ಮೊದಲು ತಿಳಿವಳಿಕೆ-ನಂತರ ದಂಡ

| ಮೂರು ದಿನ ಅಭಿಯಾನ | ಸರಕು ಸಾಗಣೆ ವಾಹನ ಚಾಲಕರಿಗೆ ಬಿಸಿ

Team Udayavani, May 8, 2019, 10:32 AM IST

hubali-tdy-4..

ಧಾರವಾಡ: ಸರಕು ವಾಹನ ಚಾಲಕರಿಗೆ ಎಚ್ಚರಿಕೆ ನೀಡಿದ ಸಂಚಾರಿ ಠಾಣೆ ಪೊಲೀಸರು.

ಧಾರವಾಡ: ಸರಕು ಸಾಗಾಣಿಕೆ ವಾಹನದಲ್ಲಿ ಕೂಲಿ ಕಾರ್ಮಿಕರು ಹಾಗೂ ಸಾರ್ವಜನಿಕರನ್ನು ಕರೆದೊಯ್ಯುವವರಿಗೆ ದಂಡ ವಿಧಿಸಿ, ವಾಹನ ಜಪ್ತಿ ಮಾಡುವಂತೆ ಡಿಸಿ ದೀಪಾ ಚೋಳನ್‌ ಸೂಚನೆ ಮೇರೆಗೆ ನಗರ ಸಂಚಾರಿ ಠಾಣೆ ಪೊಲೀಸರು ಪ್ರಮುಖ ಸ್ಥಳಗಳಲ್ಲಿ ‘ಮೊದಲು ತಿಳಿವಳಿಕೆ-ನಂತರ ದಂಡ’ ಕಾರ್ಯಕ್ರಮವನ್ನು ಮಂಗಳವಾರದಿಂದ ಆರಂಭಿಸಿದ್ದಾರೆ.

ಮಹಾನಗರ ಪೊಲೀಸ್‌ ಆಯುಕ್ತ ಎಂ.ಎನ್‌. ನಾಗರಾಜ ಹಾಗೂ ಸಹಾಯಕ ಪೊಲೀಸ್‌ ಆಯುಕ್ತ ಎಂ.ಎನ್‌. ರುಪ್ರಪ್ಪ ಮಾರ್ಗದರ್ಶನದಲ್ಲಿ ಬೆಳಗ್ಗೆ 9 ಗಂಟೆಯಿಂದ ಸಿಪಿಐ ಮುರಗೇಶ ಚನ್ನಣ್ಣವರ ನೇತೃತ್ವದಲ್ಲಿ 7 ತಂಡಗಳು ಕಾರ್ಯಾಚರಣೆ ಕೈಗೊಂಡಿದ್ದು, ಮೂರುದಿನಗಳ ಕಾಲ ಜಾಗೃತಿ ಅಭಿಯಾನ ನಡೆಯಲಿದೆ.

ಪ್ರತಿ ತಂಡದಲ್ಲಿ ಓರ್ವ ಎಎಸ್‌ಐ ಹಾಗೂ ಇಬ್ಬರು ಸಂಚಾರಿ ಪೊಲೀಸ್‌ ಪೇದೆಗಳಿದ್ದಾರೆ. ಧಾರವಾಡ ನಗರಕ್ಕೆ ಬಂದು ಸೇರುವ ಮುಖ್ಯ ರಸ್ತೆಗಳಾಗಿರುವ ಸವದತ್ತಿ, ಬೆಳಗಾವಿ, ಹಳಿಯಾಳ, ಅಳ್ನಾವರ, ಕಲಘಟಗಿ ಮತ್ತು ನವಲಗುಂದ ರಸ್ತೆಗಳಲ್ಲಿ ಹಾಗೂ ಕೂಲಿಕಾರ್ಮಿಕರು ಹೆಚ್ಚಾಗಿ ಸೇರುವ ಜನಸಂದಣಿ ಪ್ರದೇಶ ಆಗಿರುವ ನಗರ ಬಸ್‌ ನಿಲ್ದಾಣದಲ್ಲಿ ಪ್ರತ್ಯೇಕ ತಂಡಗಳಾಗಿ ಜನಜಾಗೃತಿ ಮೂಡಿಸಲಾಗುತ್ತಿದೆ.

