ನೆರೆ ಸಂಕಷ್ಟ; ಸದ್ದುಗದ್ದಲವಿಲ್ಲದೆ ಸಂಘ ಸೇವೆ

•ಅತ್ಯವಶ್ಯಕ ವಸ್ತುಗಳ ಸಂಗ್ರಹ-ವಿತರಣೆ•ಸಂತ್ರಸ್ತರಿಗೆ ಬದುಕು ಕಟ್ಟಿಕೊಳ್ಳಲು ಹೆಗಲಿತ್ತ ಸ್ವಯಂ ಸೇವಕರು•ಪಶುಗಳಿಗೂ ಆಹಾರ ಪೂರೈಕೆ

Team Udayavani, Aug 19, 2019, 9:21 AM IST

huballi-tdy-1

ಹುಬ್ಬಳ್ಳಿ: ಪ್ರವಾಹ ಸಂತ್ರಸ್ತರಿಗೆ ಆರೆಸ್ಸೆಸ್‌ನಿಂದ ಸಿದ್ಧವಾಗುತ್ತಿದ್ದ ಆಹಾರ ತಯಾರಿಕೆಯಲ್ಲಿ ಸ್ವಯಂಪ್ರೇರಿತರಾಗಿ ಪಾಲ್ಗೊಂಡ ಮಹಿಳೆಯರು.

ಹುಬ್ಬಳ್ಳಿ: ದೇಶದ ಯಾವುದೇ ಮೂಲೆಯಲ್ಲಿ ಪ್ರಕೃತಿ ವಿಕೋಪದಂತಹ ಅವಘಡಗಳು ನಡೆದರೆ, ಸರಕಾರದ ಯಂತ್ರಾಂಗ ತಲುಪುವ ಮೊದಲೇ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರೆಸ್ಸೆಸ್‌)ದವರು ರಕ್ಷಣೆ, ಪರಿಹಾರ ಕಾರ್ಯದಲ್ಲಿ ತೊಡಗಿರುತ್ತಾರೆ. ಉತ್ತರ ಕರ್ನಾಟಕ ಸೇರಿದಂತೆ ವಿವಿಧೆಡೆಯ ಪ್ರವಾಹ ಸಂಕಷ್ಟ ಸ್ಥಿತಿಯಲ್ಲೂ ಸಾವಿರಾರು ಸಂಘ ಸೇವಕರು ಸದ್ದುಗದ್ದಲವಿಲ್ಲದೆ ಸೇವಾಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಪ್ರವಾಹ ಪೀಡಿತ ಪ್ರದೇಶದ ಪ್ರತಿ ಹಳ್ಳಿ, ಪಟ್ಟಣ-ನಗರಗಳಲ್ಲೂ ಆರೆಸ್ಸೆಸ್‌ ಕಾರ್ಯಕರ್ತರು ರಕ್ಷಣೆ, ಆಹಾರ, ನೀರು, ಪರಿಹಾರ ಸಾಮಗ್ರಿ, ವೈದ್ಯಕೀಯ ಸೇವೆ, ಪಶು ಆಹಾರ ಅಷ್ಟೇ ಅಲ್ಲದೆ ಸಂಕಷ್ಟಕ್ಕೆ ಸಿಲುಕಿದ ವನ್ಯಜೀವಿಗಳಿಗೂ ಆಹಾರ ನೀಡುವ ಕಾರ್ಯದಲ್ಲಿ ತೊಡಗಿದ್ದಾರೆ. ಪ್ರಾಣದ ಹಂಗು ತೊರೆದು ಅನೇಕ ಅಪಾಯಕಾರಿ ಸ್ಥಳಗಳಿಗೆ ತಲುಪುವ, ರಕ್ಷಣೆ, ಪರಿಹಾರ ಕಾರ್ಯ ಮಾಡಿದ್ದಾರೆ.

ಭಾರೀ ಮಳೆಯಿಂದ ಬೆಳಗಾವಿ ನಗರ ಬಹುತೇಕ ಜಲಾವೃತಗೊಂಡಾಗ, ಎದೆಮಟ್ಟದ ನೀರನ್ನು ಲೆಕ್ಕಿಸದೆ ಜಲಾವೃತಗೊಂಡ ಮನೆ, ಮನೆಗಳಿಗೆ ತೆರಳಿ ಆಹಾರ ಪೊಟ್ಟಣ-ಕುಡಿಯುವ ನೀರಿನ ಬಾಟಲ್ಗಳನ್ನು ನೀಡುವ ಕಾರ್ಯ ಮಾಡಿದ್ದಾರೆ.

