20ರಿಂದ ಕವಿಸಂ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ


Team Udayavani, Jul 18, 2018, 4:33 PM IST

18-july-16.jpg

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘದ 129ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಜು. 20ರಿಂದ ಏಳು ದಿನಗಳ ಕಾಲ ನಾಟ್ಯ, ಸಂಗೀತ, ಹಾಸ್ಯ, ಜಾನಪದ, ನೃತ್ಯ, ಸಾಂಸ್ಕೃತಿಕ, ನಾಟಕ, ಗೀತ ಗಾಯನ ಸಂಜೆ ಹಾಗೂ ಹಿರಿಯ
ಸದಸ್ಯರಿಗೆ ಗೌರವಾರ್ಪಣೆ ಕಾರ್ಯಕ್ರಮಗಳು ನಡೆಯಲಿವೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಾಶ ಉಡಿಕೇರಿ ಹೇಳಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿದಿನ ಸಂಜೆ 5:30ರಿಂದ ಕಾರ್ಯಕ್ರಮಗಳು ಶುರುವಾಗಲಿದ್ದು, ಎಲ್ಲ ಕಾರ್ಯಕ್ರಮಗಳಿಗೆ ನಾಡೋಜ ಡಾ|ಪಾಟೀಲ ಪುಟ್ಟಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಜು. 20ರ ಸಂಜೆ 5:30 ಗಂಟೆಗೆ ಸಂಸ್ಥಾಪನಾ ದಿನವನ್ನು ತೋಂಟದಾರ್ಯ ಮಠದ ಸಿದ್ಧಲಿಂಗ ಶ್ರೀಗಳು ಉದ್ಘಾಟಿಸಲಿದ್ದಾರೆ. ಅಂದು ನಾಟ್ಯ-ಸಂಗೀತ ಸಂಜೆಯನ್ನು ಲಕ್ಷ್ಮೀ  ಜಾಧವ, ಮೇಘಾ ಹುಕ್ಕೇರಿ ಹಾಗೂ ಸಾಕ್ಷಿ ಹುಕ್ಕೇರಿ ನಡೆಸಿಕೊಡುತ್ತಾರೆ. ಎಸ್‌.ಬಿ. ಗುತ್ತಲ, ಉಷಾಮೂರ್ತಿ, ರಮಾಕಾಂತ ಜೋಶಿ, ಕೃಷ್ಣ ಜೋಶಿ ಹಾಗೂ ಸಿ.ಜಿ. ಹಿರೇಮಠ ಅವರನ್ನು ಸನ್ಮಾನಿಸಲಾಗುವುದು ಎಂದರು.

21ರಂದು ಹಿರಿಯ ವಿದ್ವಾಂಸ ಡಾ|ಗುರುಲಿಂಗ ಕಾಪಸೆ ಹಾಗೂ ವಿಶ್ರಾಂತ ಪ್ರಾಧ್ಯಾಪಕ ಪ್ರೊ|ಸಿ.ವಿ. ಕೆರೆಮನಿ ತಮ್ಮ ಅನಿಸಿಕೆ ಹಂಚಿಕೊಳ್ಳಲಿದ್ದಾರೆ. ನಂತರ ಮಹಾದೇವ ಸತ್ತಿಗೇರಿ, ಮಲ್ಲಪ್ಪ ಹೊಂಗಲ ಹಾಗೂ ಡಾ|ರಾಜಶೇಖರ ಬಶೆಟ್ಟಿ ಅವರಿಂದ ಹಾಸ್ಯ ಸಂಜೆ ನಡೆಯಲಿದೆ. ಡಾ|ಬಿ.ವಿ. ಮಲ್ಲಾಪುರ, ಶಿವಶಂಕರ ಹಿರೇಮಠ, ಎಂ.ಸಿ. ಬಂಡಿ, ಎಂ.ಆರ್‌. ಸತ್ಯನಾರಾಯಣ ಹಾಗೂ ಡಾ|ಸುಲೋಚನಾ ಮಟ್ಟಿ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

22ರಂದು ಪದ್ಮಭೂಷಣ ಡಾ|ಎಂ. ಮಹದೇವಪ್ಪ ಹಾಗೂ ಜಾನಪದ ವಿವಿ ಕುಲಪತಿ ಡಾ|ಡಿ.ಬಿ. ನಾಯಕ ಅನಿಸಿಕೆ ಹಂಚಿಕೊಳ್ಳಲಿದ್ದಾರೆ. ಜಾನಪದ ಸಂಜೆಯಲ್ಲಿ ಮಹಾಂತೇಶ ವಾಲಿ ಹಾಗೂ ಯಕ್ಕೇರಪ್ಪ ನಡುವಿನಮನಿ ಪಾಲ್ಗೊಳ್ಳಲಿದ್ದಾರೆ. ಪ್ರೊ| ಕೆ.ಎಸ್‌. ಶರ್ಮಾ, ವಿ.ಜಿ. ದೀಕ್ಷಿತ, ಗಿರೀಶ ಕುಲಕರ್ಣಿ, ಈಶ್ವರ ಕಮ್ಮಾರ ಹಾಗೂ ಜಯಶೀಲಾ ಬೆಳಲದವರ ಅವರನ್ನು ಗೌರವಿಸಲಾಗುವುದು ಎಂದರು.