ಮೊದಲ ಸಲ ಯಾವುದೇ ದಂಡ ವಿಧಿಸದೆ ತಿಳಿವಳಿಕೆ ನೀಡಿ ವಾಹನದ ನಂಬರ್‌ ತೆಗೆದುಕೊಂಡು ಕಳಿಸಲಾಗುತ್ತಿದೆ. ನಂತರ ಅದೇ ವಾಹನ, ಚಾಲಕ ಅಂತಹ ತಪ್ಪು ಮಾಡಿದರೆ ಸೂಕ್ತ ದಂಡ ವಿಧಿಸಿ, ವಾಹನ ಜಪ್ತಿ ಮಾಡಲಾಗುತ್ತದೆ ಎಂದು ಸಿಪಿಐ ಮುರಗೇಶ ಚನ್ನಣ್ಣವರ ಎಚ್ಚರಿಕೆ ನೀಡಿ ಚಾಲಕರನ್ನು ಕಳಿಸಿದರು.

208 ಪ್ರಕರಣಗಳಲ್ಲಿ ದಂಡ: ಪ್ರಾದೇಶಿಕ ಸಾರಿಗೆ ವ್ಯಾಪ್ತಿಯ ಪೂರ್ವ ಮತ್ತು ಪಶ್ಚಿಮ ವಿಭಾಗದ ಪ್ರದೇಶಗಳಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಏ.1ರಿಂದ ಮೇ 5ರ ವರೆಗೆ ಸರಕು ಸಾಗಾಣಿಕೆ ವಾಹನ, ಕಟ್ಟಡ ಸಾಮಗ್ರಿ ಸಾಗಾಣಿಕೆ ವಾಹನಗಳಲ್ಲಿ ಜನರನ್ನು ಕೊಂಡೊಯ್ಯುತ್ತಿರುವುದನ್ನು ತಪಾಸಣೆ ಕೈಗೊಂಡು 208 ಪ್ರಕರಣಗಳಲ್ಲಿ ದಂಡ ವಿಧಿಸಿದ್ದಾರೆ.

ಧಾರವಾಡ ಪಶ್ಚಿಮ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಿಂದ 1,105 ವಾಹನಗಳನ್ನು ತಪಾಸಣೆ ಮಾಡಿದ್ದು, ನಿಯಮಬಾಹಿರವಾಗಿ ಜನರನ್ನು ಕೊಂಡೊಯ್ಯುತ್ತಿರುವ 89 ಪ್ರಕರಣಗಳು ಹಾಗೂ ಶುಲ್ಕ ಪಡೆದು ಪ್ರಯಾಣಿಕರನ್ನು ಕೊಂಡೊಯ್ಯುತಿರುವ 5 ಪ್ರಕರಣಗಳು ಸೇರಿ ಒಟ್ಟು 94 ಪ್ರಕರಣಗಳನ್ನು ದಾಖಲಿಸಿ, 3 ವಾಹನಗಳನ್ನು ಜಪ್ತಿ ಮಾಡುವುದರ ಜೊತೆಗೆ ಒಟ್ಟು 74,600 ರೂ. ದಂಡ ವಸೂಲಿ ಮಾಡಿದ್ದಾರೆ.

ಧಾರವಾಡ ಪೂರ್ವ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಿಂದ 1,155 ವಾಹನಗಳನ್ನು ತಪಾಸಿಸಿ ನಿಯಮಬಾಹಿರವಾಗಿ ಜನರನ್ನು ಕೊಂಡೊಯ್ಯುತ್ತಿರುವ 114 ಪ್ರಕರಣಗಳು ದಾಖಲಿಸಿ, 10 ವಾಹನಗಳನ್ನು ಜಪ್ತಿ ಮಾಡಿ, ಒಟ್ಟು 1,02,600 ರೂ. ದಂಡ ವಸೂಲಿ ಮಾಡಿದ್ದಾರೆ.

ಒಟ್ಟಾರೆ ಧಾರವಾಡ ಪಶ್ಚಿಮ-ಪೂರ್ವ (ಹುಬ್ಬಳ್ಳಿ) ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಿಂದ ಒಟ್ಟು 2,260 ವಾಹನಗಳನ್ನು ತಪಾಸಣೆ ಕೈಗೊಂಡು, 13 ವಾಹನಗಳನ್ನು ಜಪ್ತಿ ಮಾಡುವುದರ ಜೊತೆಗೆ 1,77,200 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ರವಿಂದ್ರ ಕವಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.