ಪ್ರೀತಿಗೆ ಎದುರಾಗಿದ್ದಕ್ಕೆ ಉಸಿರಡಗಿಸಿದ ಕಿರಾತಕರು

­ರುಂಡ-ಮುಂಡ ಒಬ್ಬನದ್ದೇ! ­ರಾಕೇಶ ಕಾಟವೆ ಮೃತವ್ಯಕ್ತಿ! ­ಹುಬ್ಬಳ್ಳಿ ಮೂಲದ ನಾಲ್ವರ ಸೆರೆ

Team Udayavani, Apr 19, 2021, 8:03 PM IST

hfgtryhr

ಧಾರವಾಡ: ಕೆಲ ದಿನಗಳ ಹಿಂದೆ ಹುಬ್ಬಳ್ಳಿ ತಾಲೂಕಿನ ದೇವರಗುಡಿಹಾಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ರುಂಡ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿ, ತನಿಖೆ ಮುಂದುವರಿಸಲಾಗಿದೆ ಎಂದು ಎಸ್‌ಪಿ ಪಿ.ಕೃಷ್ಣಕಾಂತ ಹೇಳಿದರು.

ನಗರದಲ್ಲಿ ರವಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸಹೋದರಿಯನ್ನು ಪ್ರೀತಿಸುತ್ತಿದ್ದಾನೆ ಎಂಬ ಕಾರಣಕ್ಕೆ ಗದರಿಸುತ್ತಿದ್ದ ಅಣ್ಣನನ್ನು, ಪ್ರಿಯಕರ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಹತ್ಯೆ ಮಾಡಿರುವ ಪ್ರಕರಣ ಇದಾಗಿದೆ. ನಿಯಾಜ್‌ ಅಹ್ಮದ್‌ ಸೈಪುದ್ದೀನ್‌ ಕಟಿಗಾರ (21), ತೌಸೀಫ್‌ ಚನ್ನಾಪುರ (21), ಅಲ್ತಾಫ್‌ ಮುಲ್ಲಾ (24) ಹಾಗೂ ಅಮನ್‌ ಉರ್ಫ್‌ ಮಹ್ಮದ ಉಮರ್‌ ಗಿರಣಿವಾಲೆ (19) ಎಂಬುವರನ್ನು ಬಂಧಿಸಲಾಗಿದೆ ಎಂದರು.

ಹುಬ್ಬಳ್ಳಿ ತಾಲೂಕಿನ ದೇವರಗುಡಿಹಾಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ರುಂಡ ಪತ್ತೆಯಾಗಿತ್ತು. ರುಂಡ ನೋಡಿದ್ದ ಗ್ರಾಮಸ್ಥರು ಪೊಲೀಸರಿಗೆ ವಿಷಯ ತಿಳಿಸಿದ್ದರು. ರುಂಡವನ್ನು ಸುಟ್ಟು ಹಾಕಿದ್ದರಿಂದ ಪೊಲೀಸರು ಅದನ್ನು ಕಿಮ್ಸ್‌ ಆಸ್ಪತ್ರೆಗೆ ರವಾನಿಸಿ ಪರೀಕ್ಷೆಗೆ ಕಳಹಿಸಿದ್ದರು. ಇಷ್ಟರಲ್ಲೇ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ರುಂಡವಿಲ್ಲದ ಕೈ, ಕಾಲುಗಳಿಲ್ಲದ ಮುಂಡ ಸಿಕ್ಕಿತ್ತು. ಇದೂ ಅರೆಬೆಂದ ದೇಹವಾಗಿತ್ತು. ಕೂಡಲೇ ಕೇಶ್ವಾಪುರ ಪೊಲೀಸರು ಹುಬ್ಬಳ್ಳಿ ಗ್ರಾಮೀಣ ಪೊಲೀಸರಿಗೆ ವಿಷಯ ತಿಳಿಸಿದ್ದರು. ಆಗ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತಂಡ ರಚಿಸಿ ತನಿಖೆ ಕೈಗೊಳ್ಳಲಾಗಿತ್ತು ಎಂದು ಹೇಳಿದರು.

