ಮಾಜಿ ಸಚಿವ ಜಬ್ಬಾರಖಾನ್ ಹೊನ್ನಳ್ಳಿ ನಿಧನ
Team Udayavani, Oct 7, 2022, 9:37 AM IST
ಹುಬ್ಬಳ್ಳಿ: ಮಾಜಿ ಸಚಿವ, ಅಂಜುಮನ್ ಇಸ್ಲಾಂ ಸಂಸ್ಥೆಯ ಮಾಜಿ ಅಧ್ಯಕ್ಷ ಜಬ್ಬಾರಖಾನ ಹೊನ್ನಳ್ಳಿ (75) ಶುಕ್ರವಾರ ಬೆಳಗ್ಗೆ ನಿಧನರಾದರು.
ಕೇಶ್ವಾಪುರ ನಿವಾಸಿಯಾದ ಹೊನ್ನಳ್ಳಿಯವರು ರಾಜಕೀಯಕ್ಕೆ ಬರುವ ಮುಂಚೆ ಶಿಕ್ಷಕರಾಗಿದ್ದರು. ಜನತಾ ದಳದಲ್ಲಿ ಗುರುತಿಸಿಕೊಂಡಿದ್ದ ಇವರು ಎಸ್.ಆರ್. ಬೊಮ್ಮಾಯಿ ಅವರ ಆಡಳಿತಾವಧಿಯಲ್ಲಿ ಮೊದಲ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿದ್ದರು. ಆನಂತರ 1999, 2007ರಲ್ಲಿ ಶಾಸಕರಾಗಿ ಆಯ್ಕೆಯಾದರು. ಧರ್ಮಸಿಂಗ್ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದರು. 1996ರಿಂದ 2019ರ ವರೆಗೆ ಸುದೀರ್ಘ ಕಾಲ ಅಂಜುಮನ್ ಸಂಸ್ಥೆಯ ಅಧ್ಯಕ್ಷರಾಗಿದ್ದರು.
2018ರಲ್ಲಿ ಅವರ ಆರೋಗ್ಯದಲ್ಲಿ ಸಮಸ್ಯೆ ಕಂಡುಬಂದು ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದರು. ಇದೇ ಸಂದರ್ಭದಲ್ಲಿ ಪಾರ್ಶ್ವವಾಯು ಪೀಡಿತರಾಗಿದ್ದರು. ಅಂದಿನಿಂದ ಅವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ವರ್ಷಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು ಬೆಳಗ್ಗೆ 6:45 ಗಂಟೆ ಸುಮಾರಿಗೆ ಇಲ್ಲಿನ ಗೋಕುಲ ರಸ್ತೆಯ ಕೆಎಲ್ ಇ ಶುಚಿರಾಯು ಆಸ್ಪತ್ರೆಯಲ್ಲಿ ವಿಧಿವಶರಾದರು.
ಇವರ ಅಂತ್ಯಕ್ರಿಯೆಯು ಇಂದು ಸಂಜೆ 7:00 ಗಂಟೆಗೆ ಗವಿ ಗಲ್ಲಿಯ ಬಡೇ ಖಬರಸ್ತಾನದಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಕಂಠೀರವದಲ್ಲಿ ಪ್ರೊ ಕಬಡ್ಡಿ ಕಲರವ : ಬೆಂಗಳೂರಿನಲ್ಲಿ ಇಂದಿನಿಂದ ಪ್ರೊ ಕಬಡ್ಡಿ ಸೀಸನ್-9
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