- Saturday 14 Dec 2019
ಸಮಾಚಾರ ಕೇಂದ್ರಕ್ಕೆ ಕೊನೆ ಮೊಳೆ!
•ಆರೂವರೆ ವರ್ಷದಿಂದ ಹಿರಿಯ ಸಹಾಯಕ ನಿರ್ದೇಶಕ ಹುದ್ದೆ ಖಾಲಿ
Team Udayavani, Sep 11, 2019, 10:06 AM IST
ಹುಬ್ಬಳ್ಳಿ: ರಾಜ್ಯದ ಏಕೈಕ ರಾಜ್ಯ ಸಮಾಚಾರ ಕೇಂದ್ರ ರಾಜ್ಯ ಸರ್ಕಾರದ ನಿರ್ಲಕ್ಷ್ಯಕ್ಕೊಳಗಾಗಿದ್ದು, ಕಳೆದ ಆರೂವರೆ ವರ್ಷದಿಂದ ಹಿರಿಯ ಸಹಾಯಕ ನಿರ್ದೇಶಕ ಹುದ್ದೆ ಖಾಲಿಯಿದೆ. ವರ್ಷದಿಂದ ವರ್ಷಕ್ಕೆ ಸಿಬ್ಬಂದಿ ಸಂಖ್ಯೆ ಕಡಿತಗೊಳ್ಳುತ್ತಿದೆ. ಉತ್ತರ ಕರ್ನಾಟಕ ಭಾಗದ ಕಚೇರಿ ಎನ್ನುವ ಕಾರಣಕ್ಕೆ ಅಧಿಕಾರಿಗಳು ಕೇಂದ್ರ ಕಚೇರಿಗೆ ಸೀಮಿತವಾಗುತ್ತಿದ್ದಾರೆ.
ಸರ್ಕಾರದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜನರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಅರವತ್ತರ ದಶಕದಲ್ಲಿ ಹುಬ್ಬಳ್ಳಿಯಲ್ಲಿ ರಾಜ್ಯ ಸಮಾಚಾರ ಕೇಂದ್ರವನ್ನು ಅಂದಿನ ಸರ್ಕಾರ ಆರಂಭಿಸಿತು. ಪ್ರಮುಖ ಪತ್ರಿಕಾ ಕಚೇರಿಗಳು ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವುದು ಇದಕ್ಕೆ ಪ್ರಮುಖ ಕಾರಣ. ಅಲ್ಲದೇ ಅಂದಿನ ಸಮಯದಲ್ಲಿ ಪೂರ್ಣ ಪ್ರಮಾಣದ ವರದಿಗಾರರು ಕೂಡ ಇಲ್ಲಿಂದಲೇ ಕಾರ್ಯನಿರ್ವಹಿಸುತ್ತಿದ್ದರು. ಈ ಎಲ್ಲಾ ಕಾರಣದಿಂದ ಉತ್ತರ ಕರ್ನಾಟಕ ಈ ಕಚೇರಿಯ ವ್ಯಾಪ್ತಿಯಾಗಿತ್ತು. ಬೆಂಗಳೂರು ಹೊರತುಪಡಿಸಿದರೆ ವಾರ್ತಾ ಇಲಾಖೆಯ ಬಹು ದೊಡ್ಡ ಕಚೇರಿ ಇದಾಗಿತ್ತು. ರಾಜ್ಯದ ಎರಡನೇ ದೊಡ್ಡ ಕಚೇರಿ ಎಂಬ ಹೆಗ್ಗಳಿಕೆ ಹೊಂದಿದ ಕಚೇರಿಯ ಹಿರಿಯ ಸಹಾಯಕ ನಿರ್ದೇಶಕ ಹುದ್ದೆ ಆರು ವರ್ಷದಿಂದ ಪ್ರಭಾರಿಯಲ್ಲೇ ಸಾಗುತ್ತಿದೆ. ಕೇಂದ್ರ ಹಾಗೂ ರಾಜ್ಯದ ಪ್ರಮುಖ ಖಾತೆಗಳನ್ನು ಹೊಂದಿದ ಇಬ್ಬರೂ ಸಚಿವರು ಇಲ್ಲಿನವರು ಇರುವಾಗಲೇ ಇಂತಹ ಪರಿಸ್ಥಿತಿ ಬಂದೊದಗಿರುವುದು ದುರಂತ.