ತನಿಖಾಧಿಕಾರಿಗಳ ನಿರಂತರ ವಿಚಾರಣೆಯಿಂದ ಮೃತ ವ್ಯಕ್ತಿ ರಾಕೇಶ ಕಾಟವೆ ಎಂದು ಗುರುತಿಸಲಾಗಿದೆ. ಈತನನ್ನು ಕೊಲೆ ಮಾಡಿದ ಹುಬ್ಬಳ್ಳಿ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಇದರಲ್ಲಿ 1ನೇ ಆರೋಪಿ ನಿಯಾಜ್‌ ಅಹ್ಮದ್‌ ಕಟಿಗಾರನು ಮೃತ ರಾಕೇಶ ಕಾಟವೆಯ ಸಹೋದರಿಯನ್ನು ಪ್ರೀತಿಸುತ್ತಿದ್ದ. ಹೀಗಾಗಿ ರಾಕೇಶನು ನಿಯಾಜ್‌ ಅಹ್ಮದನಿಗೆ ಗದರಿಸಿದ್ದಾನೆ. ಇದರಿಂದ ಕೋಪಗೊಂಡ ನಿಯಾಜ್‌ ಅಹ್ಮದ್‌ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ರಾಕೇಶನನ್ನು ಹತ್ಯೆ ಮಾಡಿ, ಸಾಕ್ಷಿ ನಾಶ ಮಾಡುವ ಉದ್ದೇಶದಿಂದ ಆತನ ಮೃತ ದೇಹದ ರುಂಡ ಮತ್ತು ಮುಂಡವನ್ನು ಬೇರೆ ಬೇರೆಯ ಸ್ಥಳದಲ್ಲಿ ಎಸೆದಿದ್ದಾಗಿ ಆರೋಪಿತರು ತನಿಖೆ ವೇಳೆ ಒಪ್ಪಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

ಡಿವೈಎಸ್‌ಪಿ ಎಂ.ಬಿ. ಸಂಕದ ನೇತೃತ್ವದಲ್ಲಿ ಸಿಪಿಐಗಳಾದ ರಮೇಶ ಗೋಕಾಕ, ಪ್ರಭು ಸೂರಿನ್‌, ಪಿಎಸ್‌ಐಗಳಾದ ಮಹೇಂದ್ರ ನಾಯಕ, ಕಿರಣ ಮೋಹಿತೆ, ಎಸ್‌.ಆರ್‌. ಕಣವಿ, ಚಾಮುಂಡೇಶ್ವರಿ, ಬಸವರಾಜ ಹೂಗಾರ, ಪ್ರೊಬೆಷನರಿ ಪಿಎಸ್‌ಐ ಮಧು ಎಲ್‌., ರೂಪಾಲಿ ಗುಡೋಡಗಿ ಹಾಗೂ ಆರ್‌.ಎಂ. ಭದ್ರಾಪುರ, ಡಿ.ಎನ್‌. ನೀಲಮ್ಮನವರ, ಬಿ.ಎಸ್‌. ಹುಬ್ಬಳ್ಳಿ, ಎನ್‌.ಐ.ಹಿರೆಹೊಳಿ, ಎಚ್‌.ಬಿ. ಐಹೊಳೆ, ಎಂ.ಆರ್‌. ಗೊಲಂದಾಜ್‌, ಎಂ.ಎಫ್‌. ವಾಲೀಕಾರ, ಎಂ.ಎನ್‌. ತಡಹಾಳ, ದೇವರಾಜ ಎಸ್‌.ಎಂ., ಮಹಾಂತೇಶ ನಾನಾಗೌಡ, ಎ.ಎ. ಠಕ್ಕಾಯಿ, ಸಿ.ಬಿ. ಜನಗಣ್ಣವರ, ಎಂ.ಎಫ್‌. ಹೆಳವರ, ಆರ್‌.ಬಿ. ಕುಂದಗೋಳ, ಉದಯಕುಮಾರ, ಮಕುºಲ್‌ ಹುಲ್ಲೂರ, ಎಫ್‌. ಎಚ್‌. ಯಲಿಗಾರ, ವೈ.ಡಿ. ಕುಂಬಾರ, ಡೆವಿಡ್‌ ಕರಬಣ್ಣವರ, ಸಂತೋಷ ಜವಳಿ, ಅಮ್ಜದ್‌ ನವಲೂರ, ಸಿ.ಬಿ. ಮಾಳಗಿ ಅವರನ್ನೊಳಗೊಂಡ ತಂಡ ಆರೋಪಿಗಳ ಸೆರೆ ಕಾರ್ಯಾಚರಣೆ ನಡೆಸಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.