ಹರಿದು ಬಂದ ಪರಿಹಾರ ಸಾಮಗ್ರಿ: ಬೆಳಗಾವಿ, ಬಾಗಲಕೋಟೆ, ಧಾರವಾಡ, ಉತ್ತರ ಕನ್ನಡ, ಯಾದಗಿರಿ, ರಾಯಚೂರು, ಹಾವೇರಿ, ಗದಗ ಹೀಗೆ ವಿವಿಧ ಜಿಲ್ಲೆಯ ಪ್ರವಾಹ ಪೀಡಿತ ಗ್ರಾಮ-ನಗರಗಳಿಗೆ ತೆರಳಿ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ.

ಹುಬ್ಬಳ್ಳಿಯ ಆರೆಸ್ಸೆಸ್‌ ಕಚೇರಿ ಕೇಶವಕುಂಜಕ್ಕೆ ಬಂದ ವಿವಿಧ ಪರಿಹಾರ ಸಾಮಗ್ರಿ ಒಟ್ಟುಗೂಡಿಸಿ, ಅವುಗಳನ್ನು ವಿಂಗಡಿಸಿ, ಎಲ್ಲಿಗೆ ಎಷ್ಟು ಕಳುಹಿಸಬೇಕು ಎಂಬುದನ್ನು ಸಿದ್ಧಪಡಿಸಿ ಕಳುಹಿಸಲಾಗಿತ್ತು. ಅನೇಕ ಸ್ವಯಂ ಸೇವಕರಲ್ಲದೆ, ಅನೇಕ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ವಿವಿಧ ಕಡೆಗಳಲ್ಲಿ ಪರಿಹಾರ ಸಾಮಗ್ರಿ ಸಂಗ್ರಹಿಸುವ, ಕೇಶವಕುಂಜದಲ್ಲಿ ಅವುಗಳನ್ನು ವಿಂಗಡಿಸಿ, ಪ್ಯಾಕ್‌ ಮಾಡುವ ಕಾರ್ಯದಲ್ಲಿ ಸಾಥ್‌ ನೀಡಿದ್ದರು.

ಅನೇಕ ವೈದ್ಯರು ಸ್ವಯಂಪ್ರೇರಿತರಾಗಿ ಸೇವೆಗೆ ಮುಂದಾಗಿದ್ದರು. ಅನೇಕ ದಾನಿಗಳು, ಕಂಪೆನಿಗಳು ಸಾಕಷ್ಟು ಪ್ರಮಾಣದ ಔಷಧಿ ನೀಡಿದ್ದು, ಕಳೆದ 10 ದಿನಗಳಿಂದ ವೈದ್ಯರ ತಂಡ ಪ್ರವಾಹ ಪೀಡಿತ ಹಳ್ಳಿ, ಪಟ್ಟಣ-ನಗರಗಳಿಗೆ ತೆರಳಿ ವೈದ್ಯಕೀಯ ಸೇವೆ ಹಾಗೂ ಉಚಿತವಾಗಿ ಔಷಧಿ ನೀಡಿಕೆ ಕಾರ್ಯ ಕೈಗೊಂಡಿದ್ದಾರೆ.

25 ಮೆಟ್ರಿಕ್‌ ಟನ್‌ ಪಶು ಆಹಾರ: ಜಾನುವಾರುಗಳಿಗೆ ಆಹಾರ ಒದಗಿಸುವ ನಿಟ್ಟಿನಲ್ಲಿ ವಿವಿಧ ದಾನಿಗಳನ್ನು ಸಂಪರ್ಕಿಸಲಾಗಿದ್ದು, ಆರೆಸ್ಸೆಸ್‌ ಈಗಾಗಲೇ 25 ಮೆಟ್ರಿಕ್‌ ಟನ್‌ ಪಶು ಆಹಾರ ರವಾನಿಸಿದೆ. ಪಶು ಆಹಾರ ತಯಾರಕ ಕಂಪೆನಿಯೊಂದು ಉತ್ಪಾದನಾ ವೆಚ್ಚದ ದರದಲ್ಲೇ ಇದನ್ನು ನೀಡಿದ್ದಲ್ಲದೆ ಅದನ್ನು ಕಳುಹಿಸಿಕೊಟ್ಟಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿಗೆ 20 ಮೆಟ್ರಿಕ್‌ ಟನ್‌ ಪಶುಆಹಾರ ಕಳುಹಿಸಲಾಗಿದ್ದು, 5 ಮೆಟ್ರಿಕ್‌ ಟನ್‌ ಪಶುಆಹಾರವನ್ನು ಚಿಕ್ಕೋಡಿ ತಾಲೂಕಿಗೆ ಕಳುಹಿಸಲಾಗಿದೆ. ಇದಲ್ಲದೆ, ಇತರೆ ಜಿಲ್ಲೆಗಳಲ್ಲಿ ಅಲ್ಲಲ್ಲಿ ಲಭ್ಯವಿದ್ದ ಪಶು ಆಹಾರ, ಮೇವು ಒದಗಿಸುವ ಕಾರ್ಯದಲ್ಲಿ ಸಂಘ ತೊಡಗಿದೆ. ಇನ್ನಷ್ಟು ಪಶು ಆಹಾರ ತರಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ.

