ಪರಿಷತ್ ಫೈಟ್: ಹುಬ್ಬಳ್ಳಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕರ ನಡುವೆ ಹೊಯ್ ಕೈ!
Team Udayavani, Dec 1, 2021, 12:43 PM IST
ಹುಬ್ಬಳ್ಳಿ: ವಿಧಾನ ಪರಿಷತ್ ಚುನಾವಣೆ ಕುರಿತಾಗಿ ಇಲ್ಲಿನ ಹೋಟೆಲ್ ವೊಂದರಲ್ಲಿ ನಡೆದ ಬಿಜೆಪಿ ಸಭೆಯಲ್ಲಿ, ಹಾವೇರಿ ಜಿಲ್ಲೆಯ ಶಾಸಕರಿಬ್ಬರ ನಡುವೆ ಗಲಾಟೆಯಾಗಿದ್ದು, ಪರಿಸ್ಥಿತಿ ಎರಡು ಕಡೆಯವರ ನಡುವೆ ಕೈ – ಕೈ ಮಿಲಾಯಿಸುವ ಹಂತಕ್ಕೂ ತಲುಪಿತ್ತು.
ಹಾವೇರಿ ಜಿಲ್ಲೆ ರಾಣೆಬೆನ್ನೂರು ಶಾಸಕ ಅರುಣ ಕುಮಾರ, ವಿಧಾನ ಪರಿಷತ್ತು ಸದಸ್ಯ, ಮಾಜಿ ಸಚಿವ ಆರ್. ಶಂಕರ್ ನಡುವೆ ಚುನಾವಣೆ ಉಸ್ತುವಾರಿ ವಿಚಾರವಾಗಿ ಗಲಾಟೆಯಾಗಿದೆ.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಸೇರಿದಂತೆ ಹಲವು ನಾಯಕರ ಸಮ್ಮುಖದಲ್ಲೇ ಇಬ್ಬರು ಜಗಳವಾಡಿಕೊಂಡಿದ್ದಾರೆ.
ಇದನ್ನೂ ಓದಿ:ಶಾಸಕ ವಿಶ್ವನಾಥ್ ಹತ್ಯೆ ಸಂಚಿನ ಬಗ್ಗೆ ಮಾಹಿತಿಯಿಲ್ಲ: ಸಿಎಂ ಬೊಮ್ಮಾಯಿ
ಶಂಕರ ವಿರುದ್ದ ತೀವ್ರ ಗರಂ ಆಗಿದ್ದ ಅರುಣ ಕುಮಾರ ಅವರನ್ನು ಬಿಜೆಪಿಯ ಕೆಲವರು ಸಮಾಧಾನ ಪಡಿಸಲು ಯತ್ನಿಸಿದರೆ, ಇನ್ನು ಕೆಲವರು ಶಂಕರ ಅವರನ್ನು ಹೊಟೇಲ್ ನಿಂದ ಹೊರ ಕರೆದುಕೊಂಡು ಬಂದಿದ್ದು ಕಂಡು ಬಂದಿತು.
ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳನ್ನೊಳಗೊಂಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣಾ ಸಭೆಯನ್ನು ಬುಧವಾರ ಹುಬ್ಬಳ್ಳಿಯಲ್ಲಿ ಕರೆಯಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Hubli ಅಪಾರ್ಟಮೆಂಟ್ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ
Hubli: ದಿಂಗಾಲೇಶ್ವರರು ಸ್ಪರ್ಧಿಸುತ್ತಿರುವ ಸಮಯ, ಜಾಗ ಸರಿಯಿಲ್ಲ: ಗುಣಧರನಂದಿ ಮಹಾರಾಜ
MUST WATCH
ಹೊಸ ಸೇರ್ಪಡೆ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