ರೈತರಿಂದ 10 ಕ್ವಿಂಟಲ್ ಹೆಸರು ಖರೀದಿಗೆ ಒತ್ತಾಯ
Team Udayavani, Oct 6, 2018, 9:38 AM IST
ಹುಬ್ಬಳ್ಳಿ: ಈ ಮೊದಲು ನಿಗದಿಪಡಿಸಿದ್ದ 10 ಕ್ವಿಂಟಲ್ ಪ್ರಮಾಣದ ಹೆಸರು ಕಾಳನ್ನು ರಾಜ್ಯ ಸರಕಾರ ಪ್ರತಿ ರೈತರಿಂದ ಬೆಂಬಲ ಬೆಲೆಯಡಿ ಕೂಡಲೇ ಖರೀದಿಸಲು ಮುಂದಾಗಬೇಕೆಂದು ಸಂಸದ ಪ್ರಹ್ಲಾದ ಜೋಶಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆದಿರುವ ಅವರು, ರಾಜ್ಯದ 9 ಜಿಲ್ಲೆಗಳಲ್ಲಿ ಬೆಳೆದ ಹೆಸರನ್ನು ಬೆಂಬಲ ಬೆಲೆಯಡಿ ಖರೀದಿಸಲು ಕೇಂದ್ರ ಸರಕಾರ ಅನುಮತಿ ನೀಡಿದೆ. ರಾಜ್ಯ ಸರಕಾರ ದ್ವಂದ್ವ ನಿಲುವಿನ ಅಂಕಿ-ಸಂಖ್ಯೆಗಳ ಕಾರಣದಿಂದ ಖರೀದಿ ಪ್ರಮಾಣದಲ್ಲಿ ವ್ಯತ್ಯಾಸ ಉಂಟಾಗಿತ್ತು. ರಾಜ್ಯದ ಮಂತ್ರಿಗಳು, ಸಂಸದರು, ಶಾಸಕರ ನಿಯೋಗ ಕೇಂದ್ರ ಸರಕಾರದ ಕೃಷಿ ಮಂತ್ರಿಗಳನ್ನು ಭೇಟಿಯಾಗಿ ಹೆಸರು ಖರೀದಿ ಪ್ರಮಾಣ ಹೆಚ್ಚಿಸುವಂತೆ ಕೋರಿದ್ದರು. ಅವರ ಅಧಿಕಾರ ವ್ಯಾಪ್ತಿಗೆ ಬರುವ ಗರಿಷ್ಠ ಪ್ರಮಾಣ ಅಂದರೆ 36 ಸಾವಿರ ಮೆಟ್ರಿಕ್ ಟನ್ ಖರೀದಿಗೆ ಅವಕಾಶ ನೀಡಿದ್ದಾರೆ. ಈ ಪ್ರಮಾಣದಲ್ಲಿ ಖರೀದಿಸಿ ಇನ್ನು ಹೆಚ್ಚಿನ ಪ್ರಮಾಣಕ್ಕೆ ಬೇಡಿಕೆ ಸಲ್ಲಿಸಿದಲ್ಲಿ ಅದಕ್ಕೂ ಒಪ್ಪಿಗೆ ನೀಡುವುದಾಗಿ ಕೇಂದ್ರ ಸರಕಾರ ತಿಳಿಸಿದೆ. ಆದರೂ ರಾಜ್ಯ ಸರಕಾರ ಯಾಕೆ ಕಾಲಹರಣ ಮಾಡುತ್ತಿದೆ ಹಾಗೂ ಖರೀದಿ ಪ್ರಮಾಣದಲ್ಲಿ ಇಳಿಕೆ ಮಾಡಲಾಗುತ್ತಿದೆ ಎಂದು ಜೋಶಿ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…