ಅಪರಾಧ ನಿರೂಪಿಸುವಲ್ಲಿ ಬೆರಳು ಮುದ್ರಣ ಮುಖ್ಯ
Team Udayavani, Oct 20, 2018, 5:22 PM IST
ಹುಬ್ಬಳ್ಳಿ: ಅಪರಾಧಿಯ ಅಪರಾಧ ನಿರೂಪಿಸುವಲ್ಲಿ ಬೆರಳು ಮುದ್ರಣ ಹೆಚ್ಚಿನ ಪ್ರಾಮುಖ್ಯತೆ ಹೊಂದಿದೆ ಎಂದು ಮಧ್ಯಪ್ರದೇಶದ ಭೂಪಾಲ್ನ ಬೆರಳು ಮುದ್ರಣ, ನ್ಯಾಯ ವಿಜ್ಞಾನ ಪ್ರಯೋಗಾಲಯದ ನಿರೀಕ್ಷಕಿ ನಿಧಿ ಶ್ರೀವಾತ್ಸವ ಹೇಳಿದರು.
ಇಲ್ಲಿನ ಹಳೇಹುಬ್ಬಳ್ಳಿ ಹೆಗ್ಗೇರಿಯ ಜೆಎಸ್ಎಸ್ ಸಕ್ರಿ ಕಾನೂನು ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ನ್ಯಾಯ ವಿಜ್ಞಾನ ಹಾಗೂ ಬೆರಳು ಮುದ್ರಣ ಪರೀಕ್ಷೆಯ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು. ಅಪರಾಧ ಪ್ರಕರಣಗಳಲ್ಲಿ ಬೆರಳು ಮುದ್ರಣವನ್ನು ಹಲವು ಪ್ರಕಾರಗಳಲ್ಲಿ ಪರಿಶೀಲಿಸಬೇಕು ಹಾಗೂ ಹಲವು ವಿಧಾನಗಳ ಮೂಲಕ ಪರೀಕ್ಷಿಸಬೇಕು. ಅಲ್ಲದೇ ಅವುಗಳನ್ನು ಹೋಲಿಸುವ ವಿಷಯದ ಕುರಿತು ವಿವರಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿ ಪ್ರೊ| ಶರತ ಫಡ್ನಿಸ್ ಮಾತನಾಡಿ, ಬೆರಳು ಮುದ್ರಣದ ಮಹತ್ವ ಹಾಗೂ ಅಪರಾಧಿಯ ವಿಚಾರಣೆಯಲ್ಲಿ ನ್ಯಾಯವಾದಿಗಳಿಗೆ ಬೆರಳು ಮುದ್ರಣದ ಮಾಹಿತಿಯ ಜ್ಞಾನದ ಅವಶ್ಯಕತೆ ಬಗ್ಗೆ ವಿವರಿಸಿದರು. ಜೊತೆಗೆ ಪಾಟಿ ಸವಾಲಿನಲ್ಲಿ ತಜ್ಞರ ಅಭಿಪ್ರಾಯ ನಿರೂಪಿಸಲು. ಇಲ್ಲವೆ ಅಲ್ಲಗಳೆಯಲು ತುಂಬಾ ಸಹಾಯವಾಗುತ್ತದೆ ಎಂದರು. ಜೆಎಸ್ಎಸ್ ಸಕ್ರಿ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ| ರೂಪಾ ಇಂಗಳಹಳ್ಳಿ ಮಾತನಾಡಿ, ವಕೀಲ ವೃತ್ತಿಯ ಪದವಿಯ ಅಧ್ಯಯನದಲ್ಲಿ ವಿಶ್ವವಿದ್ಯಾಲಯದ ಪಠ್ಯಗಳೊಂದಿಗೆ ಇಂತಹ ಕಾರ್ಯಾಗಾರಗಳು ವಿದ್ಯಾರ್ಥಿಗಳ ವೃತ್ತಿ ಕೌಶಲತೆ ವೃದ್ಧಿಸಲು ತುಂಬಾ ಸಹಾಯವಾಗುತ್ತವೆ ಎಂದರು.
ಪ್ರೊ| ಬಾಬುಲಾಲ ದರ್ಗದ, ಪ್ರೊ| ದೀಪಾ ಪಾಟೀಲ, ಪ್ರೊ| ಸುರೇಶ ಲಿಂಬಿಕಾಯಿ, ಪ್ರೊ| ಪೂರ್ಣಿಮಾ ಮುರಗೋಡ, ಪ್ರೊ| ವಿಶ್ವನಾಥ ಬಿಚಗತ್ತಿ ಮೊದಲಾದವರಿದ್ದರು. ಪ್ರೊ| ಶ್ರೀಶೈಲ ಮುಧೋಳ ನಿರೂಪಿಸಿದರು. 60 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