ಕೆರೆಗೆ ಹರಿಯಲಿ ಪ್ರವಾಹ

•ನದಿಗೆ ಬಿಡುವ ನೀರಿನಿಂದ ತುಂಬಬೇಕಿತ್ತು ಕೆರೆ•ಸಮರ್ಪಕ ಯೋಜನೆ ಇಲ್ಲದೆ ನೆರೆ

Team Udayavani, Aug 6, 2019, 9:41 AM IST

huballi-tdy-3

ಬಸವಸಾಗರ ಜಲಾಶಯದಿಂದ ನೀರು ಹರಿಬಿಟ್ಟಿರುವುದು.

ಹುಬ್ಬಳ್ಳಿ: ಮಳೆಗಾಗಿ ಮುಗಿಲು ನೋಡುವ ಪ್ರದೇಶದಲ್ಲೀಗ ಪ್ರವಾಹ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮತ್ತೂಂದು ಕಡೆ ಅಪಾರ ಪ್ರಮಾಣದ ನೀರು ಯಾವುದೇ ಬಳಕೆ ಇಲ್ಲದೆ ನೆರೆ ರಾಜ್ಯ ಇಲ್ಲವೆ ಸಮುದ್ರ ಪಾಲಾಗುತ್ತಿರುವುದು ಕಂಡು, ಅಸಂಖ್ಯಾತ ಮನಸ್ಸುಗಳು ನೊಂದುಕೊಳ್ಳುತ್ತಿವೆ. ಕೆರೆ ತುಂಬಿಸುವ ಯೋಜನೆ ಕೈಗೂಡಿದ್ದರೆ ಪ್ರವಾಹ ನೀರು ಸಾರ್ಥಕತೆ ಕಾಣುತ್ತಿತ್ತಲ್ಲ ಎಂಬ ನೋವು ಅನೇಕರದ್ದಾಗಿದೆ.

ಮಹಾರಾಷ್ಟ್ರದಲ್ಲಿ ಬಿದ್ದ ಮಳೆಯಿಂದಾಗಿ ಕೃಷ್ಣಾ ನದಿ ಭೋರ್ಗರೆಯುತ್ತಿದೆ. ಒಳ ಹರಿವು ಹೆಚ್ಚಳದಿಂದ ಆಲಮಟ್ಟಿ, ನಾರಾಯಣಪುರ ಜಲಾಶಯಗಳಿಂದ 2.50ದಿಂದ 3ಲಕ್ಷ ಕ್ಯುಸೆಕ್‌ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇದರಿಂದ ಅನೇಕ ಗ್ರಾಮಗಳು ಜಲಾವೃತಗೊಂಡಿವೆ, ರಸ್ತೆ ಸಂಪರ್ಕ ಕಡಿತಗೊಂಡಿದೆ, ಹೊಲಗಳಿಗೆ ನೀರು ನುಗ್ಗಿ ಬೆಳೆ ಹಾನಿಗೀಡಾಗುತ್ತಿದೆ. ವಿಚಿತ್ರವೆಂದರೆ ಯಾವ ಜಿಲ್ಲೆಗಳು ಇದೀಗ ಪ್ರವಾಹ ಸಮಸ್ಯೆ ಎದುರಿಸುತ್ತಿವೆಯೋ ಆ ಜಿಲ್ಲೆಗಳಲ್ಲಿ ನಿರೀಕ್ಷಿತ ಮಳೆ ಇಲ್ಲವಾಗಿದೆ.

ಮಹಾರಾಷ್ಟ್ರದಲ್ಲಿ ಮಳೆ ಇನ್ನು ಕುಗ್ಗಿಲ್ಲವಾಗಿದ್ದು, ಅಲ್ಲಿಂದ ಹರಿದು ಬರುವ ನೀರಿನ ಪ್ರಮಾಣ ಇನ್ನಷ್ಟು ಹೆಚ್ಚಾಗಬಹುದಾಗಿದೆ. ಒಳ ಹರಿವಿಗೆ ತಕ್ಕಂತೆ ಕನಿಷ್ಠ 10 ರಿಂದ 20 ಸಾವಿರ ಕ್ಯುಸೆಕ್‌ ಹೆಚ್ಚುವರಿ ನೀರು ಸೇರಿಸಿ ನಮ್ಮ ಜಲಾಶಯಗಳಿಂದ ನದಿಗೆ ಬಿಡಲಾಗುತ್ತದೆ. ಅಲ್ಲಿಗೆ ಹೊರ ಹರಿವು ಇನ್ನಷ್ಟು ಹೆಚ್ಚಾಗಲಿದ್ದು, ಪ್ರವಾಹ ಸ್ಥಿತಿ ಇನ್ನಷ್ಟು ಬಿಗಡಾಯಿಸುವ ಸಾಧ್ಯತೆ ಇದೆ.