ಮುಖ್ಯಸ್ಥರ ಹುದ್ದೆ ಖಾಲಿ: ಬೆಂಗಳೂರು ಹೊರತುಪಡಿಸಿದರೆ ಈ ಕಚೇರಿ ವ್ಯಾಪ್ತಿ ದೊಡ್ಡದು ಎನ್ನುವ ಕಾರಣಕ್ಕೆ 2002ರಲ್ಲಿ ಇಲ್ಲಿಗೆ ಹಿರಿಯ ಸಹಾಯಕ ನಿರ್ದೇಶಕರ ಹುದ್ದೆಯನ್ನು ಸರ್ಕಾರ ಮಂಜೂರು ಮಾಡಿತ್ತು. ವಿಪರ್ಯಾಸ ಅಂದರೆ 2013ರಿಂದ ಹಿರಿಯ ಸಹಾಯಕ ನಿರ್ದೇಶಕರ ಹುದ್ದೆ ಪ್ರಭಾರಿಯಲ್ಲೇ ನಡೆಯುತ್ತಿದೆ. ಒಂದೊಂದೇ ಹುದ್ದೆ ಕಡಿತಗೊಳ್ಳುತ್ತಿದೆ. ನಿವೃತ್ತಿ ನಂತರ ಯಾವುದೇ ಹುದ್ದೆಗಳು ಭರ್ತಿಯಾಗುತ್ತಿಲ್ಲ. ಜಿಲ್ಲಾ ಕೇಂದ್ರಗಳಲ್ಲಿರುವ ವಾರ್ತಾ ಸಹಾಯಕ ಹುದ್ದೆ ಕೂಡ ಇಲ್ಲಿಲ್ಲ. ಹೀಗಾಗಿ ಸ್ವಾಗತಕಾರ ವಾರ್ತಾ ಅಧಿಕಾರಿಯ ಕೆಲಸ ನಿರ್ವಹಿಸುವಂತಾಗಿದೆ!
ಹೆಚ್ಚುತ್ತಿದೆ ಕಾರ್ಯಾಭಾರ: ನಗರಕ್ಕೆ ವಿಮಾನ ಸೇವೆಯಲ್ಲಿ ಹೆಚ್ಚಳವಾಗುತ್ತಿದ್ದಂತೆ ನಿತ್ಯವೂ ಸಚಿವರು, ವಿವಿಧ ಇಲಾಖೆ ಮುಖ್ಯಸ್ಥರು ಅಗಮಿಸುತ್ತಿದ್ದಾರೆ. ಇದರಿಂದ ಸರ್ಕಾರಿ ಕಾರ್ಯಕ್ರಮಗಳು ಹೆಚ್ಚುತ್ತಿವೆ. ಅಲ್ಲದೇ ಕೇಂದ್ರ ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿ ಸಚಿವರು, ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಇದೇ ನಗರದವರಾಗಿದ್ದಾರೆ. ರಾಜ್ಯ ಗೃಹ ಮಂತ್ರಿಗಳ ನಿವಾಸವೂ ನಗರದಲ್ಲೇ ಇರುವುದರಿಂದ ಸರ್ಕಾರಿ ಕಾರ್ಯಕ್ರಮಗಳು ಹೆಚ್ಚಾಗುವುದು ಸಾಮಾನ್ಯ. ಇಂತಹ ಸಂದರ್ಭದಲ್ಲಿ ಧಾರವಾಡದ ಹಿರಿಯ ಸಹಾಯ ನಿರ್ದೇಶಕರು ಜಿಲ್ಲಾ ಕೇಂದ್ರ ಸೇರಿದಂತೆ ಇಲ್ಲಿನ ಸರ್ಕಾರಿ ಕಾರ್ಯಕ್ರಮಗಳಿಗೆ ಗಮನ ಹರಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಏಕಕಾಲಕ್ಕೆ ಜಿಲ್ಲೆಯಲ್ಲಿ ಎರಡು ಮೂರು ಕಾರ್ಯಕ್ರಮಗಳಿದ್ದರೆ ದೇವರೇ ಗತಿ.
ಕಚೇರಿಯ ಮುಖ್ಯಸ್ಥರ ಹುದ್ದೆ ಖಾಲಿ ಇರುವ ಪರಿಣಾಮ ನಿತ್ಯದ ಕಾರ್ಯದಲ್ಲಿ ಸಾಕಷ್ಟು ತೊಂದರೆಯಾಗುತ್ತಿದೆ. ಪ್ರಮುಖವಾಗಿ ಸರ್ಕಾರಿ ಯೋಜನೆಗಳಿಗೆ ಪ್ರಚಾರ ಕೊಡಿಸುವ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ. ಕೇವಲ ಸರ್ಕಾರಿ ಕಾರ್ಯಕ್ರಮಗಳ ವರದಿಗೆ ಮಾತ್ರ ಸೀಮಿತವಾದಂತಾಗಿದೆ.
