ಹಣ ಉಳಿಸಲು ಫ್ಲೈ ಓವರ್‌ ಬದಲಾವಣೆ ಅಲ್ಲ

ಕೊಪ್ಪಿಕರ ರಸ್ತೆ-ನೆಹರು ಮೈದಾನ ಕಡೆಯಿಂದ ಬರುವ ವಾಹನಗಳಿಗೂ ಸಂಪರ್ಕ ಕಲ್ಪಿಸಲು ಯೋಜನೆ

Team Udayavani, Jun 29, 2021, 5:27 PM IST

28hub-33

ಹುಬ್ಬಳ್ಳಿ: ಚಿಟಗುಪ್ಪಿ ಪಾರ್ಕ್‌ ಮುಂಭಾಗ ದಿಂದಲೇ ಫ್ಲೈ ಓವರ್‌ ನಿರ್ಮಾಣ ಮಾಡಬೇಕು ಎನ್ನುವ ಚರ್ಚೆಗೆ ಭೂ ಸ್ವಾಧೀನಕ್ಕೆ ತಗಲುವ ಪರಿಹಾರ ಹಣ ಉಳಿಸಬೇಕೆಂಬುದು ಕಾರಣವಲ್ಲ. ಕೊಪ್ಪಿಕರ್‌ ರಸ್ತೆ ಹಾಗೂ ನೆಹರು ಮೈದಾನ ಕಡೆಯಿಂದ ಬರುವ ವಾಹನಗಳಿಗೂ ಫ್ಲೈ ಓವರ್‌ ಸಂಪರ್ಕ ಕಲ್ಪಿಸಬೇಕು ಎಂಬುದಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.

ನೈಸರ್ಗಿಕ ವಿಕೋಪದಿಂದ ಮೃತಪಟ್ಟ ಎಂಟು ಜನರ ಕುಟುಂಬದ ಸದಸ್ಯರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ನೈಸರ್ಗಿಕ ವಿಕೋಪ ನಿಧಿಯಡಿ ತಲಾ 2 ಲಕ್ಷ ರೂ. ಚೆಕ್‌ ವಿತರಿಸಿ ಅವರು ಮಾತನಾಡಿದರು. ಈ ಹಿಂದೆ ಡಾ| ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿರುವ ಎಲ್‌ಐಸಿ ಕಚೇರಿ ಮುಂಭಾಗದಿಂದ ಫ್ಲೈ ಓವರ್‌ ಆರಂಭಿಸಬೇಕು ಎನ್ನುವ ಯೋಜನೆ ರೂಪಿಸಲಾಗಿತ್ತು. ಆದರೆ ಕೊಪ್ಪಿಕರ್‌ ರಸ್ತೆ, ನೆಹರು ಮೈದಾನ, ಗದಗ ರಸ್ತೆ ಕಡೆಯಿಂದ ಹೆಚ್ಚಿನ ಪ್ರಮಾಣದಲ್ಲಿ ವಾಹನಗಳು ಬರುತ್ತಿವೆ. ಈ ಸಂಚಾರಕ್ಕೆ ಫ್ಲೈ ಓವರ್‌ ಕಲ್ಪಿಸಬೇಕು ಎನ್ನುವ ಕಾರಣಕ್ಕೆ ಈ ಚರ್ಚೆ ನಡೆದಿದೆ. ಈ ಕುರಿತು ಸೂಕ್ತ ಪರಿಶೀಲನೆ ಮಾಡುವಂತೆ ಹೇಳಿದ್ದೇನೆ. ಈ ಕುರಿತು ಯಾವುದೇ ಅಂತಿಮವಾಗಿಲ್ಲ ಎಂದರು.

ಫ್ಲೈ ಓವರ್‌ ನಿರ್ಮಾಣಕ್ಕೆ ಹಣಕಾಸಿನ ಸಮಸ್ಯೆಯಾಗದಂತೆ ಯೋಜನೆ ರೂಪಿಸಲಾಗಿದೆ. ಒಂದು ವೇಳೆ ಅಗತ್ಯಬಿದ್ದರೆ ಕೇಂದ್ರದಿಂದ ಕೊಡಿಸುವ ಕೆಲಸ ಮಾಡಲಾಗುವುದು. ಇದೀಗ ಚಿಟಗುಪ್ಪಿ ಪಾರ್ಕ್‌ ಮುಂಭಾಗದಿಂದ ಫ್ಲೆ$çಓವರ್‌ ಆರಂಭಿಸಬೇಕು ಎನ್ನುವ ಚರ್ಚೆಗೆ ಭೂಸ್ವಾಧೀನಕ್ಕೆ ನೀಡಬೇಕಾದ ಪರಿಹಾರ ಹಣ ಉಳಿಸುವ ಉದ್ದೇಶವಿಲ್ಲ. ಸಂಚಾರ ದಟ್ಟಣೆ ಕುರಿತು ಪೊಲೀಸ್‌ ಆಯುಕ್ತರು, ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರು, ಬಿಆರ್‌ಟಿಎಸ್‌ ಎಂಡಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಚರ್ಚೆ ಮಾಡುವಂತೆ ತಿಳಿಸಿದ್ದೇನೆ.

ಭೂ ಸ್ವಾಧೀನಕ್ಕೆ ಹೆಚ್ಚಿನ ಹಣ ಬೇಕಾಗಿಲ್ಲ. ಇದಕ್ಕಾಗಿ ಒಂದಿಷ್ಟು ಹಣ ತೆಗೆದಿರಿಸಲಾಗಿದೆ. ಒಂದು ವೇಳೆ ಹಣ ಕಡಿಮೆಯಾದರೆ ಬೇರೆ ಕಡೆಯಿಂದ ಕೊಡಿಸುವುದಾಗಿ ತಿಳಿಸಿದ್ದೇನೆ. ಯೋಜನೆ ಅನುಷ್ಠಾನಗೊಳಿಸುವ ಕಾರ್ಯ ರಾಜ್ಯ ಸರಕಾರದಿಂದ ಆಗಬೇಕು. 15-20 ದಿನಗಳಲ್ಲಿ ಕಾಮಗಾರಿ ಅರಂಭವಾಗಲಿದೆ ಎನ್ನುವ ಮಾಹಿತಿಯಿದೆ ಎಂದು ಹೇಳಿದರು. ಎಸಿ ಡಾ| ಗೋಪಾಲಕೃಷ್ಣ, ತಹಶೀಲ್ದಾರ್‌ ಶಶಿಧರ ಮಾಡ್ಯಾಳ ಇನ್ನಿತರರಿದ್ದರು.

ಟಾಪ್ ನ್ಯೂಸ್

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.