ಕೈದಿಗಳ ಕಲೆ ಪ್ರದರ್ಶನಕ್ಕೆ ಶೀಘ್ರವೇ ವೇದಿಕೆ


Team Udayavani, Oct 7, 2019, 11:06 AM IST

huballi-tdy-2

ಧಾರವಾಡ: ಮುಂದಿನ ದಿನಗಳಲ್ಲಿ ಜಿಲ್ಲಾ ಕೋರ್ಟ್‌ ಆವರಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಕೈದಿಗಳು ತಯಾರಿಸಿರುವ ವಸ್ತುಗಳ ಪ್ರದರ್ಶನ ಮೇಳ ಆಯೋಜಿಸಿ, ಅವರ ಕಲೆಯನ್ನು ಪ್ರೋತ್ಸಾಹಿಸಲಾಗುವುದು ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಈಶಪ್ಪ ಭೂತೆ ಹೇಳಿದರು.

ನಗರದ ಜೈಲು ಆವರಣದ ಕರೆಮ್ಮ ದೇವಸ್ಥಾನ ಆವರಣದಲ್ಲಿ ಧಾರವಾಡ ಕೇಂದ್ರ ಕಾರಾಗೃಹದ ಕೈದಿಗಳು ತಯಾರಿಸಿರುವ ಕರಕುಶಲ ವಸ್ತುಗಳ ಪ್ರದರ್ಶನ ಮಳಿಗೆ ಉದ್ಘಾಟಿಸಿ ಅವರು ಮಾತನಾಡಿದರು. ಕೈದಿಗಳು ರೂಪಿಸಿರುವ ವಿವಿಧ ಗೃಹೋಪಯೋಗಿ ವಸ್ತುಗಳು ಅತ್ಯಂತ ಆಕರ್ಷಕ ಮತ್ತು ಗುಣಮಟ್ಟದ್ದಾಗಿವೆ. ಅವರ ಕಲಾತ್ಮಕತೆ ನೋಡುಗರ ಮನಸ್ಸಿಗೆ ಸಂತೋಷ ಉಂಟು ಮಾಡುತ್ತದೆ ಎಂದರು.

ಸೃಜನಶೀಲ ಕಾರ್ಯ ಚಟುವಟಿಕೆಗಳು ಮಾನಸಿಕ ಪರಿವರ್ತನೆ ಹಾಗೂ ನೆಮ್ಮದಿಗೆ ಸಹಕಾರಿ. ಬಂಧಿಖಾನೆ ಕೈದಿಗಳು ಕರಕುಶಲ ವಸ್ತುಗಳ ತಯಾರಿಕೆ ಹಾಗೂ ಕಥೆ, ಕವನ, ಚುಟುಕು ಕವನಗಳನ್ನು ಬರೆಯುವುದರಿಂದ ಅವರ ಮಾನಸಿಕ ಪರಿವರ್ತನೆ ಆಗಿ ಜೀವನದಲ್ಲಿ ಆಶಾಭಾವ ಮೂಡುತ್ತದೆ. ಇದಲ್ಲದೇ ಕೈದಿಗಳಿಗೆ ಮಠ, ಮಂದಿರ, ಚರ್ಚ್‌, ದೇವರಮೂರ್ತಿ, ಶಿವಲಿಂಗ ಮುಂತಾದವುಗಳನ್ನು ಮಾಡಲು ಅವಕಾಶ ನೀಡುವುದರಿಂದ ಅವರಲ್ಲಿ ಆಧ್ಯಾತ್ಮ, ಧ್ಯಾನ ಮತ್ತು ಸಮಾಜದ ಬಗ್ಗೆ ಒಲವು ಮೂಡುತ್ತದೆ ಎಂದು ಹೇಳಿದರು.

ಕೈದಿಗಳಲ್ಲಿ ಕೀಳರಿಮೆ ಉಂಟಾಗಿ ಅವರಲ್ಲಿ ಜಿಗುಪ್ಸೆ, ನಿರಾಶಾಭಾವ ಮೂಡುವ ಸಾಧ್ಯತೆ ಇರುತ್ತದೆ. ಅವರ ಸುಧಾರಣೆಗಾಗಿ ಜೈಲುವಾಸದ ಶಿಕ್ಷೆ ನೀಡಿದರೂ ಸಹ, ಅವರಲ್ಲಿ ಜೀವನದ ಹೊಸ ಆಶಾಭಾವ ಮೂಡಲು ಸೃಜನಾತ್ಮಕವಾದ ಕ್ರಿಯಾಶೀಲ ಕಾರ್ಯಚಟುವಟಿಕೆಗಳಲ್ಲಿ ಅವರಿಗೆ ತೊಡಗಿಸಿಕೊಳ್ಳಲು ಅವಕಾಶ ಮಾಡಿಕೊಡಬೇಕು.

ಅವರ ಆಸಕ್ತಿ ಕ್ಷೇತ್ರಗಳಲ್ಲಿ ಮುಕ್ತವಾಗಿ ತೊಡಗಿಕೊಳ್ಳಲು ಪ್ರೋತ್ಸಾಹಿಸಬೇಕು ಎಂದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಿಶೋರ ಬಾಬುಮಾತನಾಡಿ, ಕೈದಿಗಳು ರೂಪಿಸಿರುವ ಪ್ರತಿಯೊಂದು ಕರಕುಶಲ ವಸ್ತುಗಳು ಸುಂದರವಾಗಿವೆ. ಅವುಗಳಿಗೆ ಮಾರುಕಟ್ಟೆ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.

ಕೇಂದ್ರ ಕಾರಾಗೃಹದ ಅಧೀಕ್ಷಕಿ ಡಾ| ಅನಿತಾ ಆರ್‌. ಮಾತನಾಡಿ, ಕಳೆದ ಒಂದು ತಿಂಗಳಿಂದ 5 ಜನ ಮಹಿಳಾ ಹಾಗೂ 15 ಜನ ಪುರುಷ ಕೈದಿಗಳು ಜೈಲು ಆವರಣದಲ್ಲಿ ಲಭ್ಯವಿರುವ ಅನುಪಯುಕ್ತ ಹಾಗೂ ಉಪಯೋಗಿಸಿ ಬಿಟ್ಟ ವಸ್ತುಗಳನ್ನು ಬಳಸಿ ವಿವಿಧ ರೀತಿಯ ಗೃಹೋಪಯೋಗಿ ಕರಕುಶಲ ವಸ್ತುಗಳನ್ನು ತಯಾರಿಸಿದ್ದಾರೆ. ಧಾರವಾಡ ಕೇಂದ್ರ ಕಾರಾಗೃಹದಲ್ಲಿರುವ ಕೈದಿಗಳಿಗೆ ಅವರ ಆಸಕ್ತಿ, ಕಲೆಗಳನ್ನು ಪ್ರದರ್ಶಿಸಲು ಮುಕ್ತ ಅವಕಾಶ ನೀಡಿ, ವಸ್ತುಗಳನ್ನು ತಯಾರಿಸಲು ಅವರಿಗೆ ಅಗತ್ಯವಿರುವ ಪರಿಕರಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಹಿರಿಯ ಸಿವಿಲ್‌ ನ್ಯಾಯಾಧಿಧೀಶ ಚಿಣ್ಣನ್ನವರ ಆರ್‌.ಎಸ್‌. ಸೇರಿದಂತೆ ಕೇಂದ್ರ ಕಾರಾಗೃಹದ ಅಧಿಕಾರಿಗಳು, ಸಿಬ್ಬಂ ದಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.