ಹುಬ್ಬಳ್ಳಿ ಬೆಣ್ಣೆಹಳ್ಳದ ಪ್ರವಾಹ;ಕೊಚ್ಚಿ ಹೋದ ಯುವಕ; ಸಿಲುಕಿಕೊಂಡ ಹಲವರು
Team Udayavani, Aug 29, 2022, 5:52 PM IST
ಹುಬ್ಬಳ್ಳಿ: ತಾಲೂಕಿನ ಇಂಗಳಹಳ್ಳಿ ಗ್ರಾಮದ ಬೆಣ್ಣೆಹಳ್ಳದ ಪ್ರವಾಹದಲ್ಲಿ 32 ಜನ ಸಿಲುಕಿಕೊಂಡಿದ್ದು , ಯುವಕನೊಬ್ಬ ಕೊಚ್ಚಿಕೊಂಡು ಹೋಗಿದ್ದಾನೆ. 20 ಜನರನ್ನು ರಕ್ಷಿಸಲಾಗಿದ್ದು, ಉಳಿದವರನ್ನು ಸುರಕ್ಷಿತವಾಗಿ ಕರೆ ತರುವ ರಕ್ಷಣಾ ಕಾರ್ಯ ಮುಂದುವರೆದಿದೆ.
ಮೇಲ್ಭಾಗದಲ್ಲಿ ರಭಸದ ಮಳೆಯಾಗುತ್ತಿರುವುದರಿಂದ ಇಂಗಳಹಳ್ಳಿ ಗ್ರಾಮದ ಬಳಿ ಬರುವ ಬೆಣ್ಣೆಹಳ್ಳ ತುಂಬಿ ಹರಿಯುತ್ತಿದೆ. ಈ ಸಮಯದಲ್ಲಿ ಕುಸ್ತಿ ಪಂದ್ಯಾವಳಿ ವೀಕ್ಷಣೆಗೆ ಆಗಮಿಸಿದ ನಾಲ್ವರು ಹಳ್ಳ ದಾಟಲು ಮುಂದಾಗಿದ್ದಾರೆ. ಈ ಸಮಯದಲ್ಲಿ ಇಂತಹ ಹಳ್ಳ ಬಹಳಷ್ಟು ನೋಡಿದ್ದೇವೆ ಎಂದ ನಾಲ್ವರು ಹಳ್ಳ ದಾಟಲು ಮುಂದಾಗಿದ್ದಾರೆ. ಅದರಲ್ಲಿ ನಾಲ್ವರು ಕೂಡಾ ನೀರಿನಲ್ಲಿ ಆಯ ತಪ್ಪಿದ್ದು ಕೂಡಲೇ ಎಚ್ಚೆತ್ತ ಇಬ್ಬರು ನೀರಿನಿಂದ ಪಾರಾಗಿದ್ದಾರೆ. ಇನ್ನುಳಿದ ಇಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದು, ಅದರಲ್ಲಿ ಮತ್ತೊಬ್ಬ ಸ್ವಲ್ಪದೂರ ನೀರಿನಲ್ಲೇ ಹೋಗಿ ಗಿಡದ ಕಂಟೆ ಹಿಡಿದುಕೊಂಡು ಅಲ್ಲಿಂದ ಪಾರಾಗಿದ್ದಾನೆ. ಕೊಚ್ಚಿ ಹೋಗಿರುವವನ ಹುಡುಕಾಟದಲ್ಲಿ ತಾಲೂಕು ಆಡಳಿತ ನಿರತವಾಗಿದೆ.
ಬೆಳಗ್ಗೆ ಕೃಷಿ ಕಾರ್ಯಕ್ಕೆ ತೆರಳಿದ್ದ 28 ಜನರ ತಂಡ ಹಳ್ಳದಲ್ಲಿ ಸಿಲುಕಿಕೊಂಡಿದ್ದು ಈಗಾಗಲೇ 20 ಜನರನ್ನು ರಕ್ಷಣೆ ಮಾಡಿದ್ದಾರೆ. ಇನ್ನುಳಿದವರ ರಕ್ಷಣೆ ಮಾಡಲಾಗುತ್ತಿದೆ.
ಸ್ಥಳದಲ್ಲಿ ಗ್ರಾಮೀಣ ತಹಶೀಲ್ದಾರ್ ಪ್ರಕಾಶ ನಾಶಿ, ಗ್ರಾಮೀಣ ಪೊಲೀಸ್ ಠಾಣಾಧಿಕಾರಿ ಗೋಕಾಕ, ಅಗ್ನಿಶಾಮಕ ದಳದ ಸಿಬಂದಿ ಸೇರಿದಂತೆ ಮೊದಲಾದವರು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