23ರಂದು ಕೇಂದ್ರೀಯ ವಿವಿ ಕುಲಪತಿ ಡಾ|ಎಚ್‌.ಎಂ. ಮಹೇಶ್ವರಯ್ಯ ಹಾಗೂ ಛಾಯಾಗ್ರಾಹಕ ಶಶಿ ಸಾಲಿ ಅಭಿಪ್ರಾಯ ಮಂಡಿಸುತ್ತಾರೆ. ನೃತ್ಯ ಸಂಜೆಯಲ್ಲಿ ಭಾರತೀಯ ನೃತ್ಯ ಅಕಾಡೆಮಿಯ ರಾಜು ಟೊಣಪಿ ಹಾಗೂ ಕಲಾವಿದರಾದ ಅಂಕಿತಾ ರಾವ್‌ ಪಾಲ್ಗೊಳ್ಳಲಿದ್ದಾರೆ. ಡಾ| ಎನ್‌.ಎಸ್‌. ಹಿರೇಮಠ, ಜ್ಯೋತಿ ಹೂಸೂರ, ಪ್ರೊ|ಸಿ.ಆರ್‌. ಯರವಿನತಲಿಮಠ, ರಂಜನಾ ನಾಯಕ ಹಾಗೂ ಡಾ|ಅಜಿತ ಪ್ರಸಾದ ಅವರನ್ನು ಗೌರವಿಸಲಾಗುವುದು ಎಂದು ತಿಳಿಸಿದರು.

24ರಂದು ಅನೇಕ ಕಾರ್ಯಕ್ರಮಗಳು ನಡೆಯಲಿದ್ದು, 25ರಂದು ವಿಶ್ರಾಂತ ಕುಲಪತಿ ಡಾ|ಎ. ಮುರಿಗೆಪ್ಪ ಹಾಗೂ ಭಾರತದ ಸಹಾಯಕ ಸಾಲಿಸಿಟರ್‌ ಜನರಲ್‌ ಕೆ.ಬಿ. ನಾವಲಗಿಮಠ ಅನಿಸಿಕೆ ಹಂಚಿಕೊಳ್ಳುವರು. ನಂತರ ನಡೆಯಲಿರುವ ನಾಟಕ ಸಂಜೆಯಲ್ಲಿ ಡಾ| ಗೋವಿಂದ ಮಣ್ಣೂರ ರಚಿಸಿದ ಚನ್ನಬಸಪ್ಪ ಕಾಳೆ ನಿರ್ದೇಶನದಲ್ಲಿ ಕಳ್ಳರು ಮಹಾಕಳ್ಳರು ನಾಟಕವಿದೆ. ಎಸ್‌.ಬಿ. ಮಾದನಬಾವಿ, ಸುರೇಶ ಹಾಲಭಾವಿ, ಎಸ್‌.ಜಿ. ಪಾಟೀಲ, ಪಾರ್ವತಿ ಆರಟ್ಟಿ ಹಾಗೂ ಎಂ.ಎಲ್‌. ಟೊಣಪಿ ಅವರನ್ನು ಸನ್ಮಾನಿಸಲಾಗುವುದು ಎಂದರು.

26ರಂದು ಸಮಾರೋಪ ನಡೆಯಲಿದ್ದು, ಡಾ|ಪಾಟೀಲ ಪುಟ್ಟಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶ್ರಾಂತ ಕುಲಪತಿ ಡಾ|ಎಂ.ಐ. ಸವದತ್ತಿ ಪಾಲ್ಗೊಳ್ಳಲಿದ್ದು, ಅಂದು ಗೀತ ಗಾಯನ ಸಂಜೆಯನ್ನು ಬಿ.ಐ. ಈಳಿಗೇರ ನಡೆಸಿಕೊಡಲಿದ್ದಾರೆ. ಸಂಘದ ನೂತನ ಗೌರವ ಉಪಾಧ್ಯಕ್ಷರನ್ನು ಗೌರವಿಸಲಾಗುವುದು ಎಂದರು. 

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.