ಸಮಾಜದ ಹಿತಕ್ಕಾಗಿ ಒಂದೆಜ್ಜೆ ಮುಂದಿಡಿ: ಬಸವರಾಜ ಹೊರಟ್ಟಿ
Team Udayavani, Nov 2, 2017, 7:45 AM IST
ಹುಬ್ಬಳ್ಳಿ: “ಲಿಂಗಾಯತ ಸ್ವತಂತ್ರ ಧರ್ಮದ ಹೋರಾಟ ಯಾರಧ್ದೋ ವಿರುದ್ಧ ಅಥವಾ ಯಾರಧ್ದೋ ಪ್ರತಿಷ್ಠೆಯ ವಿಷಯವಲ್ಲ. ಬದಲಾಗಿ ಸಮಾಜದ ಸರ್ವತೋಮುಖ ಹಿತಾಸಕ್ತಿಯ ಪ್ರತೀಕವಾಗಿದ್ದು, ಲಿಂಗಾಯತ ಪ್ರತ್ಯೇಕ ಧರ್ಮ ಪ್ರಸ್ತಾವನೆ ಸಲ್ಲಿಕೆ ನಿಟ್ಟಿನಲ್ಲಿ ಅಖೀಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಒಂದು ಹೆಜ್ಜೆ ಮುಂದಿಡಲಿ’ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ.
ಈ ಕುರಿತು ಶಾಮನೂರು ಶಿವಶಂಕರಪ್ಪ ಅವರಿಗೆ ಪತ್ರ ಬರೆದಿರುವ ಅವರು, ವೀರಶೈವ-ಲಿಂಗಾಯತ ಎಂದು ಸ್ವತಂತ್ರ ಧರ್ಮಕ್ಕೆ 2013ರಲ್ಲಿ ಸಲ್ಲಿಸಿದ್ದ ಪ್ರಸ್ತಾವನೆಗೆ ಮನ್ನಣೆ ಸಿಕ್ಕಿಲ್ಲವಾಗಿದೆ. ಸಮಾಜಕ್ಕೆ ಉತ್ತಮ ಸೌಲಭ್ಯ ಸಿಗುವ ನಿಟ್ಟಿನಲ್ಲಿ ಒಮ್ಮೆ ಯಾಕೆ “ಲಿಂಗಾಯತ’ ಎಂದಷ್ಟೇ ಪ್ರಸ್ತಾವನೆ ಸಲ್ಲಿಸಿ ಸ್ವತಂತ್ರ ಧರ್ಮದ ಬೇಡಿಕೆ ಮಂಡಿಸಬಾರದು ಎಂದು ಪ್ರಶ್ನಿಸಿದ್ದಾರೆ.
ಸ್ವತಂತ್ರ ಧರ್ಮದ ವಿಚಾರದಲ್ಲಿ ನನಗೆ ಹಾಗೂ ತಮಗೆ ಯಾವುದೇ ರಾಜಕೀಯ ಲಾಭದ ಉದ್ದೇಶ ಅಥವಾ ವೈಯಕ್ತಿಕ ಹಿತಾಸಕ್ತಿ ಯಂತೂ ಇಲ್ಲವೇ ಇಲ್ಲ. ಅದೇನಿದ್ದರೂ ಸಮಾಜದ ಸರ್ವತೋಮುಖ ಹಿತಾಸಕ್ತಿಯದ್ದಾಗಿದ್ದು, ಈ ಬಗ್ಗೆ ಚಿಂತಿಸಿ ನಿರ್ಧಾರ ಕೈಗೊಳ್ಳಿ ಎಂದು ಹೊರಟ್ಟಿ ಪತ್ರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