತೆ ತಡೆನಡೆಸಿ ಪ್ರತಿಭಟನೆ ನಡೆಸಿದರು.
ಸ್ಥಳಕ್ಕೆ ಎಸಿಪಿ ವಿನೋದ ಮುಕ್ತೇದಾರ ಹಾಗೂ ಎಪಿಎಂಸಿ-ನವನಗರ ಠಾಣೆ ಇನ್ಸಪೆಕ್ಟರ್ ಮತ್ತು ಸಿಬ್ಬಂದಿ ತೆರಳಿ, ಪತ್ರಿಭಟನಾನಿರತ ರೈತರ ಮನವೊಲಿಸಿ ಪ್ರತಿಭಟನೆ ಹಿಂಪಡೆಯುವಂತೆ ಮಾಡಿದರು. ಅವರಿಗೆ ಎಪಿಎಂಸಿ ಯಲ್ಲಿಯೇ ಊಟದ ವ್ಯವಸ್ಥೆ ಮಾಡಿಸಿದರು.
ಗುರುವಾರ ಒಂದೇದಿನ ಇಲ್ಲಿನ ಎಪಿಎಂಸಿಗೆ 42ಸಾವಿರ ಚೀಲ ಮೆಣಸಿನಕಾಯಿ ಆವಕವಾಗಿದೆ. ಬೆಳಗ್ಗೆ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ರೈತರು ಮೆಣಸಿನಕಾಯಿ ತಂದಿದ್ದರಿಂದ ವ್ಯಾಪಾರಸ್ಥರು ಇಳಿಸಿಕೊಳ್ಳಲು ಸ್ಥಳವಿಲ್ಲವೆಂದು ನಿರಾಕರಿಸಿದ್ದರು. ಆಗಲೂ ರೈತರು ಎಪಿಎಂಸಿ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸಿ ವ್ಯಾಪಾರಸ್ಥರ ಮನವೊಲಿಸಿ ರೈತರು ತಂದಿದ್ದ ಮೆಣಸಿನಕಾಯಿ ಇಳಿಸಿಕೊಳ್ಳುವ ವ್ಯವಸ್ಥೆ ಮಾಡಿಸಿದ್ದರು. ಆದರೆ ರಾತ್ರಿ ನಮಗೆ ಊಟ ಸಿಕ್ಕಿಲ್ಲವೆಂದು ರೈತರು ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಿಂದಾಗಿ ಎರಡು ಬದಿಯ ಮಾರ್ಗದಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