ಅಧಿಕಾರಿಗಳಿಗೆ ಕೊರತೆಯಿಲ್ಲ: ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ಹಿರಿಯ ಸಹಾಯಕ ನಿರ್ದೇಶಕರ ಹುದ್ದೆಗಳನ್ನು ಮಂಜೂರು ಮಾಡುತ್ತಿದ್ದಂತೆ ಕಾಲಕಾಲಕ್ಕೆ ಅಧಿಕಾರಿಗಳ ನೇಮಕಾತಿ ನಡೆಯುತ್ತಿದೆ. ಬಹುತೇಕ ಅಧಿಕಾರಿಗಳು ಬೆಂಗಳೂರಿಗೆ ಸೀಮಿತವಾಗುತ್ತಿದ್ದಾರೆ. ಕೇಂದ್ರ ಕಚೇರಿಯಲ್ಲಿ ಠಿಕಾಣಿ ಹೂಡುತ್ತಿದ್ದು, ಒಂದಿಷ್ಟು ಅಧಿಕಾರಿಗಳು ಕೆಲ ಅಕಾಡೆಮಿಗಳಿಗೆ ವಲಸೆ ಹೋಗಿದ್ದಾರೆ. ರಾಜ್ಯದ ಏಕೈಕ ರಾಜ್ಯ ಸಮಾಚಾರ ಕೇಂದ್ರ ಉತ್ತರ ಕರ್ನಾಟಕ ಭಾಗದಲ್ಲಿ ಇರುವುದರಿಂದ ಅಧಿಕಾರಿಗಳು ಈ ಭಾಗಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಇತ್ತೀಚೆಗೆ ಓರ್ವ ಮಹಿಳಾ ಅಧಿಕಾರಿ ಬಡ್ತಿಯೊಂದಿಗೆ ವರ್ಗಾವಣೆ ಪಡೆದು ಈ ಕಚೇರಿಗೆ ಆಗಮಿಸಿ ವರದಿ ಮಾಡಿಕೊಂಡಿದ್ದಷ್ಟೇ. ಹೆಚ್ಚುವರಿ ಕಾರ್ಯಾಭಾರದಿಂದಾಗಿ ಪುನಃ ಬೆಂಗಳೂರಿಗೆ ವರ್ಗಾವಣೆ ಪಡೆದುಕೊಂಡರು.
ಹುಬ್ಬಳ್ಳಿ ಎರಡನೇ ರಾಜಧಾನಿ ಎಂಬುದು ಕೇವಲ ಮಾತಿಗೆ ಸೀಮಿತವಾದಂತಾಗಿದ್ದು, ದೆಹಲಿ ಹೊರತುಪಡಿಸಿದರೆ ರಾಜ್ಯ ಸಮಾಚಾರ ಕೇಂದ್ರ ಇರುವುದು ನಗರದಲ್ಲಿ ಮಾತ್ರ. ಸಿಬ್ಬಂದಿ ನಿವೃತ್ತಿ, ಬಡ್ತಿಯಿಂದ ಹುದ್ದೆಗಳು ಖಾಲಿಯಾಗುತ್ತಿದ್ದು, ಮುಂದೊಂದು ದಿನ ರಾಜ್ಯದ ಏಕೈಕ ಸಮಾಚಾರ ಕೇಂದ್ರ ಮುಚ್ಚುವುದರಲ್ಲಿ ಎರಡು ಮಾತಿಲ್ಲ. ಇಂತಹ ಪರಿಸ್ಥಿತಿ ಎದುರಾಗುವ ಮುಂಚೆಯೇ ಓರ್ವ ಅಧಿಕಾರಿಯನ್ನು ನಿಯೋಜಿಸಿ, ಈ ಭಾಗದ ಕಚೇರಿಯನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಮುಂದಾಗಬೇಕಿದೆ.
ಈ ವಿಭಾಗದಿಂದ ಇನ್ನಷ್ಟು
-
ಧಾರವಾಡ: ಸಾರ್ವಜನಿಕರು ತಮಗೆ ಅಗತ್ಯವಿರುವ ಜಾತಿ, ಆದಾಯ ಮತ್ತು ರಹವಾಸಿ ಪ್ರಮಾಣಪತ್ರವನ್ನು ತಕ್ಷಣ ಪಡೆಯಲು ಅನುಕೂಲವಾಗುವಂತೆ ಸಾರ್ವಜನಿಕರಿಂದ ದಾಖಲೆ ಸಂಗ್ರಹಿಸಿ...
