ಮಾಜಿ ಮೇಯರ್‌ ಮೇಸ್ತ್ರಿ ಬಂಧನ

•ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಕುಟುಂಬವೊಂದರ ಮೇಲೆ ಹಲ್ಲೆ; ನಾಲ್ವರ ಸೆರೆ-ಜಾಮೀನಿನ ಮೇಲೆ ಬಿಡುಗಡೆ

Team Udayavani, Jun 16, 2019, 9:44 AM IST

Udayavani Kannada Newspaper

ಹುಬ್ಬಳ್ಳಿ: ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕುಟುಂಬವೊಂದರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಕಮರಿಪೇಟೆ ಪೊಲೀಸರು ಮಾಜಿ ಮಹಾಪೌರ ವೆಂಕಟೇಶ ಮೇಸ್ತ್ರಿ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.

ಜಾಗೆಯ ವಿಷಯವಾಗಿ ಮಾಜಿ ಮಹಾಪೌರ ವೆಂಕಟೇಶ ಮೇಸ್ತ್ರಿ ಹಾಗೂ ಸಹಚರರು ಶುಕ್ರವಾರ ದೇವೇಂದ್ರಪ್ಪ ಆಲಕುಂಟೆ ಕುಟುಂಬದವರ ಮೇಲೆ ಲಾಂಗು, ಮಚ್ಚು, ತಲ್ವಾರ್‌, ಕ್ರಿಕೆಟ್ ಬ್ಯಾಟ್‌ಗಳಿಂದ ಹಲ್ಲೆ ಮಾಡಿದ್ದರು. ಈ ಸಂದರ್ಭದಲ್ಲಿ ನಾಲ್ವರು ತೀವ್ರ ಗಾಯಗೊಂಡಿದ್ದರು. ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳಿಗೆ ಹಾನಿಗೊಳಿಸಿದ್ದರು. ಈ ಕೃತ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು. ಘಟನೆಗೆ ಸಂಬಂಧಿಸಿ ನಿಂಗರಾಜ ಇಂಗಳಹಳ್ಳಿ ಅವರು ವೆಂಕಟೇಶ ಮೇಸ್ತ್ರಿ ಸೇರಿದಂತೆ ಎಂಟು ಜನರ ವಿರುದ್ಧ ಕಮರಿಪೇಟೆ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಪೊಲೀಸರು ವೆಂಕಟೇಶ ಮೇಸ್ತ್ರಿ, ದೇವರಾಜ ಬಿ. ಬಿಸನಳ್ಳಿ, ವಿನಾಯಕ ಬಿಸನಳ್ಳಿ ಎಂಬುವರನ್ನು ಬಂಧಿಸಿ, ನಂತರ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ಚಿಕಿತ್ಸೆ ಫಲಿಸದೆ ಇಬ್ಬರ ಸಾವು:

ರೈಲ್ವೆ ನಿಲ್ದಾಣದಲ್ಲಿ ಹಾಗೂ ರೈಲಿನ ಬೋಗಿಯಲ್ಲಿ ಪ್ರತ್ಯೇಕವಾಗಿ ಪ್ರಜ್ಞಾಹೀನವಾಗಿ ಬಿದ್ದಿದ್ದ ವ್ಯಕ್ತಿಗಳಿಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇಲ್ಲಿನ ರೈಲ್ವೆ ನಿಲ್ದಾಣದ ಪ್ಲಾಟ್ಫಾರ್‌ಂನಲ್ಲಿ ಗುರುವಾರ ಪ್ರಜ್ಞಾಹೀನವಾಗಿದ್ದ ಬಿದ್ದಿದ್ದ ಸುಮಾರು 45 ವರ್ಷದ ಸುರೇಶ ಎಂಬುವರನ್ನು ರೈಲ್ವೆ ಪೊಲೀಸರು ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಿಸದೆ ಶುಕ್ರವಾರ ಮೃತಪಟ್ಟಿದ್ದಾರೆ. ಮೃತರು 5ಅಡಿ 6 ಅಂಗುಲ ಎತ್ತರ, ಗೋಧಿಗೆಂಪು ಮೈಬಣ್ಣ, ಸಾಧಾರಣ ಶರೀರ, ಕೋಲು ಮುಖ, ನೇರ ಮೂಗು ಹೊಂದಿದ್ದಾರೆ. ಅದೇರೀತಿ ಧಾರವಾಡ ರೈಲ್ವೆ ನಿಲ್ದಾಣಕ್ಕೆ ಶುಕ್ರವಾರ ಬಂದಿದ್ದ ರಾಣಿ ಚನ್ನಮ್ಮ ರೈಲಿನ ಎಸ್‌2 ಬೋಗಿಯಲ್ಲಿ ಸುಮಾರು 50 ವರ್ಷದವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಅವರನ್ನು ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಿದ್ದಾಗ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ. 5ಅಡಿ 3 ಅಂಗುಲ ಎತ್ತರ, ಗೋಧಿಗೆಂಪು ಮೈಬಣ್ಣ, ಸಾಧಾರಣ ಶರೀರ, ಗುಂಡು ಮುಖ, ದಪ್ಪ ಮೂಗು ಹೊಂದಿದ್ದಾರೆ. ಶವಗಳನ್ನು ಕಿಮ್ಸ್‌ ಆಸ್ಪತ್ರೆ ಶವಾಗಾರದಲ್ಲಿ ಕಾಯ್ದಿರಿಸಲಾಗಿದೆ. ವಾರಸುದಾರರು ಹುಬ್ಬಳ್ಳಿ ರೈಲ್ವೆ ಪೊಲೀಸ್‌ ಠಾಣೆ ದೂ: 2364751 ಸಂಪರ್ಕಿಸಬಹುದೆಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.