ಪುನರ್ವಸತಿ ಕಲ್ಪಿಸಲು ಯತ್ನ: ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣೆ, ಪರಿಹಾರ ಕಾರ್ಯದಲ್ಲಿ ತೊಡಗಿರುವ ಆರೆಸ್ಸೆಸ್‌ ಸ್ವಯಂ ಸೇವಕರು ಇದೀಗ ಮೂರನೇ ಹಂತವಾಗಿ ಪುನರ್ವಸತಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಪ್ರವಾಹ ಪೀಡಿತ ಪ್ರತಿ ಗ್ರಾಮಕ್ಕೂ ತೆರಳಿ ಅಲ್ಲಿ ಆಗಿರುವ ನಷ್ಟ, ಇರುವ ಬೇಡಿಕೆ, ಬದುಕು ಕಟ್ಟಿಕೊಳ್ಳಲು ಬೇಕಾಗುವ ಅವಶ್ಯಕತೆಗಳ ಕುರಿತು ಖುದ್ದು ಸಮೀಕ್ಷೆಯಲ್ಲಿ ತೊಡಗಿದ್ದಾರೆ.
ಮಂಗಗಳಿಗೂ ಆಹಾರ:

ಆರೆಸ್ಸೆಸ್‌ ಸ್ವಯಂಸೇವಕರು ಪ್ರವಾಹ ಪೀಡಿತ ಸ್ಥಳಗಳಲ್ಲಿ ಜನ, ಜಾನುವಾರುಗಳನ್ನಷ್ಟೇ ರಕ್ಷಿಸಿಲ್ಲ. ಅನೇಕ ವನ್ಯಜೀವಿಗಳ ರಕ್ಷಣೆಗೂ ನೆರವಾಗಿದ್ದಾರೆ. ಬಾಗಲಕೋಟೆ ಜಿಲ್ಲೆ ಜಂಬಗಿಯಲ್ಲಿ ಒಂದಿಷ್ಟು ಮರಗಳ ಮೇಲೆ ಮಂಗಗಳು ಇದ್ದು, ಪ್ರವಾಹದಿಂದ ಹೊರಬರಲಾಗದೆ ಸಂಕಷ್ಟ ಎದುರಿಸುತ್ತಿದ್ದವು. ಇದನ್ನು ಗಮನಿಸಿದ ಸ್ವಯಂಸೇವಕರು ತೆಪ್ಪದಲ್ಲಿ ತೆರಳಿ ತೆರೆದ ಬುಟ್ಟಿಗಳಲ್ಲಿ ಆಹಾರ ಇರಿಸಿ ಮಂಗಗಳನ್ನು ಬದುಕಿಸುವ ಮಾನವೀಯತೆ ಮೆರೆದಿದ್ದಾರೆ. ಜನರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಗ್ರಾಮವೊಂದರಲ್ಲಿ ಪೊಲೀಸರಿಂದ ಲಾಠಿ ಏಟನ್ನು ಸಹ ಸ್ವಯಂಸೇವಕರು ತಿಂದಿದ್ದಾರೆ. ಆದರೂ ಅವರ ಸೇವಾ ಕಾರ್ಯದ ಉತ್ಸಾಹಕ್ಕೆ ಕಿಂಚಿತ್ತು ಕುಂದು ಬಂದಿಲ್ಲ.

 

•ಅಮರೇಗೌಡ ಗೋನವಾರ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.