-
ಹುಬ್ಬಳ್ಳಿ: ಹೆಚ್ಚಿನ ಪ್ರಮಾಣದಲ್ಲಿ ಆಹಾರ ತ್ಯಾಜ್ಯ ಉತ್ಪತ್ತಿ ಮಾಡುವ ಹೋಟೆಲ್ಗಳು ಜೈವಿಕ ಅನಿಲ (ಬಯೋಗ್ಯಾಸ್) ಉತ್ಪಾದನಾ ಘಟಕ ಹೊಂದಬೇಕು ಎನ್ನುವ ಮಹಾನಗರ...
-
ಧಾರವಾಡ: ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ರೈತಾಪಿ ಸಮದಾಯದ ಜೀವನಾಡಿ ಜಾನುವಾರುಗಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು...
-
ಕುಂದಗೋಳ: ವೇತನ ಪಾವತಿ ವಿಳಂಬ ಖಂಡಿಸಿ ತಾಲೂಕಾಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಿ ದರ್ಜೆ ಗುತ್ತಿಗೆದಾರರು ಗುರುವಾರ ತಮ್ಮ ಸೇವೆ ಸ್ಥಗಿತಗೊಳಿಸಿ...
-
ಅಳ್ನಾವರ: ಮಕ್ಕಳು ದೇಶದ ಆಸ್ತಿ ಇದ್ದಂಗೆ. ದೇಶದ ಭವಿಷ್ಯ ನಿರ್ಮಿಸುವ ಗುರುತರ ಜವಾಬ್ದಾರಿ ಅವರ ಹೆಗಲ ಮೇಲಿದೆ. ಅಂತಹ ಮಕ್ಕಳ ಆರೋಗ್ಯದ ಕಡೆ ಗಮನ ಹರಿಸುವುದು ನಮ್ಮೆಲ್ಲರ...
ಹೊಸ ಸೇರ್ಪಡೆ
-
ತುಮಕೂರು: ಜಿಲ್ಲೆಯ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕೋರಾ ಮತ್ತು ಚೆನ್ನರಾಯ ದುರ್ಗ ಹೋಬಳಿಯ 18 ಹಳ್ಳಿಗಳಿಗೆ ಹೇಮಾವತಿ ನೀರು ಹರಿಸಬೇಕು ಎಂದು ಆಗ್ರಹಿಸಿ ಶ್ರೀ...
-
ನವದೆಹಲಿ/ಶ್ರೀನಗರ್: ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಗೃಹ ಬಂಧನವನ್ನು ಮತ್ತೆ ಮೂರು ತಿಂಗಳ ಕಾಲ ಮುಂದುವರಿಸುವುದಾಗಿ ಸಬ್ ಜೈಲು ಅಧಿಕಾರಿಗಳು...
-
ತರೀಕೆರೆ: ಜನವರಿ 14 ಮತ್ತು 15 ರಂದು ಅಜ್ಜಂಪುರ ತಾಲೂಕಿನ ಸೊಲ್ಲಾಪುರದ ಶ್ರೀ ಸಿದ್ದರಾಮೇಶ್ವರ ದೇವಾಲಯದ ಆವರಣದಲ್ಲಿ 847ನೇ ಶ್ರೀ ಸಿದ್ದರಾಮೇಶ್ವರರ ಜಯಂತ್ಯುತ್ಸವವನ್ನು...
-
ಹೊಸದಿಲ್ಲಿ: ಈರುಳ್ಳಿ ಬೆಲೆ ತಹಬಂದಿಗೆ ತರಲು ಇನ್ನಿಲ್ಲದ ಯತ್ನ ಮಾಡುತ್ತಿರುವ ಕೇಂದ್ರ ಸರಕಾರ ಈಗ ಅಫ್ಘಾನಿಸ್ಥಾನದಿಂದಲೂ ಆಮದು ಮಾಡುತ್ತಿದೆ. ಪಾಕಿಸ್ಥಾನದ...
-
ಮಣಿಪಾಲ: ಐಪಿಎಲ್ ಹರಾಜಿನಲ್ಲಿ ಈ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಯಾವ ಆಟಗಾರರನ್ನು ಖರೀದಿಸಿದರೆ ಯಶಸ್ಸು ಗಳಿಸಬಹುದು ಎಂಬ ಪ್ರಶ್ನೆಯನ್ನು...