ಮಹಾರಾಷ್ಟ್ರದಿಂದ 3ಲಕ್ಷ ಕ್ಯುಸೆಕ್‌ ನೀರು?: ಮಹಾರಾಷ್ಟ್ರದ ಸಾಂಗ್ಲಿ, ಸತಾರ, ಕೊಲ್ಲಾಪುರ ಇನ್ನಿತರ ಕಡೆಗಳಲ್ಲಿ ಮಳೆ ವಿಪರೀತವಾಗಿ ಸುರಿಯುತ್ತಿದೆ. ಸೋಮವಾರ ಸಂಜೆ ವೇಳೆಗೆ ಮಹಾರಾಷ್ಟ್ರದ ಸಾಂಗ್ಲಿ ಸೇತುವೆ ಬಳಿ ಪ್ರತಿ ಎರಡು ತಾಸಿಗೊಮ್ಮೆ ಒಂದು ಅಡಿಯಷ್ಟು ನೀರು ಹೆಚ್ಚಾಗುತ್ತಿದೆ. ಗಡಿಗ್ರಾಮ ಜುಗಳ ಬಳಿ ಸುಮಾರು 5 ಅಡಿಯಷ್ಟು ನೀರು ಸಂಗ್ರಹ ಹೆಚ್ಚಳವಾಗಿದೆ. ಮಹಾರಾಷ್ಟ್ರದ ಕೊಯ್ನಾ, ವಾರಣಾ ಇನ್ನಿತರ ಜಲಾಶಯಗಳಿಂದ ಒಟ್ಟಾರೆಯಾಗಿ ಕರ್ನಾಟಕಕ್ಕೆ ಹರಿ ಬಿಡುವ ನೀರಿನ ಪ್ರಮಾಣ 2.5ಲಕ್ಷದಿಂದ 3 ಲಕ್ಷ ಕ್ಯುಸೆಕ್‌ಗೆ ಹೆಚ್ಚಲಿದ್ದು, ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಿಂದ ಹೊರ ಹರಿವು ಇನ್ನಷ್ಟು ಹೆಚ್ಚಳವಾಗಲಿದೆ.

ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯದಿಂದ 2.50ದಿಂದ 3ಲಕ್ಷ ಕ್ಯುಸೆಕ್‌ ಆಸುಪಾಸು ನೀರು ಹೊರ ಹಾಕಲಾಗುತ್ತಿದ್ದು, ಒಳ ಹರಿವು ಹೆಚ್ಚಾದರೆ ನಮ್ಮ ಜಲಾಶಯಗಳಿಂದ 3.35ಲಕ್ಷ ಕ್ಯುಸೆಕ್‌ ನೀರು ಹೊರ ಬಿಟ್ಟಿದ್ದೆಯಾದರೆ 2005-06ರ ಸ್ಥಿತಿ ನಿರ್ಮಾಣವಾಗಲಿದೆ.

ಕೆರೆ ನೀರು ಸಮುದ್ರ ಪಾಲು?: ಮಹಾರಾಷ್ಟ್ರದಿಂದ ಹೆಚ್ಚುವರಿಯಾಗಿ ಹರಿದು ಬರುವ ನೀರಿನಲ್ಲಿ ಒಂದಿಷ್ಟು ನೀರನ್ನಾದರೂ ಕೆರೆಗಳಿಗೆ ತುಂಬಿಸಿದ್ದರೆ ಅದೆಷ್ಟೋ ರೈತರಿಗೆ ಆಸರೆಯಾಗುತ್ತಿತ್ತು. ಕಳೆದೊಂದು ದಶಕದಿಂದ ಕೆರೆಗೆ ನೀರು ತುಂಬಿಸುವ ಮಾತುಗಳು ಅಬ್ಬರಿಸುತ್ತಿವೆಯಾದರೂ, ಇಂದಿಗೂ ಅಂದಾಜಿಸಿದ ಕೆರೆಗಳಲ್ಲಿ ಶೇ.10-20ರಷ್ಟು ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಸಮರ್ಪಕವಾಗಿ ಆಗುತ್ತಿಲ್ಲ ಎಂಬುದು ನೋವಿನ ಸಂಗತಿ.

ವಿಜಯಪುರ ಜಿಲ್ಲೆಯೊಂದರಲ್ಲೇ ಸುಮಾರು 110 ಕೆರೆಗಳನ್ನು ತುಂಬಿಸಲು ಗುರುತಿಸಲಾಗಿತ್ತು. ಇದರಲ್ಲಿ 20-30 ಕೆರೆಗಳಿಗೆ ನೇರವಾಗಿ ನೀರು ತುಂಬಿಸುವ ವ್ಯವಸ್ಥೆ ಹೊಂದಲಾಗಿದೆ. ಇನ್ನು 70-80 ಕೆರೆಗಳು ನೀರಿಗಾಗಿ ಕಾಯುತ್ತಿವೆ. ಕಾಲುವೆ ಮೂಲಕ ಕೆರೆ ತುಂಬಿಸುವ ಯೋಜನೆಯಲ್ಲಿ ಅಲ್ಲಲ್ಲಿ ಅಲ್ಪಸ್ವಲ್ಪ ಕೆಲಸ ಮಾಡುವುದಿದೆ. ಅದು ಮಾಡಲು ಸಾಧ್ಯವಾಗದೆ ಕೆರೆ ತುಂಬಿಸಲು ಆಗುತ್ತಿಲ್ಲ.

ಬಾಗಲಕೋಟೆ ಜಿಲ್ಲೆಗಳ ಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ. ಇನ್ನು ಕೃಷ್ಣಾ ನದಿ ಪಾತ್ರದ ಯಾದಗಿರಿ, ರಾಯಚೂರು ಜಿಲ್ಲೆಗಳ ಸ್ಥಿತಿ ಕೇಳುವಂತಿಲ್ಲ. ಅಲ್ಲಿ ಕೆರೆ ಸಂಸ್ಕೃತಿಯೇ ಅತ್ಯಂತ ಕಡಿಮೆ. ಇದ್ದ ಅಷ್ಟು ಇಷ್ಟು ಕೆರೆಗಳು ಗುರುತು ಸಿಗದ ಸ್ಥಿತಿಗೆ ತಲುಪಿವೆ. ಅದೆಷ್ಟೋ ಏತನೀರಾವರಿ ಯೋಜನೆಗಳು ಕಡತದಲ್ಲೇ ಕೊಳೆಯುತ್ತಿವೆ, ಇಲ್ಲವೆ ಅಷ್ಟು ಇಷ್ಟು ಕಾಮಗಾರಿಯೊಂದಿಗೆ ತ್ರಿಶಂಕು ಸ್ಥಿತಿಯಲ್ಲಿವೆ.

ಕಣ್ಣೆದುರೇ ಅನಾಹುತ ಸೃಷ್ಟಿಸಿ ಸಾಗುತ್ತಿರುವ ನೀರು ಜನರಲ್ಲಿ ಕಣ್ಣೀರು ತರಿಸುತ್ತಿದ್ದರೆ, ಮತ್ತೂಂದು ಕಡೆ ಈ ಹಿಂದೆ ಕುಡಿಯುವ ನೀರಿಗಾಗಿ ಕೇವಲ 4 ಟಿಎಂಸಿ ಅಡಿಯಷ್ಟು ನೀರಿಗಾಗಿ ಮಹಾರಾಷ್ಟ್ರಕ್ಕೆ ಭಿಕ್ಷೆ ಬೇಡಿದರೂ ಹನಿ ನೀರು ಸಿಗಲಿಲ್ಲ. ಇದೀಗ ಅದೇ ಮಹಾರಾಷ್ಟ್ರದಿಂದ ಬರುತ್ತಿರುವ ಅಪಾರ ಪ್ರಮಾಣದ ನೀರು ಬಳಕೆ ಇಲ್ಲದೆಯೇ ಪೋಲಾಗುತ್ತಿದೆಯಲ್ಲ ಎಂಬ ನೋವು ನದಿ ಪಾತ್ರದ ಜನರನ್ನು ಆವರಿಸಿದೆ. ಇನ್ನಾದರೂ ಸರಕಾರ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಬಾಕಿ ಇರುವ ಕಾಮಗಾರಿ ಕೈಗೊಂಡರೆ ಮುಂದಿನ ದಿನಗಳಲ್ಲಿ ಪೋಲಾಗುವ ನೀರಿನಲ್ಲಿ ಒಂದಿಷ್ಟ ಪ್ರಮಾಣವನ್ನಾದರೂ ಸದ್ಬಳಕೆಗೆ ಮಾಡಿಕೊಳ್ಳಬಹುದಾಗಿದೆ ಎಂಬುದು ಜನರ ಅನಿಸಿಕೆ.

 

•ಅಮರೇಗೌಡ ಗೋನವಾರ

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.